ಆ್ಯಪ್ನಗರ

ಹುಬ್ಬಳ್ಳಿ: ಪಾಕ್‌ ಪರ ಘೋಷಣೆ, ಕಾಶ್ಮೀರಿ ವಿದ್ಯಾರ್ಥಿಗಳಿಗೆ ಜಾಮೀನು

ಪಾಕ್ ಪರ ಘೋಷಣೆ ಕೂಗಿದ್ದ ಮೂವರು ಕಾಶ್ಮೀರಿ ವಿದ್ಯಾರ್ಥಿಗಳಿಗೆ ಹುಬ್ಬಳ್ಳಿ ಜೆಎಂಎಫ್‌ಸಿ 2ನೇ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ. ವಿಡಿಯೊ ವೈರಲ್‌ ಆಗಿದ್ದರಿಂದ ಮೂವರು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದರು.

Vijaya Karnataka Web 12 Jun 2020, 4:15 pm
ಹುಬ್ಬಳ್ಳಿ: ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಮೂವರು ಕಾಶ್ಮೀರಿ ವಿದ್ಯಾರ್ಥಿಗಳಿಗೆ ನಗರದ ಜೆಎಂಎಫ್‌ಸಿ 2ನೇ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ.
Vijaya Karnataka Web hubballi


ನಗರದ ಎಂಜಿನಿಯರಿಂಗ್‌ ಕಾಲೇಜೊಂದರಲ್ಲಿ ಓದುತ್ತಿದ್ದ ಕಾಶ್ಮೀರ ಮೂಲದ ತಾಲಿಬ್‌ ಮಾಜಿದ್‌, ಆರ್ಮಿ ವಾನಿ ಮತ್ತು ಬಾಷಿತ್‌ ಸೋಫಿ ಅವರು ಕಾಲೇಜಿನ ಹಾಸ್ಟೆಲ್‌ನಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿ ವಿಡಿಯೊ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು. ಆ ವಿಡಿಯೊ ವೈರಲ್‌ ಆಗಿದ್ದರಿಂದ ಮೂವರು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿ ದೇಶದ್ರೋಹದ ಪ್ರಕರಣ ದಾಖಲಿಸಿದ್ದರು.

ವಿಡಿಯೊ ಕಾನ್ಫರೆನ್ಸ್‌ ಮೂಲಕ ವಿಚಾರಣೆ ನಡೆಸಿದ ಜೆಎಂಎಫ್‌ಸಿ 2ನೇ ನ್ಯಾಯಾಲಯದ ನ್ಯಾಯಾಧೀಶರು ಆ ಮೂವರು ವಿದ್ಯಾರ್ಥಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದಾರೆ. ಮೂವರು ತಲಾ 1 ಲಕ್ಷ ರೂ. ಬಾಂಡ್‌ ನೀಡಬೇಕು. ಸಾಕ್ಷ್ಯಗಳನ್ನು ನಾಶಪಡಿಸಲು ಪ್ರಯತ್ನಿಸಬಾರದು. ಹುಬ್ಬಳ್ಳಿ ಬಿಟ್ಟು ಬೇರೆಡೆ ಪ್ರಯಾಣಿಸಬಾರದು. ವಿಚಾರಣೆ ಸರಿಯಾಗಿ ಹಾಜರಾಗಬೇಕು ಸೇರಿದಂತೆ ಮತ್ತಿತರರ ಷರತ್ತುಗಳನ್ನು ನ್ಯಾಯಾಲಯ ವಿಧಿಸಿದೆ ಎಂದು ಮೂಲಗಳು ತಿಳಿಸಿವೆ.

ಕಾಶ್ಮೀರಿ ವಿದ್ಯಾರ್ಥಿಗಳ ದೇಶದ್ರೋಹ ಪ್ರಕರಣ, ನಿರ್ಣಯ

ಅಧಿಕಾರಿ ಅಮಾನತಿಗೆ ಆಗ್ರಹ:
ಇನ್ನೊಂದಡೆ ಮೂವರು ಕಾಶ್ಮೀರಿ ವಿದ್ಯಾರ್ಥಿಗಳಿಗೆ ಜಾಮೀನು ಸಿಗಲು ಸ್ಥಳೀಯ ಪೊಲೀಸರ ನಿರ್ಲಕ್ಷ್ಯ ಕಾರಣ ಎಂದು ಯುವ ವಕೀಲರ ಸಂಘದ ರಾಜ್ಯ ಗೌರವಾಧ್ಯಕ್ಷ ಅಶೋಕ ಅಣ್ವೇಕರ ಆರೋಪಿಸಿದ್ದಾರೆ.

ಹುಬ್ಬಳ್ಳಿ ದೇಶದ್ರೋಹ ಪ್ರಕರಣ: ವಕೀಲರ ಸಂಘದ ನಿರ್ಣಯಕ್ಕೆ

''ಪ್ರಕರಣ ದಾಖಲಿಸಿದ ಹುಬ್ಬಳ್ಳಿ ಗ್ರಾಮೀಣ ಪೊಲೀಸ್‌ ಠಾಣೆ ಪೊಲೀಸರು ಆರೋಪಿಗಳ ವಿರುದ್ಧ 90 ದಿನಗಳಲ್ಲಿಚಾಜ್‌ರ್‍ಶೀಟ್‌ ಸಲ್ಲಿಸಬೇಕಿತ್ತು. ಆದರೆ, 109 ದಿನಗಳ ನಂತರ ಸಲ್ಲಿಸಿದ್ದಾರೆ. ಈ ಕಾರಣದಿಂದ ಜಾಮೀನು ಸಿಕ್ಕಿದೆ'' ಎಂದು ಹೇಳಿದ್ದಾರೆ.

ಪಾಕ್‌ ಪರ ಘೋಷಣೆ, ಆರೋಪಿಗಳು ಪೊಲೀಸ್‌ ಕಸ್ಟಡಿಗೆ

''ಕರ್ತವ್ಯಲೋಪ ಮಾಡಿರುವ ಪೊಲೀಸ್‌ ಅಧಿಕಾರಿಯನ್ನು ಅಮಾನತು ಮಾಡಬೇಕು'' ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಅಣ್ವೇಕರ ಒತ್ತಾಯಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ