ಆ್ಯಪ್ನಗರ

ಸಚಿವ ಹೆಗಡೆ ವಿರುದ್ಧ ಪ್ರತಿಭಟನೆ, ಬ್ಯಾನರ್‌ಗೆ ಮಸಿ

ದಲಿತ ಸಂಘಟನೆಗಳ‌ ಕಾರ್ಯಕರ್ತರು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ವಿರುದ್ದ ಪ್ರತಿಭಟನೆ ನಡೆಸಿದರು

Vijaya Karnataka Web 10 Mar 2018, 2:57 pm
ಹುಬ್ಬಳ್ಳಿ: ದಲಿತ ಸಂಘಟನೆಗಳ‌ ಕಾರ್ಯಕರ್ತರು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ವಿರುದ್ದ ಪ್ರತಿಭಟನೆ ನಡೆಸಿದರು. ವಿದ್ಯಾನಗರದ ದೈವಜ್ಞ ಭವನದ ಎದುರು ಪ್ರತಿಭಟನೆ ನಡೆಸಿದ ದಲಿತ ಸಂಘಟನೆಗಳ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.
Vijaya Karnataka Web protest against minister anant kumar hegde
ಸಚಿವ ಹೆಗಡೆ ವಿರುದ್ಧ ಪ್ರತಿಭಟನೆ, ಬ್ಯಾನರ್‌ಗೆ ಮಸಿ


ಹೆಗಡೆ ವಿರುದ್ಧ ಕಪ್ಪು ಪಟ್ಟಿ ಪ್ರದರ್ಶನ ಮಾಡಲು ನಿರ್ಧರಿಸಿದ್ದ ದಲಿತ ಸಂಘಟನೆಗಳ ಹೋರಾಟಗಾರರನ್ನು ಪೊಲೀಸರು ತಡೆದರು. ಕಾರ್ಯಕ್ರಮ ನಿಗದಿಯಾಗಿದ್ದ ಸ್ಥಳಕ್ಕೆ ಸಚಿವರು ಗಂಟೆ ಹನ್ನೊಂದಾದರೂ ಬರಲಿಲ್ಲ, ದಲಿತರು ಕೂಡ ಕದಲದೆ ಅರೆಬೆತ್ತಲೆ ಪ್ರತಿಭಟನೆ ಮಾಡಿದರು. ಆಗ ಪೊಲೀಸರು ಅವರನ್ನು ಬಂಧಿಸಿದರು.

ಪೊಲೀಸರು ಹಾಗೂ ಪ್ರತಿಭಟನಾ ನಿರತರ ನಡುವೆ ಮಾತಿನ ಚಕಮಕಿ ನಡೆಯಿತು. ಇದೇ ವೇಳೆ ಬೈಕ್‌ನಲ್ಲಿ ಬಂದ ಕೆಲವು ಕಿಡಿಗೇಡಿಗಳು ದೈವಜ್ಜ ಭವನ ಬಳಿ ಹಾಕಲಾಗಿದ್ದ ಅನಂತಕುಮಾರ ಹೆಗಡೆ ಬ್ಯಾನರ್‌ಗೆ ಕಪ್ಪು ಮಸಿ ಎರಚಿ ಪರಾರಿಯಾಗಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ