ಆ್ಯಪ್ನಗರ

ಪೌರ ಕಾರ್ಮಿಕರಿಂದ ಪ್ರತಿಭಟನೆ

ಧಾರವಾಡ :ಗುತ್ತಿಗೆ ಪೌರ ಕಾರ್ಮಿಕರಿಗೆ ನೇರ ನೇಮಕಾತಿ, ನೇರ ವೇತನ ಜತೆ ಪಾಲಿಕೆ ಸ್ವಚ್ಛತಾ ಗುತ್ತಿಗೆಯಲ್ಲಿ ನಡೆದ ನೂರಾರು ಕೋಟಿ ಅವ್ಯವಹಾರ ಬಗ್ಗೆ ಲೋಕಾಯುಕ್ತ ತನಿಖೆಗೆ ಆಗ್ರಹಿಸಿ ಜಿಲ್ಲಾ ಪರಿಶಿಷ್ಟ ಜಾತಿ/ಪಂಗಡಗಳ ಪೌರ ಕಾರ್ಮಿಕರು ಮತ್ತು ನೌಕರರ ಸಂಘದಿಂದ ಪೌರ ಕಾರ್ಮಿಕರು ಜಿಲ್ಲಾಧಿಕಾರಿ ಕಚೇರಿ ಎದುರಿಗೆ ಮಂಗಳವಾರ ಪ್ರತಿಭಟಿಸಿದರು.

Vijaya Karnataka 22 Aug 2018, 5:00 am
ಧಾರವಾಡ :ಗುತ್ತಿಗೆ ಪೌರ ಕಾರ್ಮಿಕರಿಗೆ ನೇರ ನೇಮಕಾತಿ, ನೇರ ವೇತನ ಜತೆ ಪಾಲಿಕೆ ಸ್ವಚ್ಛತಾ ಗುತ್ತಿಗೆಯಲ್ಲಿ ನಡೆದ ನೂರಾರು ಕೋಟಿ ಅವ್ಯವಹಾರ ಬಗ್ಗೆ ಲೋಕಾಯುಕ್ತ ತನಿಖೆಗೆ ಆಗ್ರಹಿಸಿ ಜಿಲ್ಲಾ ಪರಿಶಿಷ್ಟ ಜಾತಿ/ಪಂಗಡಗಳ ಪೌರ ಕಾರ್ಮಿಕರು ಮತ್ತು ನೌಕರರ ಸಂಘದಿಂದ ಪೌರ ಕಾರ್ಮಿಕರು ಜಿಲ್ಲಾಧಿಕಾರಿ ಕಚೇರಿ ಎದುರಿಗೆ ಮಂಗಳವಾರ ಪ್ರತಿಭಟಿಸಿದರು.
Vijaya Karnataka Web protest by civic workers
ಪೌರ ಕಾರ್ಮಿಕರಿಂದ ಪ್ರತಿಭಟನೆ


ಈ ವೇಳೆ ಪೌರ ಕಾರ್ಮಿಕರು ಮಹಾನಗರ ಪಾಲಿಕೆಯ ಜನಪ್ರತಿನಿಧಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರಲ್ಲದೇ, ಅವ್ಯವಹಾರ ತನಿಖೆಗೆ ಒತ್ತಾಯಿಸಿ ಅಪರ ಜಿಲ್ಲಾಧಿಕಾರಿ ಇಬ್ರಾಹಿಂ ಮೈಗೂರ ಅವರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು.

ವಿಜಯ ಗುಂಟ್ರಾಳ ಕೇಸ್‌ ವಾಪಸ್‌ ಪಡೆಯಬೇಕು. ಬಂಧಿಸಿದ ಪೌರ ಕಾರ್ಮಿಕರನ್ನು ಬಿಡುಗಡೆ ಮಾಡಬೇಕು. ಪೌರ ಕಾರ್ಮಿಕರಿಗೆ ನೇರ ವೇತನ ಪಾವತಿಸಬೇಕು ಎಂದು ಆಗ್ರಹಿಸಿ ಜಿಲ್ಲಾಡಳಿತದ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದರು.

ಪಾಲಿಕೆಯಲ್ಲಿ ಗುತ್ತಿಗೆ ರದ್ದುಪಡಿಸಿ, ನೆರವೇತನ ನೀಡುವಂತೆ ಠರಾವು ಪಾಸು ಮಾಡಿದೆ. ಆದರೆ ಭ್ರಷ್ಟ ಜನಪ್ರತಿನಿಧಿಗಳು ಕಾನೂನು ಬಾಹಿರ ಠರಾವು ಪಾಸು ಮಾಡಿದ ಹಿನ್ನಲೆ ಈವರೆಗೆ ನೇರ ವೇತನ ಪಾವತಿಸಿಲ್ಲ ಎಂದು ಆರೋಪಿಸಿದರು.

ಪಾಲಿಕೆಯಲ್ಲಿ 700 ನಕಲಿ ಪೌರ ಕಾರ್ಮಿಕರಿದ್ದಾರೆ. ಇವರಿಂದ ಸರಕಾರಕ್ಕೆ ವಂಚನೆ ಆಗಿದೆ. ಅಲ್ಲದೇ ಪಾಲಿಕೆಗೆ240 ಕೋಟಿ ರೂ.ನಷ್ಟವಾಗಿದೆ ಈ ಕುರಿತು ಕ್ರಮ ಕೈಗೊಳ್ಳಲು ಸಹಾಯಕ ಆಯುಕ್ತರಿಗೆ ಹಲವು ಭಾರಿ ಪತ್ರ ಬರೆದರೂ, ಯಾವುದೇ ಪ್ರಯೋಜನವಾಗಿಲ್ಲ ಎಂದು ಅಸಮದಾನ ವ್ಯಕ್ತಪಡಿಸಿದರು. ಜುಲೈ ತಿಂಗಳ ವೇತನ ಈವರೆಗೂ ನೀಡಿಲ್ಲ. ಸಂಘದ ಅಧ್ಯಕ್ಷ ವಿಜಯ ಗುಂಟ್ರಾಳ ಅವರ ಮೇಲೆ ಸುಳ್ಳು ಕೇಸ್‌ ದಾಖಲು ಮಾಡಲಾಗಿದೆ. ಸಾವಿರಾರು ಪೌರ ಕಾರ್ಮಿಕರನ್ನು ಪೊಲೀಸರ ದೌರ್ಜನ್ಯದ ಮೂಲಕ ಬಂಧಿಸಿದ್ದಾರೆ ಎಂದು ಆರೋಪ ಮಾಡಿದರು.

ಪ್ರತಿಭಟನೆಯಲ್ಲಿ ಬಸವರಾಜ ದೊಡಮನಿ, ಶರಣಪ್ಪ ಅಮರಾವತ್ತಿ, ಪರಶುರಾಮ ಕಡಕೊಳ, ಮಂಜುನಾಥ ನಾಗನೂರ, ಮಿನಾಕ್ಷಿ ಕುಂದರಗಿ, ಮಂಜುಳಾ ನಂದಿಹಾಳ ಸೇರಿದಂತೆ ನೂರಾರು ಪೌರ ಕಾರ್ಮಿಕರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ