ಆ್ಯಪ್ನಗರ

ಸಂತ್ರಸ್ತರ ನಿರ್ಲಕ್ಷ್ಯ ಖಂಡಿಸಿ ಪ್ರತಿಭಟನೆ

ಕುಂದಗೋಳ : ಧಾರಾಕಾರ ಮಳೆಯಿಂದ ರಾಜ್ಯದ ಜನ ಸಂಕಷ್ಟಕ್ಕೆ ಒಳಗಾಗಿದ್ದರೂ ಸರ್ಕಾರಗಳು ಸಂತ್ರಸ್ತರ ನೆರವಿಗೆ ಬರುತ್ತಿಲ್ಲಎಂದು ಆರೋಪಿಸಿ ಕಾಂಗ್ರೆಸ್‌ ಪಕ್ಷದಿಂದ ಧರಣಿ ನಡೆಸಿ ತಹಸೀಲ್ದಾರ ಮೂಲಕ ರಾಜ್ಯಪಾಲರಿಗೆ ಗುರುವಾರ ಮನವಿ ಸಲ್ಲಿಸಲಾಯಿತು.

Vijaya Karnataka 14 Sep 2019, 5:00 am
ಕುಂದಗೋಳ : ಧಾರಾಕಾರ ಮಳೆಯಿಂದ ರಾಜ್ಯದ ಜನ ಸಂಕಷ್ಟಕ್ಕೆ ಒಳಗಾಗಿದ್ದರೂ ಸರ್ಕಾರಗಳು ಸಂತ್ರಸ್ತರ ನೆರವಿಗೆ ಬರುತ್ತಿಲ್ಲಎಂದು ಆರೋಪಿಸಿ ಕಾಂಗ್ರೆಸ್‌ ಪಕ್ಷದಿಂದ ಧರಣಿ ನಡೆಸಿ ತಹಸೀಲ್ದಾರ ಮೂಲಕ ರಾಜ್ಯಪಾಲರಿಗೆ ಗುರುವಾರ ಮನವಿ ಸಲ್ಲಿಸಲಾಯಿತು.
Vijaya Karnataka Web 13KND3_21
ಕುಂದಗೋಳ ಪಟ್ಟಣದ ತಹಸೀಲ್ದಾರ ಕಚೇರಿ ಆವರಣದಲ್ಲಿಕಾಂಗ್ರೆಸ್‌ ಪಕ್ಷದಿಂದ ಸಾಂಕೇತಿಕವಾಗಿ ಧರಣಿ ನಡೆಸಿ ತಹಸೀಲ್ದಾರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.


ಶಾಸಕಿ ಕೆ.ಸಿ.ಶಿವಳ್ಳಿ ಮಾತನಾಡಿ ರಾಜ್ಯ ಸಂತ್ರಸ್ತರನ್ನು ನಿರ್ಲಕ್ಷಿಸಿದ್ದು, ಇಲ್ಲಿಅನೇಕ ಜನರು ಮನೆಗಳನ್ನು ಕಳೆದುಕೊಂಡು ಕಷ್ಟದ ಜೀವನ ನಡೆಸುತ್ತಿದ್ದಾರೆ, ಸೇತುವೆ, ರಸ್ತೆ, ಶಾಲಾ ಕಟ್ಟಡಗಳು, ಸಂಪೂರ್ಣ ಹಾಳಾಗಿದ್ದು ಸಂಚಾರಕ್ಕೂ ಸಂಚಕಾರ ಬಂದಿದ್ದು, ಸರ್ಕಾರಗಳು ಎಚ್ಚರಗೊಳ್ಳುತ್ತಿಲ್ಲಎಂದು ಆರೋಪಿಸಿದರು.

ಧರಣಿಯಲ್ಲಿಜಿ.ಪಂ ಸದಸ್ಯ ಉಮೇಶ ಹೆಬಸೂರ, ಎಪಿಎಂಸಿ ಅಧ್ಯಕ್ಷ ಬೀರಪ್ಪ ಕುರಬರ, ಅನಿಲಕುಮಾರ ಪಾಟೀಲ, ಅಪ್ಪಣ್ಣ ಹಿರೇಗೌಡ್ರ, ಅರವಿಂದ ಕಟಗಿ, ಫಕ್ಕೀರಪ್ಪ ಮೂಲಿಮನಿ, ಮುತ್ತು ಶಿವಳ್ಳಿ, ದಯಾನಂದ ಕುಂದೂರ, ಸಕ್ರು ಲಮಾಣಿ ಅನೇಕರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ