ಆ್ಯಪ್ನಗರ

ತಹಸೀಲ್ದಾರ ಹತ್ಯೆ ಖಂಡಿಸಿ ಡಿಸಿ ಕಚೇರಿ ಎದುರು ಪ್ರತಿಭಟನೆ

ಧಾರವಾಡ: ಬಂಗಾರಪೇಟೆ ತಾಲೂಕಿನ ತಹಸೀಲ್ದಾರ ಕೆ. ಚಂದ್ರಮೌಳೇಶ್ವರ ಅವರ ಹತ್ಯೆಯನ್ನು ಖಂಡಿಸಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಶಾಖೆಯಿಂದ ಶುಕ್ರವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯ ಎದುರು ಮೌನ ಪ್ರತಿಭಟನೆ ಮಾಡಿ, ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

Vijaya Karnataka 11 Jul 2020, 5:00 am
ಧಾರವಾಡ: ಬಂಗಾರಪೇಟೆ ತಾಲೂಕಿನ ತಹಸೀಲ್ದಾರ ಕೆ. ಚಂದ್ರಮೌಳೇಶ್ವರ ಅವರ ಹತ್ಯೆಯನ್ನು ಖಂಡಿಸಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಶಾಖೆಯಿಂದ ಶುಕ್ರವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯ ಎದುರು ಮೌನ ಪ್ರತಿಭಟನೆ ಮಾಡಿ, ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
Vijaya Karnataka Web 10MALLU4_21
ಧಾರವಾಡ ಜಿಲ್ಲಾಧಿಕಾರಿ ಕಚೇರಿಯ ಎದುರು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಶಾಖೆಯಿಂದ ಶುಕ್ರವಾರ ಪ್ರತಿಭಟನೆ ಮಾಡಲಾಯಿತು.


ಈ ವೇಳೆ ಮಾತನಾಡಿದ ಧಾರವಾಡ ಜಿಲ್ಲಾಧ್ಯಕ್ಷ ಎಸ್‌.ಎಫ್‌. ಸಿದ್ದನಗೌಡರ, ಸರಕಾರಿ ನೌಕರರ ಹಿತ ಕಾಪಾಡಲು ಮತ್ತು ಮುಕ್ತವಾಗಿ ಕಾನೂನುಬದ್ಧ ಕ್ರಮಗಳನ್ನು ಕೈಗೊಳ್ಳಲು ಅನುವಾಗುವಂತೆ ಅವರ ರಕ್ಷಣೆಗಾಗಿ ಕಠಿಣ ಕಾನೂನುಗಳನ್ನು ರೂಪಿಸುವುದು ಅವಶ್ಯಕವಾಗಿದೆ ಎಂದರು. ನಂತರ ಜಿಲ್ಲಾಧಿಕಾರಿ ನಿತೇಶ ಪಾಟೀಲ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

ಜಿಲ್ಲಾಘಟಕದ ಪ್ರಧಾನ ಕಾರ್ಯದರ್ಶಿ ಎಸ್‌.ಜಿ. ಸುಬ್ಬಾಪೂರಮಠ, ಎಐಪಿಟಿಎಫ್‌ ಉಪಾಧ್ಯಕ್ಷ ಬಸವರಾಜ ಗುರಿಕಾರ, ಎಸ್‌.ಕೆ. ರಾಮದುರ್ಗ, ಆರ್‌.ಬಿ. ಲಿಂಗದಾಳ, ಪ್ರತಿಭಾ ರಾಣೆ, ಗಿರೀಶ ಚೌಡಕಿ, ವೈ.ಎಚ್‌. ಬಣವಿ, ರಾಜಶೇಖರ್‌ ಹೊನ್ನಪ್ಪನವರ, ಎಸ್‌.ಬಿ. ಕೇಸರಿ, ಇತರರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ