ಆ್ಯಪ್ನಗರ

ಮಿನಿ ವಿಧಾನಸೌಧ ಎದುರು ಪ್ರತಿಭಟನೆ

ಹುಬ್ಬಳ್ಳಿ : ದೇಶದ ವಿವಿಧೆಡೆ ಗೋ ರಕ್ಷ ಣೆ ಹೆಸರಿನಲ್ಲಿ ಮುಸ್ಲಿಮರ ಮೇಲೆ ನಡೆಯುತ್ತಿರುವ ಹಲ್ಲೆ ತಡೆಗಟ್ಟಬೇಕು ಎಂದು ಒತ್ತಾಯಿಸಿ ಧಾರವಾಡ ಜಿಲ್ಲಾ ಸುನ್ನಿ ಮಶಾಯಕ್‌ ಕೌನ್ಸಿಲ್‌ ನಗರದ ಮಿನಿ ವಿಧಾನಸೌಧದ ಎದುರು ಗುರುವಾರ ಪ್ರತಿಭಟನೆ ನಡೆಸಿತು.

Vijaya Karnataka 19 Jul 2019, 5:00 am
ಹುಬ್ಬಳ್ಳಿ : ದೇಶದ ವಿವಿಧೆಡೆ ಗೋ ರಕ್ಷ ಣೆ ಹೆಸರಿನಲ್ಲಿ ಮುಸ್ಲಿಮರ ಮೇಲೆ ನಡೆಯುತ್ತಿರುವ ಹಲ್ಲೆ ತಡೆಗಟ್ಟಬೇಕು ಎಂದು ಒತ್ತಾಯಿಸಿ ಧಾರವಾಡ ಜಿಲ್ಲಾ ಸುನ್ನಿ ಮಶಾಯಕ್‌ ಕೌನ್ಸಿಲ್‌ ನಗರದ ಮಿನಿ ವಿಧಾನಸೌಧದ ಎದುರು ಗುರುವಾರ ಪ್ರತಿಭಟನೆ ನಡೆಸಿತು.
Vijaya Karnataka Web protests in front of mini vidya soudha
ಮಿನಿ ವಿಧಾನಸೌಧ ಎದುರು ಪ್ರತಿಭಟನೆ


ದೇಶದ ಹಲವು ರಾಜ್ಯಗಳಲ್ಲಿ ಮತ್ತು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅಮಾಯಕ ಮುಸ್ಲಿಮರ ಮೇಲೆ ಕೋಮುವಾದಿಗಳು ಹಲ್ಲೆ ಮಾಡುತ್ತಿದ್ದಾರೆ. ದೇಶದಲ್ಲಿ ಶಾಂತಿ ಸಹಬಾಳ್ವೆಗೆ ಹೆಸರಾಗಿರುವ ಮುಸ್ಲಿಮರ ಮೇಲೆ ಹಲ್ಲೆ ನಡೆಯುತ್ತಿರುವುದು ಖಂಡನೀಯ ಎಂದು ಮುಸ್ಲಿಂ ಸಮಾಜದ ಮೌಲ್ವಿಗಳು, ಹಿರಿಯರು ಹಾಗೂ ಸುನ್ನಿ ಮಶಾಯಕ್‌ ಕೌನ್ಸಿಲ್‌ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಮಾಜಿ ಸಚಿವ ಎ.ಎಂ. ಹಿಂಡಸಗೇರಿ ಮಾತನಾಡಿ, ಮುಸ್ಲಿಮರು ಸ್ವಾತಂತ್ರ್ಯಕ್ಕಾಗಿ ತ್ಯಾಗ, ಬಲಿದಾನ ಮಾಡಿದ್ದಾರೆ. ಎಲ್ಲರೊಂದಿಗೆ ಸಹಬಾಳ್ವೆಯಿಂದ ಜೀವನ ನಡೆಸುತ್ತಿದ್ದಾರೆ. ಬೇರೆ ಬೇರೆ ಕಾರಣ ನೀಡಿ ಮುಸ್ಲಿಮರ ಮೇಲೆ ಹಲ್ಲೆಗಳು ಆಗುತ್ತಿವೆ. ಸರಕಾರ ಇಂತಹ ಪ್ರಕರಣಗಳಿಗೆ ಕಡಿವಾಣ ಹಾಕಬೇಕು. ರಾಷ್ಟ್ರಪತಿಯವರು ಸೂಕ್ತ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಮುಸ್ಲಿಂ ಸಮಾಜದ ಧರ್ಮಗುರುಗಳಾದ ತಾಜುದ್ದಿನ್‌ ಫೀರಾ, ಸಮಾಜದ ಮುಖಂಡರಾದ ಭೈರುದ್ದೀನ್‌ ಖಾನ್‌, ಅನ್ವರ ಮುಧೋಳ, ರಿಯಾಜ್‌ ಆಲಂಶೇಖ, ಇಸ್ಮಾಯಿಲ್‌ ಕಾಲೆಬುಡ್ಡೆ, ಆರ್‌.ಐ. ಸಿಂಕದರ್‌, ಸಮದ್‌ ಗುಲಬರ್ಗಾ, ಶಿರಾಜ್‌ ದೇಸಾಯಿ, ಮಹ್ಮದ್‌ಅಲಿ, ಅಜರ್‌ಖಾನ್‌, ಎ.ಎ. ಚೌಧರಿ, ಅಲಿ ಖಾಜಿ, ನಾಸೀರ್‌ ಭಗವಾನ್‌, ಸಿರಾಜ ಕುಡಚಿವಾಲಾ, ಇಸ್ಮಾಯಿಲ್‌ಸಾಬ್‌ ಖಾತಿ, ಮೌಲಾನ್‌ ಶಮಶುದ್ದೀನ್‌ ಸೇರಿದಂತೆ ಅನೇಕರು ಪ್ರತಿಭಟನೆಯಲ್ಲಿ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ