ಆ್ಯಪ್ನಗರ

4ರಂದು ಪುಟ್ಟರಾಜ ಮೂರ್ತಿ ಅನಾವರಣ

ಗದಗ : ರೋಣ ತಾಲೂಕಿನ ಬೆಳವಣಕಿ ಗ್ರಾಮದ ಬಸ್‌ ನಿಲ್ದಾಣದ ಎದುರು ಪಂ. ಪುಟ್ಟರಾಜ ಕವಿ ಗವಾಯಿಗಳ ಕಂಚಿನ ಮೂರ್ತಿ ಅನಾವರಣ ಕಾರ್ಯಕ್ರಮ ಜುಲೈ 4ರಂದು ಬೆಳಗ್ಗೆ 11 ಗಂಟೆಗೆ ನಡೆಯಲಿದೆ. ಒಟ್ಟು 7.5 ಲಕ್ಷ ರೂ. ವೆಚ್ಚದಲ್ಲಿ 5.5 ಅಡಿ ಎತ್ತರದ ಮೂರ್ತಿ ಇದಾಗಿದ್ದು, ಗೋಕಾಕ ನಗರದ ಶಿಲ್ಪಿಗಳಾದ ಅಮ್ಮಾ

Vijaya Karnataka 1 Jul 2019, 5:00 am
ಗದಗ : ರೋಣ ತಾಲೂಕಿನ ಬೆಳವಣಕಿ ಗ್ರಾಮದ ಬಸ್‌ ನಿಲ್ದಾಣದ ಎದುರು ಪಂ. ಪುಟ್ಟರಾಜ ಕವಿ ಗವಾಯಿಗಳ ಕಂಚಿನ ಮೂರ್ತಿ ಅನಾವರಣ ಕಾರ್ಯಕ್ರಮ ಜುಲೈ 4ರಂದು ಬೆಳಗ್ಗೆ 11 ಗಂಟೆಗೆ ನಡೆಯಲಿದೆ. ಒಟ್ಟು 7.5 ಲಕ್ಷ ರೂ. ವೆಚ್ಚದಲ್ಲಿ 5.5 ಅಡಿ ಎತ್ತರದ ಮೂರ್ತಿ ಇದಾಗಿದ್ದು, ಗೋಕಾಕ ನಗರದ ಶಿಲ್ಪಿಗಳಾದ ಅಮ್ಮಾ ಹೋತಾರಿ, ದಿನಕರ ಹೋತಾರಿ ರೂಪಿಸಿದ್ದಾರೆ. ಮೂರ್ತಿ ಲೋಕಾರ್ಪಣೆ ಸಮಾರಂಭದ ಸಾನ್ನಿಧ್ಯವನ್ನು ಚನ್ನಮಲ್ಲ ಶಿವಾಚಾರ್ಯ ಸ್ವಾಮೀಜಿ ವಹಿಸುವರು. ವೀರೇಶ್ವರ ಪುಣ್ಯಾಶ್ರಮದ ಕಲ್ಲಯ್ಯಜ್ಜನವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಕಲ್ಲಯ್ಯಜ್ಜನವರ ತುಲಾಭಾರ ಕಾರ್ಯಕ್ರಮವೂ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.
Vijaya Karnataka Web putaraja statue unveiled on 4th
4ರಂದು ಪುಟ್ಟರಾಜ ಮೂರ್ತಿ ಅನಾವರಣ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ