ಆ್ಯಪ್ನಗರ

ಪುಟ್ಟರಂಗಶೆಟ್ಟಿ ರಾಜೀನಾಮೆಗೆ ಒತ್ತಾಯ

ಹುಬ್ಬಳ್ಳಿ : ಹಿಂದುಳಿದ ವರ್ಗಗಳ ಇಲಾಖೆ ಸಚಿವ ಪುಟ್ಟರಂಗ ಶೆಟ್ಟಿ ಅವರ ರಾಜಿನಾಮೆಗೆ ಆಗ್ರಹಿಸಿ ಹಾಗೂ ಪೆಟ್ರೊಲ್‌ ಡಿಸೇಲ್‌ ಮೇಲೆ ರಾಜ್ಯ ಸರಕಾರ ಹೆಚ್ಚಿಸಿರುವ ತೆರಿಗೆ ಕಡಿತಗೊಳಿಸುವಂತೆæ ಒತ್ತಾಯಿಸಿ ಬಿಜೆಪಿಯ ವಿವಿಧ ಮೋರ್ಚಾ ಕಾರ್ಯಕರ್ತರು ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಭಾನುವಾರ ಪ್ರತಿಭಟನೆ ನಡೆಸಿ ಗಮನ ಸೆಳೆದರು.

Vijaya Karnataka 7 Jan 2019, 5:00 am
ಹುಬ್ಬಳ್ಳಿ : ಹಿಂದುಳಿದ ವರ್ಗಗಳ ಇಲಾಖೆ ಸಚಿವ ಪುಟ್ಟರಂಗ ಶೆಟ್ಟಿ ಅವರ ರಾಜಿನಾಮೆಗೆ ಆಗ್ರಹಿಸಿ ಹಾಗೂ ಪೆಟ್ರೊಲ್‌ ಡಿಸೇಲ್‌ ಮೇಲೆ ರಾಜ್ಯ ಸರಕಾರ ಹೆಚ್ಚಿಸಿರುವ ತೆರಿಗೆ ಕಡಿತಗೊಳಿಸುವಂತೆæ ಒತ್ತಾಯಿಸಿ ಬಿಜೆಪಿಯ ವಿವಿಧ ಮೋರ್ಚಾ ಕಾರ್ಯಕರ್ತರು ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಭಾನುವಾರ ಪ್ರತಿಭಟನೆ ನಡೆಸಿ ಗಮನ ಸೆಳೆದರು.
Vijaya Karnataka Web putturangasetty urges resignation
ಪುಟ್ಟರಂಗಶೆಟ್ಟಿ ರಾಜೀನಾಮೆಗೆ ಒತ್ತಾಯ


ಮೈತ್ರಿ ಸರಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ವಿಧಾನಸೌಧದ ಪುಟ್ಟರಂಗ ಶೆಟ್ಟಿ ಕಚೇರಿಯಲ್ಲಿ ನಗದು ಸಿಕ್ಕರೂ ಅವರು ರಾಜೀನಾಮೆ ನೀಡುತ್ತಿಲ್ಲ. ರಾಜೀನಾಮೆ ನೀಡದಿದ್ದರೆ ಬಿಜೆಪಿ ಉಗ್ರ ಪ್ರತಿಭಟನೆ ನಡೆಸಲಿದೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.ಸಚಿವ ಪುಟ್ಟರಂಗ ಶೆಟ್ಟಿ ಅವರ ಕಚೇರಿಯ ಒಬ್ಬ ಸಾಮಾನ್ಯ ಟೈಪಿಸ್ಟ್‌ ಬಳಿ 26 ಲಕ್ಷ ರೂ. ನಗದು ಸಿಕ್ಕಿರುವುದು ವಿಧಾನಸೌಧದಲ್ಲಿ ಭ್ರಷ್ಟಾಚಾರ ಇದೆ ಎನ್ನುವ ಮಾತಿಗೆ ಪುಷ್ಟಿ ನೀಡುತ್ತದೆ ಎಂದು ದೂರಿದರು.

ಪೆಟ್ರೊಲ್‌, ಡಿಸೇಲ್‌ ದರದ ಮೇಲೆ ತೆರಿಗೆ ಹೆಚ್ಚಿಸುವ ಮೂಲಕ ರಾಜ್ಯ ಸರಕಾರ ಹಗಲು ದರೊಡೆ ಮಾಡುತ್ತಿದೆ ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಹಾನಗರ ಜಿಲ್ಲಾಧ್ಯಕ್ಷ ನಾಗೇಶ ಕಲ್ಬುರ್ಗಿ ಮಾತನಾಡಿ, ಸಚಿವ ಪುಟ್ಟರಂಗ ಶೆಟ್ಟಿ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ತನಿಖೆ ಪೂರ್ಣಗೊಳ್ಳುವರೆಗೂ ರಾಜೀನಾಮೆ ಪಡೆಯಬೇಕು. ಈ ಪ್ರಕರಣವನ್ನು ಪಾರದರ್ಶಕ ತನಿಖೆ ನಡೆಸಿ ಅಪರಾಧಿಗಳಿಗೆ ಶಿಕ್ಷೆಯಾಗುವಂತೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ರಾಜ್ಯ ಸರಕಾರ ವಿನಾಕಾರಣ ಪೆಟ್ರೊಲ್‌ ಹಾಗೂ ಡಿಸೇಲ್‌ ಮೇಲೆ ಹೆಚ್ಚಿನ ಸುಂಕ ಹೇರಿರುವುದರಿಂದ ತೈಲ ಬೆಲೆ ಹೆಚ್ಚಿದೆ. ಈ ಕೂಡಲೇ ರಾಜ್ಯ ಸರಕಾರ ಸುಂಕ ಕಡಿತಗೊಳಿಸಬೇಕು. ಮುಖ್ಯಮಂತ್ರಿ ಕುಮಾರಸ್ವಾಮಿ ಈ ನೀಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದರು.

ಮಹೇಶ ಟೆಂಗಿನಕಾಯಿ, ಪಾಲಿಕೆ ಸದಸ್ಯ ಶಿವು ಮೆಣಸಿನಕಾಯಿ, ತಿಪ್ಪಣ್ಣ ಮಜ್ಜಗಿ, ಹನುಮಂತಪ್ಪ ದೊಡ್ಡಮನಿ, ಸತೀಶ ತೇಜವಾಡಕರ, ದತ್ತಮೂರ್ತಿ ಕುಲಕರ್ಣಿ, ಸೀಮಾ ಲದ್ವಾ, ಶೋಭಾ ನಾಕೋಡ, ಪೂರ್ಣಿಮಾ ಶಿಂಧೆ, ರಾಜು ಕಾಳೆ, ಗೋಪಾಲ ಬದ್ದಿ, ಚಂದ್ರಶೇಖರ ಗೊಕಾಕ, ಅಶೋಕ ವಾಲ್ಮಿಕಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ