ಆ್ಯಪ್ನಗರ

ಹಕ್ಕು ಪತ್ರ ಶೀಘ್ರ ವಿತರಿಸಿ

ಧಾರವಾಡ: ಪೂರ್ವಜರ ಕಾಲದಿಂದ ಸಾಗುವಳಿ ಮಾಡಿಕೊಂಡಿದ್ದ ಜಮೀನಿಗೆ ಹಕ್ಕು ಪತ್ರ ವಿತರಿಸುವಂತೆ ಆಗ್ರಹಿಸಿ ತಾಲೂಕಿನ ಚಿಕ್ಕಮಲ್ಲಿಗವಾಡ ಗ್ರಾಮದ ರೈತರು ಜಿಲ್ಲಾಧಿಕಾರಿ ಕಚೇರಿ ಎದುರಿಗೆ ಸೋಮವಾರ ಪ್ರತಿಭಟನೆ ನಡೆಸಿದರು.

Vijaya Karnataka 15 Oct 2019, 5:00 am
ಧಾರವಾಡ: ಪೂರ್ವಜರ ಕಾಲದಿಂದ ಸಾಗುವಳಿ ಮಾಡಿಕೊಂಡಿದ್ದ ಜಮೀನಿಗೆ ಹಕ್ಕು ಪತ್ರ ವಿತರಿಸುವಂತೆ ಆಗ್ರಹಿಸಿ ತಾಲೂಕಿನ ಚಿಕ್ಕಮಲ್ಲಿಗವಾಡ ಗ್ರಾಮದ ರೈತರು ಜಿಲ್ಲಾಧಿಕಾರಿ ಕಚೇರಿ ಎದುರಿಗೆ ಸೋಮವಾರ ಪ್ರತಿಭಟನೆ ನಡೆಸಿದರು.
Vijaya Karnataka Web quickly distribute the claim
ಹಕ್ಕು ಪತ್ರ ಶೀಘ್ರ ವಿತರಿಸಿ


ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿಕೊಂಡ ರೈತರು, ಚಿಕ್ಕಮಲ್ಲಿಗವಾಡ ಗ್ರಾಮದ 68 ಬಡ ರೈತರು ಕೆಲಗೇರಿ ಸರಹದ್ದಿನಲ್ಲಿರುವ ಸರ್ವೆ ನಂ.709/ಬ ಕ್ಷೇತ್ರ 69 ಎಕರೆ 20ಗುಂಟೆ ಕ್ಷೇತ್ರವನ್ನು ಅಜ್ಜ-ಮುತ್ತಜ್ಜರ ಕಾಲದಿಂದ ಸಾಗುವಳಿ ಮಾಡಿಕೊಂಡು ಜೀವನ ನಡೆಸುತ್ತಿದ್ದು, ತಲಾ ಒಬ್ಬ ರೈತ 1ಎಕರೆಯಂತೆ 68 ರೈತರು ಸಾಗುವಳಿ ಮಾಡುತ್ತಿದ್ದಾರೆ ಎಂದರು.

ವಂಶ ಪಾರಂಪರೆಯಿಂದ ಸಾಗುವಳಿ ಮಾಡುತ್ತಿದ್ದ 68 ಎಕರೆ ಕ್ಷೇತ್ರವನ್ನು ಕಂದಾಯ ಇಲಾಖೆಗೆ ವರ್ಗಾವಣೆ ಮಾಡಿಕೊಳ್ಳದೇ ಇರುವುದರಿಂದ ಅಲ್ಲಿನ ರೈತರು ಹಕ್ಕು ಪತ್ರ ಪಡೆಯದೆ ಯಥಾಸ್ಥಿತಿ ಸಾಗುವಳಿ ಮಾಡುತ್ತಾ ಜೀವನ ನಡೆಸುತ್ತಿದ್ದಾರೆ. ಆದರೆ, ಹಲವು ವರ್ಷಗಳಿಂದ ನಾವುಗಳು ಅರಣ್ಯ ಹಕ್ಕು ಮಾನ್ಯ ಮಾಡುವಂತೆ ಒತ್ತಾಯಿಸಿ ಇಲಾಖೆಗೆ ಹಲವಾರು ಬಾರಿ ಅರ್ಜಿಯನ್ನು ಸಲ್ಲಿಸಿದ್ದರ ಪರಿಣಾಮ ಅರಣ್ಯ ಹಕ್ಕು ಸಮಿತಿಯಲ್ಲಿಠರಾವು ಮಾಡಲಾಯಿತು ಎಂದರು.

ನಂತರ ರೈತರಿಗೆ ಮಂಜೂರು ಪತ್ರ ನೀಡಲು ಸಮಾಜ ಕಲ್ಯಾಣ ಇಲಾಖೆಗೆ ನೀಡಲಾಯಿತು. ಆದರೆ, ಸಮಾಜ ಕಲ್ಯಾಣ ಮತ್ತು ತಹಸೀಲ್ದಾರ್‌ ಕಾರ್ಯಾಲಯದಿಂದ ಹಾಗೂ ಉಪವಿಭಾಗಾಧಿಕಾರಿಯಗಳು ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಹಾಗೂ ಅರಣ್ಯ ಹಕ್ಕು ಸಮಿತಿಯ ಎಲ್ಲಅಧ್ಯಕ್ಷರು ಹಾಗೂ ಸದಸ್ಯರು ಸ್ಥಳ ಪರಿಶೀಲನೆ ಮಾಡುವ ಮೂಲಕ ಕೊನೆಗೆ ತಹಸೀಲ್ದಾರ್‌ ಸೇರಿದಂತೆ ಎಲ್ಲಅಧಿಕಾರಿ ವರ್ಗದವರು ವರದಿಯನ್ನು ಅರಣ್ಯ ಇಲಾಖೆಗೆ ಸಲ್ಲಿಸಿದ್ದಾರೆ. ಆದರೆ, ಅರಣ್ಯ ಇಲಾಖೆಯ ಆರ್‌ಎಫ್‌ಒ ಅವರು ಯಾವುದೇ ಮಾಹಿತಿ ನೀಡದೇ ರೈತರ ಪರ ಇದ್ದ ವರದಿಯನ್ನು ವಿರೋಧಿಸುತ್ತಾ ವಿಳಂಬ ಮಾಡುತ್ತಿದ್ದಾರೆ. ಈ ಕೂಡಲೇ ಅರಣ್ಯ ಇಲಾಖೆಯ ಅಧಿಕಾರಿಗಳು, ರೈತರ ಅರ್ಜಿಗಳನ್ನು ವಿಲೇವಾರಿ ಮಾಡುವ ಮೂಲಕ ಬರುವ ಅರಣ್ಯ ಹಕ್ಕು ಸಮಿತಿಯಲ್ಲಿಇತ್ಯರ್ಥ ಮಾಡಬೇಕು. ರೈತರಿಗೆ ಹಕ್ಕುಪತ್ರ ನೀಡಬೇಕು ಎಂದು ಮನವಿಯಲ್ಲಿಒತ್ತಾಯಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ