ಆ್ಯಪ್ನಗರ

ಕೇಂದ್ರದ ನೆರೆ ಅನುದಾನ ಅಲ್ಪ, 5 ಸಾವಿರ ಕೋಟಿ ಅನುದಾನ ಬಿಡುಗಡೆಗೆ ಒತ್ತಾಯ

ರಾಜ್ಯಕ್ಕೆ ಕೇಂದ್ರ ಸರಕಾರ ನೀಡಿರುವ ನೆರೆ ಪರಿಹಾರ ಧನ ಅತ್ಯಂತ ಕಡಿಮೆಯಾಗಿದೆ. ಕನಿಷ್ಠ 5 ಸಾವಿರ ಕೋಟಿ ರೂ ಅನುದಾನ ಬಿಡುಗಡೆ ಮಾಡಬೇಕು ಎಂದು ಆರ್ ವಿ ದೇಶಪಾಂಡೆ ಒತ್ತಾಯಿಸಿದ್ದಾರೆ.

Vijaya Karnataka Web 5 Oct 2019, 12:22 pm
ಹುಬ್ಬಳ್ಳಿ: ಕರ್ನಾಟಕ ನೆರೆ ಸಂತ್ರಸ್ತರಿಗೆ ಕೇಂದ್ರ ಸರಕಾರ ನೀಡಿರುವ 1200 ಕೋಟಿ ರೂ ಪರಿಹಾರ ತುಂಬಾ ಕಡಿಮೆ. ಇನ್ನೂ ಹೆಚ್ಚಿನ ಅನುದಾನ ಕೊಡಬೇಕಿತ್ತು ಎಂದು ಮಾಜಿ ಸಚಿವ ಆರ್.ವಿ. ದೇಶಪಾಂಡೆ ಹೇಳಿದ್ದಾರೆ.
Vijaya Karnataka Web deshpande


ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿರುವ ಅವರು 1200 ಕೋಟಿ ರೂ ಪರಿಹಾರ ತುಂಬಾ ಕಡಿಮೆ ಆಯ್ತು. ರಾಜ್ಯದ ಜನ ತೀವ್ರ ಸಂಕಷ್ಡದಲ್ಲಿದ್ದಾರೆ. ಈ ಹಣ ಯಾವುದಕ್ಕೂ ಸಾಲುವುದಿಲ್ಲ ಕನಿಷ್ಠ 5 ಸಾವಿರ ಕೋಟಿ ಅನುದಾನ ಬಿಡುಗಡೆ ಮಾಡಬೇಕು ಎಂದು ದೇಶಪಾಂಡೆ ಒತ್ತಾಯಿಸಿದರು.

ಕೇಂದ್ರ ಸರಕಾರ ರಾಜ್ಯಕ್ಕೆ ಸರಿಯಾದ ಅನುದಾನ ಕೊಡುತ್ತಿಲ್ಲ. ಇದು ಕೇಂದ್ರದ ಕರ್ತವ್ಯ ಮತ್ತು ಜವಾಬ್ದಾರಿ ಕೂಡ ಆಗಿದೆ. ರಾಜ್ಯ ಸರಕಾರ ಕೇಂದ್ರದಿಂದ ಸೂಕ್ತ ಪರಿಹಾರ ತರುವುದಲ್ಲಿ ವಿಫಲವಾಗಿದೆ ಎಂದು ಟೀಕೆ ಮಾಡಿದರು.

ಪ್ರವಾಹ ಉಂಟಾದ ಬಳಿಕ ಜನರು ಬೀದಿಪಾಲಾಗಿದ್ದಾರೆ. ಗುಳೆ ಹೋಗಲು ಆರಂಭಿಸಿದ್ದಾರೆ. ಪರಿಹಾರ ವಿಚಾರದಲ್ಲಿ ಕಾಂಗ್ರೆಸ್‌ ಗಿಂತ ಒಂದು ‌ಹೆಜ್ಜೆ ಮುಂದೆ ಹೋಗಿ ಒಳ್ಳೆಯ ಪರಿಹಾರ ಘೋಷಣೆ ಮಾಡಿದ್ದಾರೆ. ಆದರೆ, ಅದನ್ನು ಅನುಷ್ಠಾನ ಮಾಡುತ್ತಿಲ್ಲ. ರಾಜ್ಯ ಸರಕಾರ ಇನ್ನಾದರೂ ಕ್ರಿಯಾಶೀಲವಾಗಿ ಕೆಲಸ ಮಾಡಬೇಕು. ಇದರಲ್ಲಿ ಯಾರೂ ರಾಜಕೀಯ ಮಾಡಬಾರದು ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ