ಆ್ಯಪ್ನಗರ

ಮರು ಪರಿಶೀಲನೆ ನಿರ್ಧಾರ ಸ್ವಾಗತಾರ್ಹ: ಹಿರೇಮಠ

ಹುಬ್ಬಳ್ಳಿ : ಬಳ್ಳಾರಿ ಜಿಲ್ಲೆಯಲ್ಲಿ ಜೆಎಸ್‌ಡಬ್ಲೂ ಸ್ಟೀಲ್‌ ಕಂಪೆನಿಗೆ 3667 ಎಕರೆ ಜಮೀನು ನೀಡುವ ವಿಚಾರವನ್ನು ರಾಜ್ಯ ಸರಕಾರ ಮರು ಪರಿಶೀಲನೆಗೆ ಮುಂದಾಗಿರುವುದು ಸ್ವಾಗತಾರ್ಹ ಎಂದು ಸಮಾಜ ಪರಿವರ್ತನಾ ಸಮುದಾಯದ ಸಂಸ್ಥಾಪಕ ಎಸ್‌.ಆರ್‌.ಹಿರೇಮಠ ಹೇಳಿದರು.

Vijaya Karnataka 15 Jun 2019, 5:00 am
ಹುಬ್ಬಳ್ಳಿ : ಬಳ್ಳಾರಿ ಜಿಲ್ಲೆಯಲ್ಲಿ ಜೆಎಸ್‌ಡಬ್ಲೂ ಸ್ಟೀಲ್‌ ಕಂಪೆನಿಗೆ 3667 ಎಕರೆ ಜಮೀನು ನೀಡುವ ವಿಚಾರವನ್ನು ರಾಜ್ಯ ಸರಕಾರ ಮರು ಪರಿಶೀಲನೆಗೆ ಮುಂದಾಗಿರುವುದು ಸ್ವಾಗತಾರ್ಹ ಎಂದು ಸಮಾಜ ಪರಿವರ್ತನಾ ಸಮುದಾಯದ ಸಂಸ್ಥಾಪಕ ಎಸ್‌.ಆರ್‌.ಹಿರೇಮಠ ಹೇಳಿದರು.
Vijaya Karnataka Web re examination decision is welcome hiremath
ಮರು ಪರಿಶೀಲನೆ ನಿರ್ಧಾರ ಸ್ವಾಗತಾರ್ಹ: ಹಿರೇಮಠ


ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಕಡಿಮೆ ಬೆಲೆಗೆ ಭೂಮಿ ಮಾರಾಟ ಮಾಡಲು ಹೊರಟಿರುವುದು ಸರಿಯಲ್ಲ. ನೈಸರ್ಗಿಕ ಸಂಪನ್ಮೂಲ ಹೊಂದಿರುವ ಭೂಮಿಯನ್ನು ಪರಭಾರೆ ಮಾಡದೆ, ಲೀಸ್‌ ನೀಡಲು ರಾಜ್ಯ ಸರಕಾರ ಚಿಂತನೆ ನಡೆಸಬೇಕು. ಈ ವಿಚಾರವನ್ನು ಸದನ ಸಮಿತಿಯಲ್ಲಿ ಗಂಭೀರವಾಗಿ ಪರಿಶೀಲಿಸಿ ಮುಂದಿನ ತೀರ್ಮಾನ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.

ಈಗಾಗಲೇ ಜನಸಂಗ್ರಾಮ ಪರಿಷತ್‌ ಸಭೆ ನಡೆಸಿದ್ದು, ಜಿಂದಾಲ ಕಂಪೆನಿ ಅವ್ಯವಹಾರ, ಕಾನೂನು ಬಾಹಿರ ಚಟುವಟಿಕೆ ಕುರಿತು ಜನಾಂದೋಲನ ರೂಪಿಸಿ ತಾರ್ಕಿಕ ಅಂತ್ಯ ಕಾಣಿಸಲು ನಿರ್ಣಯ ಕೈಗೊಳ್ಳಲಾಗಿದೆ. ಅಲ್ಲದೆ, ರಾಜಕೀಯ ಮುಖಂಡರಾದ ಬಸವರಾಜ ಹೊರಟ್ಟಿ, ಎಚ್‌.ವಿಶ್ವನಾಥ ಅವರನ್ನು ಭೇಟಿಯಾಗಲು ನಿರ್ಣಯಿಸಲಾಗಿದೆ. ಈ ಸಂಬಂಧ ಈಗಾಗಲೇ ವಿಧಾನಸಭೆ ಪ್ರತಿಪಕ್ಷ ನಾಯಕ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಪತ್ರ ಬರೆಯಲಾಗಿದೆ. ಈ ಹೋರಾಟಕ್ಕೆ ಬೆಂಬಲಿಸುವ ಭರವಸೆ ವ್ಯಕ್ತಪಡಿಸಿರುವುದು ಸ್ವಾಗತಾರ್ಹ ಎಂದರು.

ಕಪ್ಪತ್ತಗುಡ್ಡ ಸಂರಕ್ಷಣೆಗಾಗಿ ಜು.13, 14 ರಂದು ಗದಗ ತೋಂಟದಾರ್ಯ ಮಠದಲ್ಲಿ ಉಳಿಸಿ ಬೆಳೆಸಿ ಬಳಸಿ ಚಿಂತನಾ ಶಿಬಿರ ಹಮ್ಮಿಕೊಳ್ಳಲಾಗಿದೆ. ಶಿಬಿರದಲ್ಲಿ ನಾಡಿನ ಜನತೆ ಭಾಗವಹಿಸಿ ಅರಣ್ಯ ಸಂರಕ್ಷಣೆ ಕಾರ್ಯಕ್ಕೆ ಕೈ ಜೋಡಿಸಬೇಕು ಎಂದು ಹಿರೇಮಠ ಮನವಿ ಮಾಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ