ಆ್ಯಪ್ನಗರ

ಬಂಡಾಯ :ಬಿಜೆಪಿಯಲ್ಲಿ ಶಮನ, ಕಾಂಗ್ರೆಸ್‌ನಲ್ಲಿ ಭುಗಿಲು

ಹುಬ್ಬಳ್ಳಿ : ತೀವ್ರ ಕುತೂಹಲಕ್ಕೆ ಕಾರಣವಾಗಿರುವ ಕುಂದಗೋಳ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಬಂಡಾಯಕ್ಕೆ ಉಪಶಮನ ದೊರೆತಿದೆ. ಇನ್ನೊಂದೆಡೆ ಕಾಂಗ್ರೆಸ್‌ನಲ್ಲಿ ಬಂಡಾಯ ಭುಗಿಲೆದ್ದಿದೆ.

Vijaya Karnataka 30 Apr 2019, 5:00 am
ಹುಬ್ಬಳ್ಳಿ : ತೀವ್ರ ಕುತೂಹಲಕ್ಕೆ ಕಾರಣವಾಗಿರುವ ಕುಂದಗೋಳ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಬಂಡಾಯಕ್ಕೆ ಉಪಶಮನ ದೊರೆತಿದೆ. ಇನ್ನೊಂದೆಡೆ ಕಾಂಗ್ರೆಸ್‌ನಲ್ಲಿ ಬಂಡಾಯ ಭುಗಿಲೆದ್ದಿದೆ.
Vijaya Karnataka Web rebel relieves bjp opposition in congress
ಬಂಡಾಯ :ಬಿಜೆಪಿಯಲ್ಲಿ ಶಮನ, ಕಾಂಗ್ರೆಸ್‌ನಲ್ಲಿ ಭುಗಿಲು


ಕಾಂಗ್ರೆಸ್‌ ಟಿಕೆಟ್‌ ವಂಚಿತರು ಎಂಟು ಜನರು ನಾಮಪತ್ರ ಸಲ್ಲಿಸಲು ಕೊನೆಯ ದಿನ ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ. ಇದರೊಂದಿಗೆ ಕಾಂಗ್ರೆಸ್‌ಗೆ ಎಂಟು ಜನರು ಸೆಡ್ಡು ಹೊಡೆದಿದ್ದು ಅದರಲ್ಲಿ ಏಳು ಜನರು ನಾಮಪತ್ರ ಸಲ್ಲಿಸಿದ್ದಾರೆ. ಈ ಏಳು ಜನರಲ್ಲಿ ಒಬ್ಬರು ಕಣದಲ್ಲಿ ಉಳಿದು ಉಳಿದ ಆರು ಜನರು ನಾಮಪತ್ರ ವಾಪಸ್‌ ಪಡೆಯುವುದಾಗಿ ಬಂಡಾಯ ಅಭ್ಯರ್ಥಿಗಳು ಸ್ಪಷ್ಟಪಡಿಸಿದ್ದಾರೆ.

ಶಿವಾನಂದ ಬೆಂತೂರು, ಗುರುನಾಥ ಘೋರ್ಪಡೆ, ಎಚ್‌.ಎಲ್‌.ನದಾಫ್‌, ವಿಶ್ವನಾಥ ಕುಬಿಹಾಳ, ಸುರೇಶ ಸವಣೂರು ಈ ಐವರು ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ. ಇವರೊಂದಿಗೆ ಗುರುತಿಸಿಕೊಂಡಿದ್ದ ಮಾಜಿ ಶಾಸಕ ಗೋವಿಂದಪ್ಪ ಜುಟ್ಟಲ್‌ ಅವರ ಪುತ್ರ ಚಂದ್ರಶೇಖರ ಜುಟ್ಟಲ್‌, ಹಜರತ್‌ಅಲಿ ಜೋಡಮನಿ ಎರಡು ದಿನ ಹಿಂದೆಯೇ ನಾಮಪತ್ರ ಸಲ್ಲಿಸಿದ್ದಾರೆ. ಇವರೊಂದಿಗೆ ಮಾಜಿ ಸಚಿವ ಪಿ.ಸಿ.ಸಿದ್ದನಗೌಡರ ಪುತ್ರ ಜಗನ್ನಾಥಗೌಡ ಸಿದ್ದನಗೌಡ ಕೂಡ ಗುರುತಿಸಿಕೊಂಡಿದ್ದಾರೆ. ಆದರೆ ಇವರು ನಾಮಪತ್ರ ಸಲ್ಲಿಸಿಲ್ಲ.

ಬಂಡಾಯ ಅಭ್ಯರ್ಥಿಗಳು ಎಲ್ಲರೂ ಒಟ್ಟಾಗಿ ತಮ್ಮ ಅಪಾರ ಬೆಂಬಲಿಗರೊಂದಿಗೆ ತಹಸೀಲ್ದಾರ್‌ ಕಚೇರಿಯೊಳಗೆ ಬಂದು ಪ್ರತ್ಯೇಕವಾಗಿ ತೆರಳಿ ನಾಮಪತ್ರ ಸಲ್ಲಿಸಿದ್ದು ವಿಶೇಷ. ಇವರು ಸಹ ಬೃಹತ್‌ ರೋಡ್‌ ಶೋ ನಡೆಸುವ ಮೂಲಕ ತಮ್ಮ ಶಕ್ತಿ ಪ್ರದರ್ಶನ ನಡೆಸಿ ಕಾಂಗ್ರೆಸ್‌ ಮುಖಂಡರಿಗೆ ಸೆಡ್ಡು ಹೊಡೆದಿದ್ದಾರೆ. ಮೆರವಣಿಗೆಯಲ್ಲಿ ಎಲ್ಲರೂ ಕಾಂಗ್ರೆಸ್‌ ಧ್ವಜ ಹಿಡಿದಿದ್ದು ಮತ್ತೊಂದು ವಿಶೇಷವಾಗಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ