ಆ್ಯಪ್ನಗರ

ಪ್ರತಿಕೃತಿ ದಹನ, ಕಾರ್ಯಕರ್ತರ ಬಂಧನ

ಹುಬ್ಬಳ್ಳಿ : ಸಮ್ಮಿಶ್ರ ಸರಕಾರ ಉರುಳಿಸಲು ಅಪರೇಶನ್‌ ಕಮಲ ನಡೆಸುತ್ತಿರುವ ಬಿಜೆಪಿ ರಾಜಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರ ನಡೆಯನ್ನು ಖಂಡಿಸಿ ನಗರದ ಪಾಲಿಕೆ ವೃತ್ತದಲ್ಲಿ ಶನಿವಾರ ಪ್ರತಿಭಟನೆ ನಡೆಸಿದ ಧಾರವಾಡ ಜಿಲ್ಲಾ ಕಾಂಗ್ರೆಸ್‌ ಸಮಿತಿ ಪದಾಧಿಕಾರಿಗಳು ಬಿಎಸ್‌ವೈ ಪ್ರತಿಕೃತಿ ದಹಿಸಿ ಆಕ್ರೊಶ ವ್ಯಕ್ತಪಡಿಸಿದರು. ಇದೇ ವೇಳೆ ರಸ್ತೆ ತಡೆಗೆ ಮುಂದಾದ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿ ಬಿಡುಗಡೆಗೊಳಿಸಿದ ಘಟನೆಯೂ ನಡೆಯಿತು.

Vijaya Karnataka 10 Feb 2019, 5:00 am
ಹುಬ್ಬಳ್ಳಿ : ಸಮ್ಮಿಶ್ರ ಸರಕಾರ ಉರುಳಿಸಲು ಅಪರೇಶನ್‌ ಕಮಲ ನಡೆಸುತ್ತಿರುವ ಬಿಜೆಪಿ ರಾಜಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರ ನಡೆಯನ್ನು ಖಂಡಿಸಿ ನಗರದ ಪಾಲಿಕೆ ವೃತ್ತದಲ್ಲಿ ಶನಿವಾರ ಪ್ರತಿಭಟನೆ ನಡೆಸಿದ ಧಾರವಾಡ ಜಿಲ್ಲಾ ಕಾಂಗ್ರೆಸ್‌ ಸಮಿತಿ ಪದಾಧಿಕಾರಿಗಳು ಬಿಎಸ್‌ವೈ ಪ್ರತಿಕೃತಿ ದಹಿಸಿ ಆಕ್ರೊಶ ವ್ಯಕ್ತಪಡಿಸಿದರು. ಇದೇ ವೇಳೆ ರಸ್ತೆ ತಡೆಗೆ ಮುಂದಾದ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿ ಬಿಡುಗಡೆಗೊಳಿಸಿದ ಘಟನೆಯೂ ನಡೆಯಿತು.
Vijaya Karnataka Web DRW-9MANJU8A
ಪಾಲಿಕೆ ವೃತ್ತದ ಬಳಿ ಧಾರವಾಡ ಜಿಲ್ಲಾ ಕಾಂಗ್ರೆಸ್‌ ಪದಾಧಿಕಾರಿಗಳು ಬಿ.ಎಸ್‌. ಯಡಿಯೂರಪ್ಪ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದರು.


ನಗರದ ಅಂಬೇಡ್ಕರ್‌ ಸರ್ಕಲ್‌ದಿಂದ ಪಾಲಿಕೆ ವೃತ್ತದ ವರೆಗೆ ಪ್ರತಿಭಟನಾ ರಾರ‍ಯಲಿ ನಡೆಸಿದ ಕಾಂಗ್ರೆಸ್‌ ಕಾರ್ಯಕರ್ತರು ಬಿಜೆಪಿ ನಾಯಕರ ವಿರುದ್ಧ ಘೋಷಣೆ ಕೂಗಿದರು. ಯಡಿಯೂರಪ್ಪ ಅವರು ಹಿರಿಯ ರಾಜಕಾರಣಿಯಾಗಿ ಅಧಿಕಾರಕ್ಕಾಗಿ ಕೀಳು ಮಟ್ಟದ ರಾಜಕೀಯಕ್ಕೆ ಇಳಿದಿದ್ದಾರೆ ಎಂದು ದೂರಿದರು.

ಪ್ರತಿಪಕ್ಷವಾಗಿ ವಿಫಲ

ಕಾಂಗ್ರೆಸ್‌, ಜೆಡಿಎಸ್‌ ನೇತೃತ್ವದಲ್ಲಿ ಸರಕಾರ ರಚನೆಯಾಗಿ 8 ತಿಂಗಳು ಕಳೆದರೂ ಒಂದು ದಿನವೂ ಪ್ರತಿಪಕ್ಷದ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸದ ಬಿಜೆಪಿ, ರೆಸಾರ್ಟ್‌ ರಾಜಕಾರಣ, ಕಾಂಗ್ರೆಸ್‌, ಜೆಡಿಎಸ್‌ ಶಾಸಕರಿಗೆ ಕೋಟಿ ಕೋಟಿ ರೂ. ಆಮಿಷ ಒಡ್ಡುವುದರಲ್ಲಿಯೇ ಕಾಲ ಕಳೆಯುತ್ತಿದ್ದಾರೆ. ಪ್ರತಿಪಕ್ಷ ದ ನಾಯಕರಾಗಿ ಸರಕಾರದ ತಪ್ಪುಗಳನ್ನು ತಿದ್ದುವ ಕೆಲಸ ಮಾಡಬೇಕಾದ ಅವರು ಸರಕಾರದ ವಿರುದ್ಧ ಕೆಲಸ ಮಾಡುತ್ತಿರುವುದು ದುರದೃಷ್ಟಕರ ಸಂಗತಿ ಎಂದು ಕಿಡಿಕಾರಿದರು.

ಪ್ರತಿಭಟನೆಯಲ್ಲಿ ಹು-ಧಾ ಮಹಾನಗರ ಜಿಲ್ಲಾ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಅಲ್ತಾಫ್‌ಹುಸೇನ ಹಳ್ಳೂರ, ಧಾರವಾಡ ಗ್ರಾಮೀಣ ಜಿಲ್ಲಾ ಕಾಂಗ್ರೆಸ್‌ ಸಮಿತಿ ಅಧ್ಯಕ್ಷಅನಿಲಕುಮಾರ ಪಾಟೀಲ, ಪಾಲಿಕೆ ಸದಸ್ಯ ಅಲ್ತಾಫ ಕಿತ್ತೂರ, ಮುಖಂಡರಾದ ಸದಾನಂದ ಡಂಗನವರ, ರಜತ್‌ ಉಳ್ಳಾಗಡ್ಡಿಮಠ, ನವೀದ ಮುಲ್ಲಾ, ಅಬ್ದುಲ್‌ ಗಣಿ, ಶಾರುಖ ಮುಲ್ಲಾ, ಬಂಗಾರೇಶ ಹಿರೇಮಠ, ವಿನಾಯಕ, ದೀಪಕ್‌, ರಾಜು, ಕಿರಣ, ರಾಕೇಶ, ಚಂದನರಾಣಿ ಸೇರಿದಂತೆ ಇತರರು ಇದ್ದರು.

ಪ್ರತಿಭಟನಾಕಾರರ ಬಂಧನ, ಬಿಡುಗಡೆ

ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ವೇಳೆ ಪಾಲಿಕೆ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸುವ ಮೂಲಕ ರಸ್ತೆ ತಡೆಗೆ ಮುಂದಾದರು. ಅಲ್ಲದೆ ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ಪ್ರತಿಭಟನೆಯನ್ನೂ ಮುಂದುವರಿಸಿದರು. ಹೀಗಾಗಿ ಎಸಿಪಿ ಎಚ್‌.ಕೆ. ಪಠಾಣ ನೇತೃತ್ವದಲ್ಲಿ ಪ್ರತಿಭಟನಾರರನ್ನು ಪ್ರತಿಭಟನಾಕಾರರನ್ನು ಬಂಧಿಸಿದ ಪೊಲೀಸರು, ಅವರನ್ನು ಖಾಸಗಿ ಬಸ್‌ನಲ್ಲಿ ಸಿಎಆರ್‌ ಮೈದಾನಕ್ಕೆ ಕರೆದ್ಯೊಯ್ದರು. ನಂತರ ಪ್ರತಿಭಟನಾಕಾರರನ್ನು ಪೊಲೀಸರು ಬಿಡುಗಡೆಗೊಳಿಸಿದರು. ಪಾಲಿಕೆ ವೃತ್ತದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರಿಂದ ವಾಹನ ಸವಾರರು ಮತ್ತು ಪ್ರಯಾಣಿಕರುತೀವ್ರ ಟ್ರಾಫಿಕ್‌ ಸಮಸ್ಯೆ ಅನುಭವಿಸಬೇಕಾಯಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ