ಆ್ಯಪ್ನಗರ

ಬೆಳೆ ಹಾನಿ ವರದಿ ನೀಡಿ

ಹುಬ್ಬಳ್ಳಿ :ಇತ್ತೀಚೆಗೆ ಸುರಿದ ಮಳೆಯಿಂದ ತಾಲೂಕಿನಲ್ಲಿ ಬೆಳೆ ಹಾನಿಯಾಗಿದೆ ಎಂಬ ಮಾಹಿತಿ ಇದೆ. ಕೂಡಲೇ ಅಧಿಕಾರಿಗಳು ಮಳೆ ಹಾನಿ ಕುರಿತು ಪರೀಕ್ಷಿಸಿ ವರದಿ ನೀಡಿ ಎಂದು ಕುಂದಗೋಳ ಮತಕ್ಷೇತ್ರದ ಶಾಸಕ ಸಿ.ಎಸ್‌.ಶಿವಳ್ಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

Vijaya Karnataka 30 Aug 2018, 5:00 am
ಹುಬ್ಬಳ್ಳಿ :ಇತ್ತೀಚೆಗೆ ಸುರಿದ ಮಳೆಯಿಂದ ತಾಲೂಕಿನಲ್ಲಿ ಬೆಳೆ ಹಾನಿಯಾಗಿದೆ ಎಂಬ ಮಾಹಿತಿ ಇದೆ. ಕೂಡಲೇ ಅಧಿಕಾರಿಗಳು ಮಳೆ ಹಾನಿ ಕುರಿತು ಪರೀಕ್ಷಿಸಿ ವರದಿ ನೀಡಿ ಎಂದು ಕುಂದಗೋಳ ಮತಕ್ಷೇತ್ರದ ಶಾಸಕ ಸಿ.ಎಸ್‌.ಶಿವಳ್ಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
Vijaya Karnataka Web report crop damage
ಬೆಳೆ ಹಾನಿ ವರದಿ ನೀಡಿ


ಮಿನಿವಿಧಾನ ಸೌಧದಲ್ಲಿ ಮಂಗಳವಾರ ನಡೆದ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷ ತೆ ವಹಿಸಿ ಮಾತನಾಡಿದ ಅವರು, ಮಳೆಯಿಂದ ಹೆಸರು ಸೇರಿದಂತೆ ಕಟಾವಿಗೆ ಬಂದ ಫಸಲು ಹಾನಿಯಾಗುತ್ತಿದೆ ಎಂದು ರೈತರು ಅಳಲು ವ್ಯಕ್ತಪಡಿಸುತ್ತಿದ್ದಾರೆ. ಈ ಕುರಿತು ಅಧಿಕಾರಿಗಳು ವರದಿ ನೀಡಿದರೆ ಸರಕಾರದೊಂದಿಗೆ ಚರ್ಚಿಸಿ ರೈತರಿಗೆ ಪರಿಹಾರ ದೊರಕಿಸುವ ಪ್ರಯತ್ನ ಮಾಡೋಣ ಎಂದರು.

ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಇರುವುದೆ ಜನರ ಸೇವೆ ಮಾಡಲು. ನಾವೇ ಜವಾಬ್ದಾರಿಯಿಂದ ನುಣುಚಿಕೊಂಡರೆ ಜನರ ಸಮಸ್ಯೆ ಬಗೆಹರಿಸುವುದು ಹೇಗೆ. ಅಧಿಕಾರಿಗಳು ಸರಿಯಾಗಿ ಕೆಲಸ ನಿರ್ವಹಿಸಿದರೆ ಮಾತ್ರ ಜನರ ಸಮಸ್ಯೆಗಳಿಗೆ ಮುಕ್ತಿ ಸಿಗಲು ಸಾಧ್ಯ ಎಂದರು.

ತಾಲೂಕಿನಲ್ಲಿ ಕುಡಿಯುವ ನೀರು, ರಸ್ತೆ ದುರಸ್ಥಿ, ನೈರ್ಮಲಿಕರಣ ಸೇರಿದಂತೆ ಮೂಲ ಸೌಕರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಸ್ಥಳಿಯ ಜಲ ಮೂಲಗಳನ್ನು ಸಂರಕ್ಷಿಸಿ ಅವುಗಳ ಮೂಲಕ ಗ್ರಾಮದ ಜನರಿಗೆ ನೀರು ಪೂರೈಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಅದನ್ನು ಬಿಟ್ಟು ದೂರದಿಂದ ಪೈಪ್‌ ಮೂಲಕ ನೀರು ಪೂರೈಸುವ ಕಾರ್ಯಕ್ಕೆ ಮುಂದಾಗಿ ಗ್ರಾಮದಲ್ಲಿ ಮತ್ತಷ್ಟು ಜಲ ಸಮಸ್ಯೆ ಉದ್ಬವಿಸಲು ಕಾರಣವಾಗಬೇಡಿ ಎಂದರು.

ಅಂಚಟಗೇರಿ, ಬಮ್ಮಸಮುದ್ರ ಸೇರಿದಂತೆ ಮಲೆನಾಡ ಸೆರಗಿನ ಹಳ್ಳಿಗಳಲ್ಲಿ ನೀರಿನ ಸಮಸ್ಯೆ ಉದ್ಬವಿಸಿದೆ. ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗಲಿದ್ದು ಕೂಡಲೆ ಅಧಿಕಾರಿಗಳು ಎಚ್ಚೆತ್ತು ಕಾರ್ಯಪ್ರವೃತ್ತರಾಗಬೇಕಿದೆ ಎಂದು ಹೇಳಿದರು.

ತಾಲೂಕಿನ ಅನೇಕ ಹಳ್ಳಿಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಕೆಲ ಹಳ್ಳಿಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಪ್ರಾರಂಭಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪರಿಹಾರ ಹಣ ನೀಡಿ:

6 ತಿಂಗಳ ಹಿಂದೆ ಅದರಗುಂಚಿ ಗ್ರಾಮದಲ್ಲಿ ವಿದ್ಯುತ್‌ ಅವಘಡದಲ್ಲಿ ಮನೆಗೆ ಹಾನಿಯಾಗಿ ಒರ್ವ ವ್ಯಕ್ತಿ ಮೃತಪಟ್ಟಿದ್ದಾನೆ. ಆದರೆ ಆ ಕುಟುಂಬ ಸದಸ್ಯರಿಗೆ ಇನ್ನೂ ಪರಿಹಾರ ಸಿಕ್ಕಿಲ್ಲ. ಇದಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ. ಈಗಾಗಲೆ ಒಂದು ಜೀವ ಬಲಿಯಾಗಿದೆ. ಪರಿಹಾರಕ್ಕಾಗಿ ಅಲೆದು ಅಲೆದು ಇನ್ನೊಂದು ಜೀವಹಾನಿ ಮಾಡಬೇಡಿ. ಜಿಪಂ ಸಿಇಒ, ಗೃಹಮಂಡಳಿ ಹಾಗೂ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹಾರ ನೀಡಿ ಎಂದು ಹೇಳಿದರು.

ಸಂಧ್ಯಾ ಸುರಕ್ಷಾ ಯೋಜನೆ, ವಿಧವಾ ಯೋಜನೆ, ಸೌಭಾಗ್ಯ ಯೋಜನೆ, ಭಾಗ್ಯ ಜ್ಯೋತಿ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಸರಿಯಾದ ವ್ಯವಸ್ಥೆ ಇಲ್ಲ. ಅಂಚಟಗೇರಿ ಗ್ರಾಮದಲ್ಲಿ ಅರ್ಜಿ ಸ್ವೀಕರಿಸಲು ಯಾರೂ ಇಲ್ಲ. ಅಲ್ಲದೆ ಅರ್ಜಿ ಸಲ್ಲಿಸಿದವರಿಗೆ ಸರಿಯಾಗಿ ಸೌಲಭ್ಯ ಮುಟ್ಟಿಸುವ ಕಾರ್ಯವಾಗುತ್ತಿಲ್ಲ ಎಂದು ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಸಭೆಯಲ್ಲಿ ಹುಬ್ಬಳ್ಳಿ ತಹಸೀಲ್ದಾರ್‌ ಶಶಿಧರ ಮಾಡ್ಯಾಳ, ತಾ.ಪಂ. ಇಒ ಗಂಗಾಧರ ಕುಂದಕೋರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ