ಆ್ಯಪ್ನಗರ

ನೇಮಕಾತಿ ಅಕ್ರಮ ತನಿಖೆಗೆ ಆಗ್ರಹ

ಧಾರವಾಡ: ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರ ನೇಮಕಾತಿಯಲ್ಲಿ ಅಕ್ರಮ ನಡೆದಿದ್ದು, ಈ ಬಗ್ಗೆ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆ ನಡೆಸಲು ಆದೇಶಿಸಬೇಕು ಎಂದು ಡಾ.ರಮೇಶ ವಡವಿ ಸರಕಾರವನ್ನು ಆಗ್ರಹಿಸಿದರು.

Vijaya Karnataka 25 Aug 2019, 5:00 am
ಧಾರವಾಡ: ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರ ನೇಮಕಾತಿಯಲ್ಲಿ ಅಕ್ರಮ ನಡೆದಿದ್ದು, ಈ ಬಗ್ಗೆ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆ ನಡೆಸಲು ಆದೇಶಿಸಬೇಕು ಎಂದು ಡಾ.ರಮೇಶ ವಡವಿ ಸರಕಾರವನ್ನು ಆಗ್ರಹಿಸಿದರು.
Vijaya Karnataka Web request for illegal recruitment of recruits
ನೇಮಕಾತಿ ಅಕ್ರಮ ತನಿಖೆಗೆ ಆಗ್ರಹ


ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಒಂದು ವೇಳೆ ಸರಕಾರ ಈ ವಿಷಯದಲ್ಲಿ ನಿರ್ಲಕ್ಷ ್ಯ ತೋರಿಸಿದರೆ ನ್ಯಾಯಾಲಯದ ಮೆಟ್ಟಿಲೇರಲಾಗುವುದು ಎಂದು ವಡವಿ ತಿಳಿಸಿದರು.

ವಿಶ್ವವಿದ್ಯಾಲಯದಲ್ಲಿನ ವಿವಿಧ ವಿಭಾಗಗಳ ಒಟ್ಟು 117 ಪ್ರಾಧ್ಯಾಪಕರ ಪ್ರಾಧ್ಯಾಪಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಅನೇಕ ಅರ್ಹ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಆದರೆ, ವಿಶ್ವವಿದ್ಯಾಲಯದ ಆಡಳಿತವು ಲಿಖಿತ ಪರೀಕ್ಷೆ ಮತ್ತು ಮೌಖಿಕ ಸಂದರ್ಶನದಲ್ಲಿ ಪಾರದರ್ಶಕತೆ ಕಾಯ್ದುಕೊಂಡಿಲ್ಲ. ಅಲ್ಲದೇ ಮನಬಂದಂತೆ ಅಂಕಗಳನ್ನು ನೀಡುವ ಮೂಲಕ ಪಕ್ಷ ಪಾತ ಎಸಗಲಾಗಿದೆ. ನೇಮಕಾತಿ ಸಂದರ್ಭದಲ್ಲಿ ಪಾಲಿಸಬೇಕಾದ ಯಾವುದೇ ನಿಯಮಗಳನ್ನೂ ಅನುಸರಿಸದೇ ಉಲ್ಲಂಘಿಸಲಾಗಿದೆ ಎಂದು ದೂರಿದರು.

ಹೀಗಾಗಿ ಕುಲಪತಿ ಪ್ರೊ.ಶರಣಪ್ಪ ಹಲಸೆ ಅವರ ಅವಧಿಯಲ್ಲಿ ನೇಮಕಾತಿಯಲ್ಲಿ ಈ ಅಕ್ರಮ ನಡೆದಿರುವುದು ಗೊತ್ತಾಗಿದೆ. ಇದರಿಂದ ಅರ್ಹ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ. ಈ ಬಗ್ಗೆ ಪ್ರಧಾನ ಮಂತ್ರಿಗಳು, ಮುಖ್ಯಮಂತ್ರಿಗಳು, ಉನ್ನತ ಶಿಕ್ಷ ಣ ಇಲಾಖೆಯ ಅಧಿಕಾರಿಗಳ ಸೇರಿದಂತೆ ಜವಾಬ್ದಾರಿ ಇರುವ ಅನೇಕರಿಗೆ ಪತ್ರ ಬರೆದು ಮನವಿ ಮಾಡಿದರೂ ಇದುವರೆಗೂ ಯಾರೂ ಉತ್ತರಿಸಿಲ್ಲ.ಹೀಗಾಗಿ ಚುನಾಯಿತ ಪ್ರತಿನಿಧಿಗಳು ಮತ್ತು ಅಧಿಕಾರಿಗಳ ಮೇಲೆ ವಿಶ್ವಾಸ ಇಲ್ಲದಂತಾಗಿದೆ. ಆದ್ದರಿಂದ ಈ ಪ್ರಕರಣವನ್ನು ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆ ನಡೆಸಲು ಸರಕಾರ ಆದೇಶಿಸಬೇಕು ಎಂದು ಡಾ.ವಡವಿ ಸ್ಪಷ್ಟಪಡಿಸಿದರು. ಪತ್ರಿಕಾಗೋಷ್ಠಿಯಲ್ಲಿ ಡಾ.ನಾಗರಾಜ ಎಸ್‌. ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ