ಆ್ಯಪ್ನಗರ

ಎಪಿಪಿ ಪರೀಕ್ಷಾ ಕೇಂದ್ರ ತೆರೆಯಲು ಅಗ್ರಹ

ಧಾರವಾಡ: ಧಾರವಾಡದಲ್ಲಿ ಸಹಾಯಕ ಸರಕಾರಿ ಅಭಿಯೋಜಕರ (ಎಪಿಪಿ) ಪರೀಕ್ಷಾ ಕೇಂದ್ರ ತೆರೆಯಬೇಕು ಎಂದು ಆಗ್ರಹಿಸಿ ಧಾರವಾಡ ವಕೀಲರ ಸಂಘದಿಂದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಭಾನುವಾರ ಮನವಿ ಸಲ್ಲಿಸಲಾಯಿತು.

Vijaya Karnataka 18 Nov 2019, 5:00 am
ಧಾರವಾಡ: ಧಾರವಾಡದಲ್ಲಿ ಸಹಾಯಕ ಸರಕಾರಿ ಅಭಿಯೋಜಕರ (ಎಪಿಪಿ) ಪರೀಕ್ಷಾ ಕೇಂದ್ರ ತೆರೆಯಬೇಕು ಎಂದು ಆಗ್ರಹಿಸಿ ಧಾರವಾಡ ವಕೀಲರ ಸಂಘದಿಂದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಭಾನುವಾರ ಮನವಿ ಸಲ್ಲಿಸಲಾಯಿತು.
Vijaya Karnataka Web request to open app test center
ಎಪಿಪಿ ಪರೀಕ್ಷಾ ಕೇಂದ್ರ ತೆರೆಯಲು ಅಗ್ರಹ


ಮನವಿಯಲ್ಲಿ ಉತ್ತರ ಕರ್ನಾಟಕದ ಎಲ್ಲಎಪಿಪಿ ಪರೀಕ್ಷಾರ್ಥಿಗಳಿಗೆ ಅನುಕೂಲ ಆಗಲು ಈ ಮೊದಲು ಸಿವಿಲ್‌ ನ್ಯಾಯಾಧೀಶರ ನೇಮಕಾತಿಗಾಗಿ ಹಾಗೂ ಐಎಎಸ್‌, ಕೆಎಎಸ್‌, ಎಸ್‌ಡಿಸಿ, ಎಫ್‌ಡಿಸಿ, ಕೆಪಿಎಸ್‌ಸಿ ಹಾಗೂ ಇತರೆ ಸಾಕಷ್ಟು ಪರೀಕ್ಷೆಗಳನ್ನು ಧಾರವಾಡದಲ್ಲಿನಿಗದಿಪಡಿಸಿ ನಡೆಸುತ್ತಾ ಬಂದಿದ್ದು ಇರುತ್ತದೆ.ಆದರೆ ಹಲವು ದಿನಗಳಿಂದ ಬೆಂಗಳೂರಿನಲ್ಲಿ ಪರೀಕ್ಷಾ ಕೇಂದ್ರವನ್ನು ನಿಗದಿಪಡಿಸಿ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿಪರೀಕ್ಷೆ ನಡೆಸುವುದರಿಂದ ಉತ್ತರ ಕರ್ನಾಟಕ ಭಾಗದ ಕಿರಿಯ ವಕೀಲರು ಆರ್ಥಿಕವಾಗಿ ಹಿಂದುಳಿದಿದ್ದು, ಬೆಂಗಳೂರಿಗೆ ಹೋಗಿ ಪರೀಕ್ಷೆ ಬರೆಯಲು ಆರ್ಥಿಕವಾಗಿ ಹೊರೆಯಾಗುತ್ತದೆ. ಅಲ್ಲದೇ ಮಹಿಳಾ ಅಭ್ಯರ್ಥಿಗಳಿಗೆ ಪಾಲಕರಿಲ್ಲದೆ ಪರೀಕ್ಷೆ ಬರೆಯಲು ಹೋಗುವುದು ಕಷ್ಟವಾಗುತ್ತದೆ ಎಂದು ಅಳಲು ತೋಡಿಕೊಂಡಿದ್ದಾರೆ.

ಧಾರವಾಡ ವಕೀಲರ ಸಂಘದ ಅಧ್ಯಕ್ಷ ಬಿ.ಎಸ್‌. ಗೋಡಸೆ, ಉಪಾಧ್ಯಕ್ಷ ರಾಜು ಆರ್‌. ಕೋಟಿ, ಎನ್‌.ಆರ್‌. ಮಟ್ಟಿ, ಆಶೀಷ ಮಗದುಮ್ಮ, ಎನ್‌.ಬಿ.ಖೈರೋನವರ, ಪಿ.ಎಚ, ನಿರಲಕೇರಿ, ಎಂ.ಎನ್‌.ತಾರಿಹಾಳ, ಸಂತೋಷ ಭಾವಿಹಾಳ, ಕೃಷ್ಣಾಜಿ ಪವಾರ, ಪ್ರಕಾಶ ಭಾವಿಕಟ್ಟಿ, ರಾಹುಲ ಅರವಾಡೆ, ಕಲ್ಮೇಶ ನಿಂಗಣ್ಣವರ , ರೂಪಾ ಕೆಂಗಾನೂರ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ