ಆ್ಯಪ್ನಗರ

ಹಿಂದಿನ ಬಡ್ತಿ ಹುದ್ದೆಗೆ ಸ್ಥಳ ನಿಗದಿಗೊಳಿಸಿ ಆದೇಶ ನೀಡಲು ಆಗ್ರಹ

ಧಾರವಾಡ : ಹಿಂಬಡ್ತಿಗೆ ಒಳಗಾಗಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಜನಾಂಗ ಬೋಧಕೇತರ ನೌಕರರಿಗೆ ಶೀಘ್ರವಾಗಿ ಹಿಂದಿನ ಬಡ್ತಿ ಹುದ್ದೆಗೆ ಸ್ಥಳ ನಿಗದಿಗೊಳಿಸಿ ಆದೇಶ ನೀಡಬೇಕು ಎಂದು ಆಗ್ರಹಿಸಿ ರಾಜ್ಯ ಸರಕಾರಿ ಎಸ್‌ಸಿ-ಎಸ್‌ಟಿ ನೌಕರರ ಸಮನ್ವಯ ಸಮಿತಿ ಜಿಲ್ಲಾ ಘಟಕದ ಪದಾಧಿಕಾರಿಗಳು ನಗರದ ಸಾರ್ವಜನಿಕ ಶಿಕ್ಷ ಣ ಇಲಾಖೆಯ ಅಪರ ಆಯುಕ್ತ ಮೇಜರ್‌ ಸಿದ್ದಲಿಂಗಯ್ಯ ಹಿರೇಮಠ ಮನವಿ ಸಲ್ಲಿಸಿದರು.

Vijaya Karnataka 15 May 2019, 5:00 am
ಧಾರವಾಡ : ಹಿಂಬಡ್ತಿಗೆ ಒಳಗಾಗಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಜನಾಂಗ ಬೋಧಕೇತರ ನೌಕರರಿಗೆ ಶೀಘ್ರವಾಗಿ ಹಿಂದಿನ ಬಡ್ತಿ ಹುದ್ದೆಗೆ ಸ್ಥಳ ನಿಗದಿಗೊಳಿಸಿ ಆದೇಶ ನೀಡಬೇಕು ಎಂದು ಆಗ್ರಹಿಸಿ ರಾಜ್ಯ ಸರಕಾರಿ ಎಸ್‌ಸಿ-ಎಸ್‌ಟಿ ನೌಕರರ ಸಮನ್ವಯ ಸಮಿತಿ ಜಿಲ್ಲಾ ಘಟಕದ ಪದಾಧಿಕಾರಿಗಳು ನಗರದ ಸಾರ್ವಜನಿಕ ಶಿಕ್ಷ ಣ ಇಲಾಖೆಯ ಅಪರ ಆಯುಕ್ತ ಮೇಜರ್‌ ಸಿದ್ದಲಿಂಗಯ್ಯ ಹಿರೇಮಠ ಮನವಿ ಸಲ್ಲಿಸಿದರು.
Vijaya Karnataka Web DRW-14MAILAR01
ಹಿಂಬಡ್ತಿಗೆ ಒಳಗಾಗಿರುವ ಎಸ್‌ಸಿ ಹಾಗೂ ಎಸ್‌ಟಿ ಬೋಧಕೇತರ ನೌಕರರಿಗೆ ಹಿಂದಿನ ಬಡ್ತಿ ಹುದ್ದೆ ಪರಿಗಣಿಸಬೇಕು ಎಂದು ಧಾರವಾಡದಲ್ಲಿ ಸಾರ್ವಜನಿಕ ಶಿಕ್ಷ ಣ ಇಲಾಖೆಯ ಅಪರ ಆಯುಕ್ತ ಮೇಜರ್‌ ಸಿದ್ದಲಿಂಗಯ್ಯ ಹಿರೇಮಠ ಮನವಿ ಸಲ್ಲಿಸಿದರು.


ಶಿಕ್ಷ ಣ ಇಲಾಖೆಗೆ ಮನವಿ ಮಾಡಿಕೊಂಡ ರಾಜ್ಯ ಸರಕಾರಿ ಎಸ್‌ಸಿ-ಎಸ್‌ಟಿ ನೌಕರರ ಸಮನ್ವಯ ಸಮಿತಿ ಜಿಲ್ಲಾ ಘಟಕದ ಪದಾಧಿಕಾರಿಗಳು, ಸೇವೆಯಲ್ಲಿ ಹಿಂಬಡ್ತಿಗೊಳ್ಳುವ ಪೂರ್ವದಲ್ಲಿದ್ದ ಹುದ್ದೆಯ ಸ್ಥಳಕ್ಕೆ ಎಸ್‌ಸಿ ಹಾಗೂ ಎಸ್‌ಟಿ ಎಲ್ಲ ಬೋಧಕೇತರ ನೌಕರರಿಗೆ ಕೂಡಲೇ ಪುನರ್‌ ಸ್ಥಳ ನಿಯುಕ್ತಿಗೊಳಿಸಬೇಕು. ಕರ್ನಾಟಕ ರಾಜ್ಯದ ಸಿವ್ಹಿಲ್‌ ಸೇವೆಗಳಲ್ಲಿನ ಹುದ್ದೆಗಳಿಗೆ ಮೀಸಲಾತಿ ಆಧಾರದ ಮೇಲೆ ಬಡ್ತಿ ಹೊಂದಿರುವ ಸರಕಾರಿ ನೌಕರರಿಗೆ ತತ್ಪರಿಣಾಮದ ಜೇಷ್ಠತೆ ವಿಸ್ತರಿಸುವ ಅಧಿನಿಯಮ-2018ರ ಅಡಿಯನ್ನು ಪರಿಗಣಿಸಬೇಕು ಎಂದು ಒತ್ತಾಯಿಸಿದರು.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷ ಣ ನಿರ್ದೇಶಕ ಡಾ.ಬಿ.ಕೆ.ಎಸ್‌. ವರ್ಧನ್‌ ಅವರಿಗೆ ಮನವಿ ಸಲ್ಲಿಸಿದರು. ಕರ್ನಾಟಕ ರಾಜ್ಯ ಸರಕಾರಿ ಎಸ್‌ಸಿ-ಎಸ್‌ಟಿ ನೌಕರರ ಸಮನ್ವಯ ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಎಸ್‌.ಕೆ. ರಾಮದುರ್ಗ, ಪ್ರಧಾನ ಕಾರ್ಯದರ್ಶಿ ಎಸ್‌.ಬಿ. ಕೇಸರಿ, ಪದಾಧಿಕಾರಿಗಳಾದ ಪಿ.ಎಸ್‌. ಕುಸಗೂರ, ಮಾಲತೇಶ ಇಂಗಳೇಶ್ವರ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ