ಆ್ಯಪ್ನಗರ

ರೋಪಸ್ಕಿಪಿಂಗ್‌ ಸ್ಪರ್ಧೆಯಲ್ಲಿ ಉತ್ತಮ ಸಾಧನೆ

ಧಾರವಾಡ : ಓಡಿಸ್ಸಾದ ಭುವನೇಶ್ವರದ ಕೆಐಐಟಿ ವಿಶ್ವವಿದ್ಯಾಲಯದಲ್ಲಿ ನಡೆದ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯಗಳ ರೋಪಸ್ಕಿಪಿಂಗ್‌ ಸ್ಪರ್ಧೆಯಲ್ಲಿ ಜೆಎಸ್‌ಎಸ್‌ ಬನಶಂಕರಿ ಕಲಾ, ವಾಣಿಜ್ಯ ಮತ್ತು ಶಾಂತಿಕುಮಾರ ಗುಬ್ಬಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.

Vijaya Karnataka 13 Jan 2019, 5:00 am
ಧಾರವಾಡ : ಓಡಿಸ್ಸಾದ ಭುವನೇಶ್ವರದ ಕೆಐಐಟಿ ವಿಶ್ವವಿದ್ಯಾಲಯದಲ್ಲಿ ನಡೆದ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯಗಳ ರೋಪಸ್ಕಿಪಿಂಗ್‌ ಸ್ಪರ್ಧೆಯಲ್ಲಿ ಜೆಎಸ್‌ಎಸ್‌ ಬನಶಂಕರಿ ಕಲಾ, ವಾಣಿಜ್ಯ ಮತ್ತು ಶಾಂತಿಕುಮಾರ ಗುಬ್ಬಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.
Vijaya Karnataka Web ropekkeeping is a great achievement in competition
ರೋಪಸ್ಕಿಪಿಂಗ್‌ ಸ್ಪರ್ಧೆಯಲ್ಲಿ ಉತ್ತಮ ಸಾಧನೆ


ಕಾಲೇಜಿನ ವಿದ್ಯಾರ್ಥಿಗಳಾದ ಆಕಾಶ ಜೋಗರಡ್ಡಿ ವೈಯಕ್ತಿಕ ವಿಭಾಗದ ಸಿಂಗಲ್‌ರೋಪ್‌ ಪ್ರೀ ಸ್ಟೈಲ್‌ ವಿಭಾಗದಲ್ಲಿ 4ನೇಯ ಸ್ಥಾನ ಹಾಗೂ ಗುಂಪು ವಿಭಾಗದ ಸ್ಟೀಡ್‌ ರೀಲೆ ಸ್ಪರ್ಧೆಯಲ್ಲಿ ಕಂಚಿನ ಪದಕ, ಡಬಲ್‌ ಡಚ್ಚ್‌ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಪಡೆದಿದ್ದಾರೆ. ಭೀಮಸೇನ್‌ ಪರಸಾಪೂರ, ಗುಂಪು ವಿಭಾಗದ ಡಬಲ್‌ ಡಚ್ಚ್‌ ಪೇರ್ಸ್‌ ಪ್ರೀ ಸ್ಟೈಲ್‌ ವಿಭಾಗದಲ್ಲಿ ಕಂಚಿನ ಪದಕ, ಕೃಷ್ಣ ಸಿ, ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯಗಳ ಟೇಬಲ್‌ ಟೆನ್ನಿಸ್‌ ಸ್ಪರ್ಧೆಯಲ್ಲಿ ಭಾಗವಹಿಸಿ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯಗಳ ಟೆಬಲ್‌ ಟೆನ್ನೀಸ್‌ ಸ್ಪರ್ಧೆಯಲ್ಲಿ 4ನೇ ಸ್ಥಾನ ಪಡೆದಿದ್ದಾರೆ.

ಸಾಧನೆ ಮಾಡಿದ ಕ್ರೀಡಾ ಪಟುಗಳಿಗೆ ಸಂಸ್ಥೆಯ ಕಾರ್ಯದರ್ಶಿ ಡಾ. ನ.ವಜ್ರಕುಮಾರ, ವಿತ್ತಾಧಿಕಾರಿ ಡಾ. ಅಜಿತಪ್ರಸಾದ, ಪ್ರಾಚಾರ್ಯ ಡಾ. ಜಿ.ಕೃಷ್ಣಮೂರ್ತಿ, ದೈಹಿಕ ನಿರ್ದೇಶಕ ಜೆ.ಆರ್‌. ಕುಂದಗೋಳ, ಶ್ರವಣ ಯೋಗಿ, ಗಣೇಶ ನಾಯಕ, ಬೋಧಕ, ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ