ಆ್ಯಪ್ನಗರ

ತುಂಡು ಗುತ್ತಿಗೆಯಿಂದ 10 ಸಾವಿರ ಕೋಟಿ ರೂ. ನಷ್ಟ

ಕುಂದಗೋಳ: ಲೋಕೋಪಯೋಗಿ ಇಲಾಖೆಯಲ್ಲಿ ಗುತ್ತಿಗೆ ನಿಯಮಾವಳಿಗಳನ್ನು ಗಾಳಿಗೆ ತೂರಿ ತುಂಡು ಗುತ್ತಿಗೆ ಕಾಮಗಾರಿಗೆ ಅನುಮೋದನೆ ನೀಡಿದ್ದರಿಂದ ರಾಜ್ಯದ ಬೊಕ್ಕಸಕ್ಕೆ 10 ಸಾವಿರ ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಆರೋಪಿಸಿದ್ದಾರೆ.

Vijaya Karnataka 15 May 2019, 5:00 am
ಕುಂದಗೋಳ: ಲೋಕೋಪಯೋಗಿ ಇಲಾಖೆಯಲ್ಲಿ ಗುತ್ತಿಗೆ ನಿಯಮಾವಳಿಗಳನ್ನು ಗಾಳಿಗೆ ತೂರಿ ತುಂಡು ಗುತ್ತಿಗೆ ಕಾಮಗಾರಿಗೆ ಅನುಮೋದನೆ ನೀಡಿದ್ದರಿಂದ ರಾಜ್ಯದ ಬೊಕ್ಕಸಕ್ಕೆ 10 ಸಾವಿರ ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಆರೋಪಿಸಿದ್ದಾರೆ.
Vijaya Karnataka Web rs 10000 crore from a piece of contract loss
ತುಂಡು ಗುತ್ತಿಗೆಯಿಂದ 10 ಸಾವಿರ ಕೋಟಿ ರೂ. ನಷ್ಟ


ತಾಲೂಕಿನ ಚಾಕಲಬ್ಬಿ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಎಸ್‌.ಐ. ಚಿಕ್ಕನಗೌಡ್ರ ಪರ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ ವೇಳೆ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ತುಂಡು ಗುತ್ತಿಗೆ ಕಾಮಗಾರಿ ಪ್ರಕರಣದಲ್ಲಿ ಸಮಗ್ರ ತನಿಖೆಯಾಗಬೇಕು. ಸಿಎಂ ಕುಮಾರಸ್ವಾಮಿ ರಾಜೀನಾಮೆ ನೀಡಬೇಕು'' ಎಂದು ಆಗ್ರಹಿಸಿದರು.

''ಅರ್ಧಕ್ಕೆ ನಿಂತ ಕಾಮಗಾರಿ ಪುನಾರಂಭಿಸಲು ಅನುಮತಿ ಕೋರಿ ಸಿಎಂ ಕುಮಾರಸ್ವಾಮಿ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದರು. ಇದಕ್ಕೆ ಸ್ಪಂದಿಸಿದ ಆಯೋಗ ಕಾಮಗಾರಿಗೆ ಅನುಮತಿ ನೀಡಿತ್ತು. ಈ ಮಧ್ಯೆ ನಿಯಮಾವಳಿ ಉಲ್ಲಂಘಿಸಿ ಲೋಕೋಪಯೋಗಿ ಇಲಾಖೆಯಲ್ಲಿ 10 ಸಾವಿರ ಕೋಟಿಯಷ್ಟು ತುಂಡು ಗುತ್ತಿಗೆ ನೀಡಿದ್ದರಿಂದ ಬೊಕ್ಕಸಕ್ಕೆ ನಷ್ಟ ಉಂಟಾಗಿದ್ದು, ತನಿಖೆ ನಡೆಸಬೇಕೆಂದು ಆಗ್ರಹಿಸಿ ಎಸ್ಸಿ, ಎಸ್ಟಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಹಾದೇವಪ್ಪ ಎಂಬವರು ಎಸಿಬಿಗೆ ದೂರು ನೀಡಿದ್ದಾರೆ'' ಎಂದು ವಿವರಿಸಿದರು.

''2013-14 ರಲ್ಲಿ ನಡೆದ ಕ್ಯಾಬಿನೆಟ್‌ ಸಬ್‌ ಕಮೀಟಿ ಸಭೆಯಲ್ಲಿ ತುಂಡು ಗುತ್ತಿಗೆ ಕಾಮಗಾರಿ ನೀಡದಿರಲು ನಿರ್ಧರಿಸಲಾಗಿತ್ತು. ಆದರೆ ಕಾನೂನು ಉಲ್ಲಂಘಿಸಿ ಗುತ್ತಿಗೆ ನೀಡಿದ್ದಾರೆ. ಈ ಎಲ್ಲ ವಿಷಯಗಳನ್ನು ಮಹಾದೇವಪ್ಪ ದೂರಿನಲ್ಲಿ ಉಲ್ಲೇಖಿಸಿದ್ದಾರೆ'' ಎಂದು ಶ್ರೀರಾಮುಲು ತಿಳಿಸಿದರು.

ಯಾವ ಮುಖ ಇಟ್ಟು ವೋಟು ಕೇಳ್ತಾರೆ?

ಮೈಸೂರು ಭಾಗದ ಐದಾರು ಜಿಲ್ಲೆಗೆ ಸೀಮಿತವಾಗಿ ಅನುದಾನ ನೀಡಿ ಉತ್ತರ ಕರ್ನಾಟಕವನ್ನು ಸಂಪೂರ್ಣ ನಿರ್ಲಕ್ಷಿಸಿರುವ ಸಿಎಂ ಕುಮಾರಸ್ವಾಮಿ ಅವರು ಕುಂದಗೋಳ, ಚಿಂಚೋಳಿ ಕ್ಷೇತ್ರದಲ್ಲಿ ಯಾವ ಮುಖ ಇಟ್ಟುಕೊಂಡು ವೋಟ್‌ ಕೇಳುತ್ತಾರೆ ಎಂದು ಶ್ರೀರಾಮುಲು ಟೀಕಿಸಿದರು.

''ಕುಮಾರಸ್ವಾಮಿ ಹುಬ್ಬಳ್ಳಿಯಲ್ಲಿ ಮಾಡಿದ್ದ ಮನೆಯನ್ನೂ ಖಾಲಿ ಮಾಡಿದ್ದಾರೆ. ಐದು ಜಿಲ್ಲೆಗೆ ಕೊಟ್ಟ ಅನುದಾನವನ್ನು ಉತ್ತರ ಕರ್ನಾಟಕಕ್ಕೂ ಕೊಡಲಿ. ಬರಗಾಲ ಇರುವ ಕಾರಣಕ್ಕಾದರೂ ರೆಸಾರ್ಟ್‌ ಬಿಟ್ಟು ಈ ಭಾಗಕ್ಕೆ ಬಂದು ಜನರ ಸಮಸ್ಯೆ ಆಲಿಸಬೇಕು'' ಎಂದು ಒತ್ತಾಯಿಸಿದರು.

''ವಿಶ್ವನಾಥ್‌-ಸಿದ್ದರಾಮಯ್ಯ ಜಗಳ ನೋಡಿದರೆ ಮೈತ್ರಿ ಸರಕಾರ ಬಹಳ ದಿನ ಬಾಳುವುದಿಲ್ಲ ಎಂದು ಜನ ಮಾತಾಡ್ತಾ ಇದ್ದಾರೆ. ಶಾಸಕರಿಗೂ ಈ ಸರಕಾರ ಬೇಡವಾಗಿದೆ. ಹಾಗಾಗಿ ಸಿಎಂ ಈ ಕೂಡಲೇ ಸರಕಾರ ವಿಸರ್ಜಿಸಬೇಕು. ಚುನಾವಣೆಗೆ ಬಂದರೆ ನಾವೂ ಸಿದ್ಧರಿದ್ದೇವೆ. ಇಲ್ಲವೆ ರಾಜ್ಯಪಾಲರು ಸರಕಾರ ರಚನೆಗೆ ಅನುವು ಮಾಡಿಕೊಟ್ಟರೆ ನಾವು ಬಹುಮತ ಸಾಬೀತು ಮಾಡುತ್ತೇವೆ'' ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ