ಆ್ಯಪ್ನಗರ

ಪರಿಸರ ಉಳಿಸಿ ಬೆಳೆಸಿ :ಮಿಹಿರ್‌

ಧಾರವಾಡ : ಪರಿಸರ ನಾಶದಿಂದ ಜಾಗತಿಕ ತಾಪಮಾನ ಹೆಚ್ಚಳವಾಗುತ್ತಿದ್ದು, ಶಾಲೆಯ ಪ್ರತಿಯೊಬ್ಬ ವಿದ್ಯಾರ್ಥಿಯೂ ಪರಿಸರವನ್ನು ಉಳಿಸಿ ಬೆಳೆಸುವಲ್ಲಿ ಅತ್ಯಂತ ಆಸಕ್ತಿ ವಹಿಸಬೇಕಿದೆ ಎಂದು ತಿರಂಗ ದಾಮೋದರ ಸಂಸ್ಥೆಯ ಅಧ್ಯಕ್ಷ ಹಾಗೂ ವåಣಿಪಾಲ್‌ ಉನ್ನತ ಶಿಕ್ಷ ಣ ಸಂಸ್ಥೆಯ ವಿದ್ಯಾರ್ಥಿ ಮಿಹಿರ್‌ ಕೊಲೇಕಾರ ಮನವಿ ಮಾಡಿದರು.

Vijaya Karnataka 19 Jun 2019, 5:00 am
ಧಾರವಾಡ : ಪರಿಸರ ನಾಶದಿಂದ ಜಾಗತಿಕ ತಾಪಮಾನ ಹೆಚ್ಚಳವಾಗುತ್ತಿದ್ದು, ಶಾಲೆಯ ಪ್ರತಿಯೊಬ್ಬ ವಿದ್ಯಾರ್ಥಿಯೂ ಪರಿಸರವನ್ನು ಉಳಿಸಿ ಬೆಳೆಸುವಲ್ಲಿ ಅತ್ಯಂತ ಆಸಕ್ತಿ ವಹಿಸಬೇಕಿದೆ ಎಂದು ತಿರಂಗ ದಾಮೋದರ ಸಂಸ್ಥೆಯ ಅಧ್ಯಕ್ಷ ಹಾಗೂ ವåಣಿಪಾಲ್‌ ಉನ್ನತ ಶಿಕ್ಷ ಣ ಸಂಸ್ಥೆಯ ವಿದ್ಯಾರ್ಥಿ ಮಿಹಿರ್‌ ಕೊಲೇಕಾರ ಮನವಿ ಮಾಡಿದರು.
Vijaya Karnataka Web save the environment grow mihir
ಪರಿಸರ ಉಳಿಸಿ ಬೆಳೆಸಿ :ಮಿಹಿರ್‌


ನಗರದ ಲೀಲಾವತಿ ಚರಂತಿಮಠ ಪಬ್ಲಿಕ್‌ ಶಾಲೆಯಲ್ಲಿ ಮಂಗಳವಾರ ನಡೆದ ಪರಿಸರ ಜಾಗೃತಿ ಕುರಿತ ಕಾರ್ಯಕ್ರಮದಲ್ಲಿ ಮಾತನಾಡಿದರು.

ವಿದ್ಯಾರ್ಥಿಗಳು ಪರಿಸರ ಉಳಿಸುವುದಕ್ಕಾಗಿ ಪರಿಸರ ನಾಶದಿಂದ ಉಷ್ಣಾಂಶ ಹೆಚ್ಚಾಗುತ್ತಿದ್ದು, ಇದರಿಂದ ಪ್ರಾಣಿ ಸಂಕುಲಕ್ಕೆ ಗಂಡಾಂತರ ಬಂದಿದೆ. ಆದ್ದರಿಂದ ಎಲ್ಲರೂ ಸಸಿ ನೆಡುವುದು, ನೆಟ್ಟ ಸಸಿಗಳನ್ನು ಪೋಷಿಸಿ ಬೆಳೆಸುವುದು ಹಾಗೂ ವಿದ್ಯಾರ್ಥಿಗಳು ಸುತ್ತಲಿನ ಪರಿಸರ ಸ್ವಚ್ಛವಾಗಿಟ್ಟುಕೊಳ್ಳುವಂತೆ ಎಲ್ಲರಿಗೂ ಜಾಗೃತಿ ಮೂಡಿಸುವುದು ಅವಶ್ಯಕ ಎಂದರು.

ಲೀಲಾವತಿ ಚರಂತಿಮಠ ಪಬ್ಲಿಕ್‌ ಶಾಲೆಯ ಪ್ರಿನ್ಸಿಪಾಲ್‌ ರಾಣಿ ಯೋಹಾನನ್‌ ಮಾತನಾಡಿ, ಬೀದಿಗಳಲ್ಲಿ ಪ್ಲಾಸ್ಟಿಕ್‌, ಇತರೆ ತ್ಯಾಜ್ಯಗಳನ್ನು ಎಸೆಯದಂತೆ ಮತ್ತು ಅನವಶ್ಯಕ ಪ್ಲಾಸ್ಟಿಕ್‌ ಬಳಕೆಗೆ ನಿಯಂತ್ರಣ ಹೇರಬೇಕಿದೆ. ವಾಹನಗಳ ಅತಿಯಾದ ಬಳಕೆಯಿಂದಾಗಿ ಹಸಿರುಮನೆ ಪರಿಣಾಮವುಂಟಾಗುತ್ತಿದ್ದು ಓಝೋನ್‌ ಪದರದಲ್ಲಿ ರಂಧ್ರವಾಗುತ್ತಿದ್ದು ಸೂರ್ಯನ ನೇರಳಾತೀತ ಕಿರಣಗಳಿಂದ ಮನುಕುಲಕ್ಕೆ ಕಂಟಕ ಕಾದಿದೆ. ಹೀಗಾಗಿ ಪರಿಸರ ರಕ್ಷ ಣೆ ಎಲ್ಲರ ಜವಾಬ್ದಾರಿ ಎಂದರು.

ಶಾಲೆಯ ಸಂಸ್ಥಾಪಕ ಅರುಣ ಚರಂತಿಮಠ, ವಿದ್ಯಾರ್ಥಿಗಳು ಹಾಗೂ ಶಾಲಾ ಸಿಬ್ಬಂದಿ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ