ಆ್ಯಪ್ನಗರ

ಪಾಕಿಸ್ತಾನ‌ ಪರ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ದೇಶದ್ರೋಹ ಪ್ರಕರಣ

ಕಾಲೇಜಿನ‌‌‌ ಪ್ರಾಂಶುಪಾಲರಾದ ಡಾ ಬಸವರಾಜ್ ಅನಾಮಿ ದೂರ ನೀಡಿದ್ದಾರೆ. ಅವರ ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಿಕೊಂಡು ಸಿವಿಲ್ ಇಂಜಿನಿಯರಿಂಗ್‌ ಎರಡನೇ ಸೆಮಿಸ್ಟರ್‌ನ ಇಬ್ಬರು ವಿದ್ಯಾರ್ಥಿಗಳು ಮತ್ತು ಆರನೇ ಸೆಮಿಷ್ಟರ್‌ನ ಒಬ್ಬ ವಿದ್ಯಾರ್ಥಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್‌ ಆಯುಕ್ತರು ವಿವರಿಸಿದ್ದಾರೆ.

Vijaya Karnataka 15 Feb 2020, 5:58 pm

ಹುಬ್ಬಳ್ಳಿ: ‘ಪಾಕಿಸ್ತಾನ‌ ಜಿಂದಾಬಾದ್’ ಘೋಷಣೆ ಕೂಗಿರುವ ಮೂವರು ಜಮ್ಮು ಮತ್ತು ಕಾಶ್ಮೀರ ಮೂಲದ ವಿದ್ಯಾರ್ಥಿಗಳ ವಿರುದ್ಧ ದೇಶ‌ದ್ರೋಹ ಹಾಗೂ ಕೋಮು ಸೌಹಾರ್ದ ಕದಡುವ ಪ್ರಕರಣ ದಾಖಲಿಸಿದ್ದೇವೆ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಆಯುಕ್ತ ಆರ್‌ ದಿಲೀಪ್‌ ಹೇಳಿಕೆ ನೀಡಿದ್ದಾರೆ.
Vijaya Karnataka Web Pakistan Zindabad


ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ಮೂರು ಜನರ ವಿದ್ಯಾರ್ಥಿಗಳು ಪಾಕಿಸ್ತಾನ ಜಿಂದಾಬಾದ್ ಘೋಷಣೆ ಹಾಕಿದ್ದಾರೆ. ಅವರನ್ನ ಬಂಧಿಸಿದ್ದೇವೆ.ಇದನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ಪ್ರಕರಣ ದಾಖಲಿಸಿದ್ದೇವೆ,” ಎಂದು ಮಾಹಿತಿ ನೀಡಿದರು.

ವಿಡಿಯೋ: 'ಪಾಕಿಸ್ತಾನ್‌ ಜಿಂದಾಬಾದ್‌' ಘೋಷಣೆ ಕೂಗಿದ ಭೂಪರು ಇವರೇ ನೋಡಿ,,,



ಕಾಲೇಜಿನ‌‌‌ ಪ್ರಾಂಶುಪಾಲರಾದ ಡಾ ಬಸವರಾಜ್ ಅನಾಮಿ ದೂರ ನೀಡಿದ್ದಾರೆ. ಅವರ ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಿಕೊಂಡು ಸಿವಿಲ್ ಇಂಜಿನಿಯರಿಂಗ್‌ ಎರಡನೇ ಸೆಮಿಸ್ಟರ್‌ನ ಇಬ್ಬರು ವಿದ್ಯಾರ್ಥಿಗಳು ಮತ್ತು ಆರನೇ ಸೆಮಿಷ್ಟರ್‌ನ ಒಬ್ಬ ವಿದ್ಯಾರ್ಥಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್‌ ಆಯುಕ್ತರು ವಿವರಿಸಿದರು.

ಆರೋಪಿಗಳು ಕಾಶ್ಮೀರ ಮೂಲದವರು ಎಂದು ಗೊತ್ತಾಗಿದೆ. ವಿಡಿಯೋ ಫೋರೆನ್ಸಿಕ್‌ ಲ್ಯಾಬಿಗೆ ಕಳುಹಿಸಿದ ನಂತರ ಎಲ್ಲಾ ಮಾಹಿತಿ ಗೊತ್ತಾಗಲಿದೆ. ವಿದ್ಯಾರ್ಥಿಗಳ ಮೊಬೈಲ್ ಹಾಗೂ ಲ್ಯಾಪ್‌ಟಾಪ್ ವಶಕ್ಕೆ ಪಡೆಯಲಾಗಿದೆ ಎಂದರು.

'ಪಾಕಿಸ್ತಾನ ಜಿಂದಾಬಾದ್' ಘೋಷಣೆ ಕೂಗಿದ ವಿದ್ಯಾರ್ಥಿಗಳನ್ನು ಅಮಾನತು ಮಾಡಿದ ಕೆಎಲ್‌ಇ ಕಾಲೇಜು

ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚನೆ: ಪ್ರಲ್ಹಾದ್‌ ಜೋಶಿ

ನಗರದಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, “ಮೂವರು ವಿದ್ಯಾರ್ಥಿಗಳ ವಿರುದ್ಧ ಕಠಿಣ‌ ಕಾನೂನು ಕ್ರಮ ಕೈಗೊಳ್ಳಬೇಕು. ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚಿಸುತ್ತೇನೆ. ಅವರ ಮೇಲೆ ದೇಶದ್ರೋಹದ ಪ್ರಕರಣ ದಾಖಲಿಸಬೇಕು,” ಎಂದು ಒತ್ತಾಯಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ