ಆ್ಯಪ್ನಗರ

ಶೋಕಾಸ್‌ ನೋಟಿಸ್‌ ಕೊಡಿ: ಡಿಡಿಪಿಐ, ಬಿಇಒಗಳಿಗೆ ಡಿಸಿ ಸೂಚನೆ

ಧಾರವಾಡ : 2019 ನೇ ಸಾಲಿನ ಎಸ್‌.ಎಸ್‌.ಎಲ್‌.ಸಿ ಪರೀಕ್ಷಾ ಫಲಿತಾಂಶದಲ್ಲಿ ಜಿಲ್ಲೆಯ 33 ಶಾಲೆಗಳಲ್ಲಿ ಶೇ.40 ಕ್ಕಿಂತ ಕಡಿಮೆ ಮತ್ತು 03 ಶಾಲೆಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ. ಈ ಶಾಲೆಗಳಿಗೆ ಕಾರಣ ಕೇಳಿ ನೋಟೀಸ್‌ ಜಾರಿ ಮಾಡಬೇಕು. ಮುಖ್ಯ ಶಿಕ್ಷ ಕರು ತಮ್ಮ ಶಾಲೆಗಳಲ್ಲಿ

Vijaya Karnataka 4 May 2019, 5:00 am
ಧಾರವಾಡ : 2019 ನೇ ಸಾಲಿನ ಎಸ್‌.ಎಸ್‌.ಎಲ್‌.ಸಿ ಪರೀಕ್ಷಾ ಫಲಿತಾಂಶದಲ್ಲಿ ಜಿಲ್ಲೆಯ 33 ಶಾಲೆಗಳಲ್ಲಿ ಶೇ.40 ಕ್ಕಿಂತ ಕಡಿಮೆ ಮತ್ತು 03 ಶಾಲೆಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ. ಈ ಶಾಲೆಗಳಿಗೆ ಕಾರಣ ಕೇಳಿ ನೋಟೀಸ್‌ ಜಾರಿ ಮಾಡಬೇಕು. ಮುಖ್ಯ ಶಿಕ್ಷ ಕರು ತಮ್ಮ ಶಾಲೆಗಳಲ್ಲಿ ಅನುತ್ತೀರ್ಣಗೊಂಡಂತಹ ಎಲ್ಲಾ ಮಕ್ಕಳಿಗೆ ಪರಿಹಾರ ಬೀಧನೆಯನ್ನು ಕೈಗೊಂಡು, ಅವರಿಗೆ ಸರಿಯಾದ ರೀತಿಯಲ್ಲಿ ಮಾರ್ಗದರ್ಶನ ಮಾಡುವಂತೆ ಜಿಲ್ಲಾಧಿಕಾರಿ ಎಂ.ದೀಪಾ ಕಟ್ಟು ನಿಟ್ಟಾದ ಸೂಚನೆ ನೀಡಿದರು.
Vijaya Karnataka Web DRW-03RANGA11
ಧಾರವಾಡ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಎಂ .ದೀಪಾ ಮಾತನಾಡಿದರು.


ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲೆಯ ಎಲ್ಲ ಕ್ಷೇತ್ರ ಶಿಕ್ಷ ಣಾಧಿಕಾರಿಗಳು ಹಾಗೂ ಸಾರ್ವಜನಿಕ ಶಿಕ್ಷ ಣ ಇಲಾಖೆಯ ಉಪನಿರ್ದೇಶಕರು(ಆಡಳಿತ) ಅವರನ್ನೊಳಗೊಂಡ ಸಭೆಯ ಅಧ್ಯಕ್ಷ ತೆ ವಹಿಸಿ ಅವರು ಮಾತನಾಡಿದರು.

ಶೇ.40 ಕ್ಕಿಂತ ಕಡಿಮೆ ಫಲಿತಾಂಶ ಸಾಧಿಸಿದ ಪ್ರತಿಯೊಂದು ಶಾಲೆಗಳಿಗೆ ಕಾರಣ ಕೇಳುವ ನೋಟೀಸ್‌ ಜಾರಿ ಮಾಡಿ ವರದಿ ಪಡೆಯಲು ಡಿಡಿಪಿಐ ಅವರಿಗೆ ಸೂಚಿಸಿದರು. ಜಿಲ್ಲೆಯಲ್ಲಿ ಒಟ್ಟು 6135 ಮಕ್ಕಳು ಅನುತ್ತೀರ್ಣರಾಗಿದ್ದು, ಆಯಾ ವಲಯದಲ್ಲಿ ವಿಶೇಷ ಕಲಿಕಾ ಕೇಂದ್ರಗಳನ್ನು ಪ್ರಾರಂಭಿಸಿ ವಿಷಯ ಪರಿಣಿತಿಯುಳ್ಳ ಶಿಕ್ಷ ಕರನ್ನು ತರಗತಿಗಳಿಗೆ ನೇಮಕಾತಿ ಮಾಡಿ ಆದೇಶ ಹೊರಡಿಸಲು ಸೂಚಿಸಲಾಯಿತು.

ಸೂಕ್ತ ತರಬೇತಿ ಕೊಡಿ

ಎಲ್ಲಾ ಕ್ಷೇತ್ರ ಶಿಕ್ಷ ಣಾಧಿಕಾರಿಗಳು 21-06-2019 ರಿಂದ ಪ್ರಾರಂಭಗೊಳ್ಳುವ ಪೂರಕ ಪರೀಕ್ಷೆಗಳಿಗೆ ಅನುತ್ತೀರ್ಣಗೊಂಡ ಮಕ್ಕಳು ಕಡ್ಡಾಯವಾಗಿ ಆನ್‌ಲೈನ್‌ನಲ್ಲಿ ನೋಂದಣಿ ಮಾಡಿಕೊಳ್ಳುವಂತೆ ಮನವೊಲಿಸಲು ಸೂಚಿಸಲಾಯಿತು. ಅನುತ್ತೀರ್ಣರಾದ ಮಕ್ಕಳು ಹಾಗೂ ಪಾಲಕರಿಗೆ ಶಿಬಿರ ನಡೆಸಿ, ನಿರಂತರವಾಗಿ ಮಾರ್ಗದರ್ಶನ ಮತ್ತು ತರಬೇತಿ ನೀಡಿ ಪೂರಕ ಪರೀಕ್ಷೆಗಳನ್ನು ಎದುರಿಸುವ ಸಾಮರ್ಥ್ಯ‌ ತುಂಬಬೇಕು ಎಂದರು.

ಮಕ್ಕಳಿಗೆ ಶೈಕ್ಷ ಣಿಕವಾಗಿ ಮಾರ್ಗದರ್ಶನ ನೀಡಿ ಮುಂಬರುವ 2019-20 ನೇ ಸಾಲಿನಲ್ಲಿ ಎಸ್‌.ಎಸ್‌.ಎಲ್‌.ಸಿ ಪರೀಕ್ಷಾ ಫಲಿತಾಂಶದಲ್ಲಿ ಜಿಲ್ಲೆಯ ಮೊದಲ 10 ಸ್ಥಾನಗಳಲ್ಲಿ ಬರುವಂತೆ ಕ್ರಿಯಾ ಯೋಜನೆ ಮಾಡಿ ಅದರನ್ವಯ ಕಾರ್ಯ ಪ್ರವೃತ್ತರಾಗಲು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

ಡಿಡಿಪಿಐ ಗಜಾನನ ಮನ್ನಿಕೇರಿ ಮಾತನಾಡಿ, ಜಿಲ್ಲೆಯ ಒಟ್ಟು 97 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 25059 ರೆಗ್ಯುಲರ್‌ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಅದರಲ್ಲಿ ಒಟ್ಟು 18924 ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ. ಜಿಲ್ಲೆಯ ಒಟ್ಟು ಫಲಿತಾಂಶ ಶೇ.75.45 ರಷ್ಟು ಆಗಿದ್ದು ರಾಜ್ಯದಲ್ಲಿ 28 ನೇ ಸ್ಥಾನದಲ್ಲಿದೆ ಎಂದು ಮಾಹಿತಿ ನೀಡಿದರು.

ಶಿಕ್ಷ ಣಾಧಿಕಾರಿ ಎಂ.ಎಲ್‌.ಹಂಚಾಟೆ ಸೇರಿದಂತೆ ಇತರ ಅಧಿಕಾರಿಗಳು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ