ಆ್ಯಪ್ನಗರ

ಸಿದ್ದರಾಮಯ್ಯ, ದೇವೇಗೌಡ ಮುಖಾಮುಖಿ

ಹುಬ್ಬಳ್ಳಿ : ಮಾಜಿ ಸಿಎಂ ಹಾಗೂ ಸಮಿಶ್ರ ಸರಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹಾಗೂ ಜೆಡಿಎಸ್‌ ವರಿಷ್ಠ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹುಬ್ಬಳ್ಳಿಯಲ್ಲಿ ವಿಮಾನ ನಿಲ್ದಾಣದಲ್ಲಿ ಭಾನುವಾರ ಮುಖಾಮುಖಿಯಾದರು.

Vijaya Karnataka 19 Nov 2018, 5:00 am
ಹುಬ್ಬಳ್ಳಿ : ಮಾಜಿ ಸಿಎಂ ಹಾಗೂ ಸಮಿಶ್ರ ಸರಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹಾಗೂ ಜೆಡಿಎಸ್‌ ವರಿಷ್ಠ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹುಬ್ಬಳ್ಳಿಯಲ್ಲಿ ವಿಮಾನ ನಿಲ್ದಾಣದಲ್ಲಿ ಭಾನುವಾರ ಮುಖಾಮುಖಿಯಾದರು.
Vijaya Karnataka Web siddaramaiah deve gowda encounters
ಸಿದ್ದರಾಮಯ್ಯ, ದೇವೇಗೌಡ ಮುಖಾಮುಖಿ


ಉಭಯ ನಾಯಕರು ನಿಯೋಜಿತ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಬೇರೆ ಬೇರೆ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರು. ದೇವೇಗೌಡ ಧಾರವಾಡದ ಖಾಸಗಿ ಕಾರ್ಯಕ್ರಮ ಹಾಗೂ ಸಿದ್ದರಾಮಯ್ಯ ಗದಗ ಜಿಲ್ಲೆಯ ಪ್ರವಾಸ ಕೈಗೊಂಡಿದ್ದರು. ಆದರೆ ಇಬ್ಬರು ನಾಯಕರು ಪ್ರತ್ಯೇಕವಾಗಿ ಆಗಮಿಸಿದ್ದರೂ, ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಅಚಾನಕ್ಕಾಗಿ ಮುಖಾಮುಖಿಯಾದರು.

ಇಂಡಿಗೋ ಫೈಲೇಟ್‌ನಲ್ಲಿ ಪ್ರಯಾಣ ಬೆಳೆಸಿದ ನಾಯಕರು ಕೆಲಕಾಲ ವಿಮಾನ ನಿಲ್ದಾಣದಲ್ಲಿ ಉಭಯ ಕುಷಲೋಪರಿ ವಿಚಾರಿಸಿದರು. ಮೈಸೂರು ಮೇಯರ್‌ ವಿಚಾರಕ್ಕೆ ಸಂಬಂಧಿಸಿದಂತೆ ಭೇಟಿಯಾಗಿ ಮಾತನಾಡಬೇಕಿದ್ದ ನಾಯಕರು ಫೋನ್‌ ಕರೆಯ ಮೂಲಕವೇ ಸಮಸ್ಯೆ ಇತ್ಯರ್ಥಪಡಿಸಿಕೊಂಡಿದ್ದರು. ಇಂದು ಭೇಟಿಯಾಗಿ ಪ್ರಸ್ತುತ ರಾಜಕೀಯ ವಿದ್ಯಮಾನಗಳ ಬಗ್ಗೆ ಮಾತನಾಡಿದ್ದಾರೆ ಎನ್ನಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ