ಆ್ಯಪ್ನಗರ

ಸಿದ್ದರಾಮಯ್ಯ ಅಹಿಂದ ನಾಯಕ ಎಂದು ಹೇಳಿಕೊಂಡಿಲ್ಲ: ಕೌಲಗಿ

ಹುಬ್ಬಳ್ಳಿ : ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಯಾವ ಸೀಮೆ ಅಹಿಂದ ನಾಯಕ ಎಂದು ಟೀಕಿಸಿರುವ ಎಚ್‌.ವಿಶ್ವನಾಥ ಒಬ್ಬ ವಿಘ್ನ ಸಂತೋಷಿ ಎಂದು ಬಾಲ ವಿಕಾಸ ಅಕಾಡೆಮಿ ಮಾಜಿ ಅಧ್ಯಕ್ಷ ವೇದವ್ಯಾಸ ಕೌಲಗಿ ಜರಿದಿದ್ದಾರೆ.

Vijaya Karnataka 23 Jun 2019, 5:00 am
ಹುಬ್ಬಳ್ಳಿ : ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಯಾವ ಸೀಮೆ ಅಹಿಂದ ನಾಯಕ ಎಂದು ಟೀಕಿಸಿರುವ ಎಚ್‌.ವಿಶ್ವನಾಥ ಒಬ್ಬ ವಿಘ್ನ ಸಂತೋಷಿ ಎಂದು ಬಾಲ ವಿಕಾಸ ಅಕಾಡೆಮಿ ಮಾಜಿ ಅಧ್ಯಕ್ಷ ವೇದವ್ಯಾಸ ಕೌಲಗಿ ಜರಿದಿದ್ದಾರೆ.
Vijaya Karnataka Web siddaramaiah did not claim ahind nayak kaulagi
ಸಿದ್ದರಾಮಯ್ಯ ಅಹಿಂದ ನಾಯಕ ಎಂದು ಹೇಳಿಕೊಂಡಿಲ್ಲ: ಕೌಲಗಿ


ಪತ್ರಿಕಾ ಹೇಳಿಕೆ ನೀಡಿರುವ ಅವರು, ಸಿದ್ದರಾಮಯ್ಯ ಎಂದಿಗೂ ತಾವೊಬ್ಬ ಅಹಿಂದ ನಾಯಕ ಎಂದು ಹೇಳಿಕೊಂಡಿಲ್ಲ. ಅಹಿಂದ ಮಾರ್ಗದ ಪರ ತಾವು ಎಂದು ಹೇಳುತ್ತಲೇ ಬಂದಿದ್ದಾರೆ. ಅವರನ್ನು ಟೀಕೆ ಮಾಡುವವರು ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.

ಅಹಿಂದ ವರ್ಗದ ಸಂಘಟನೆಗಾಗಿ 2006 ರಲ್ಲಿ ಉಪ ಮುಖ್ಯಮಂತ್ರಿ ಸ್ಥಾನ ಕಳೆದುಕೊಳ್ಳುವರಿ ಎಂದು ದೇವೇಗೌಡರು ಎಚ್ಚರಿಕೆ ನೀಡಿದ್ದರೂ ಸಿದ್ದರಾಮಯ್ಯ ಮಾತ್ರ ತಾವು ನಂಬಿದ ತತ್ವ ಸಿದ್ದಾಂತ ಕೈಬಿಡದೇ ಹುಬ್ಬಳ್ಳಿ ಅಹಿಂದ ಸಭೆಯಲ್ಲಿ ಭಾಗವಹಿಸಿದ್ದರು. ಅದೇ ಕಾರಣಕ್ಕಾಗಿ ಜನರು, ಅವರ ಅಭಿಮಾನಿಗಳು ಸಿದ್ದರಾಮಯ್ಯನವರನ್ನು ಅಹಿಂದ ನಾಯಕ ಎಂದು ಕರೆದರೆ, ಅದರಲ್ಲಿ ಅವರದೇನು ತಪ್ಪಿದೆ ಎಂದು ಪ್ರಶ್ನಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ