ಆ್ಯಪ್ನಗರ

ಮತ್ತೆ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರಕಾರದ ಸುಳಿವು ನೀಡಿದ ಸಿದ್ದರಾಮಯ್ಯ!

ಜೆಡಿಎಸ್ ಪಕ್ಷವು ನೂರಕ್ಕೆ ನೂರರಷ್ಟು ಬಿಜೆಪಿ ಜತೆ ಕೈ ಜೋಡಿಸುವುದಿಲ್ಲ. ಹೀಗಾಗಿ ಬಿಜೆಪಿಗೆ 8 ಸ್ಥಾನದಲ್ಲಿ ಗೆಲುವು ಸಿಗದಿದ್ದರೆ ಯಡಿಯೂರಪ್ಪ ರಾಜೀನಾಮೆ ನೀಡಬೇಕಾಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಅಲ್ಲದೆ, ರಾಜ್ಯ ರಾಜಕೀಯ ಮತ್ತೆ ಬದಲಾವಣೆಯಾಗುತ್ತದೆ ಎಂದೂ ಹೇಳಿದ್ದಾರೆ.

Vijaya Karnataka Web 25 Nov 2019, 3:46 pm
ಹುಬ್ಬಳ್ಳಿ: ಉಪಚುನಾವಣೆಯಲ್ಲಿ ನಿರೀಕ್ಷಿತ 8 ಸ್ಥಾನ ಗೆಲ್ಲದಿದ್ದರೆ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ಅನಿವಾರ್ಯವಾಗಿ ರಾಜೀನಾಮೆ ಕೊಡಬೇಕಾಗುತ್ತದೆ. ಈ ಹಂತದಲ್ಲಿ ಜೆಡಿಎಸ್‌ನವರು ಬಿಜೆಪಿ ಬೆಂಬಲಿಸುವುದಿಲ್ಲ ಎಂಬುದು ಗೊತ್ತಿದೆ. ಹಾಗಾಗಿ ಹೀಗಾಗಿ ರಾಜ್ಯ ರಾಜಕೀಯದಲ್ಲಿ ಸ್ವಾಭಾವಿಕವಾಗಿ ಪರಿಸ್ಥಿತಿ ಬದಲಾಗಲಿದೆ ಎಂದು ಸಿದ್ದರಾಮಯ್ಯ ಹೇಳುವ ಮೂಲಕ ಮತ್ತೆ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರಕಾರದ ಸುಳಿವು ನೀಡಿದ್ದಾರೆ.
Vijaya Karnataka Web Siddaramaiah


ಹುಬ್ಬಳ್ಳಿ ನಗರದಲ್ಲಿ ಸುದ್ದಿಗಾರರೊಂದಿಗೆ ಸೋಮವಾರ ಮಾತನಾಡಿದ ಅವರು, ಜೆಡಿಎಸ್ ಪಕ್ಷವು ನೂರಕ್ಕೆ ನೂರರಷ್ಟು ಬಿಜೆಪಿ ಜತೆ ಕೈ ಜೋಡಿಸುವುದಿಲ್ಲ. ಇದು ನನಗೆ ಗೊತ್ತಿದೆ. ಅಧಿಕಾರ ಉಳಿಸಿಕೊಳ್ಳಲು ಬಿಜೆಪಿಗೆ 8 ಸ್ಥಾನ ಗೆಲ್ಲಬೇಕು. ಇಲ್ಲದಿದ್ದರೆ ಬಿಜೆಪಿ ಅಧಿಕಾರ ಬಿಟ್ಟು ಹೋಗಬೇಕಾಗುತ್ತದೆ. ಮತ್ತೆ ವಿಶ್ವಾಸಮತ ಯಾಚಿಸುವ ಎಂಬ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಪ್ರತಿಕ್ರಿಯಿಸಿದರು.

ಇನ್ನು, ಬಿಜೆಪಿ ಸರಕಾರ ಪತನವಾದರೆ ಸಿದ್ದರಾಮಯ್ಯ ಮತ್ತೆ ಸಿಎಂ ಆಗುತ್ತಾರೆ ಎಂಬ ಬೆಂಬಲಿಗರ ಮಾತುಗಳ ಬಗ್ಗೆ ಪ್ರತಿಕ್ರಿಯಿಸಿದ್ದ ಅವರು, ನಾನು ಹಾಗೇ ಹೇಳಿದ್ದೀನಾ, ಸರಕಾರ ಬಿದ್ದು ಹೋದರೆ, ಮಧ್ಯಂತರ ಚುನಾವಣೆ ಎದುರಾಗಬಹುದು ಎಂದು ನಿರೀಕ್ಷೆ ಮಾಡಿದ್ದೇವೆ. ಚುನಾವಣೆ ನಡೆದರೆ ಕಾಂಗ್ರೆಸ್ ನೂರಕ್ಕೆ ನೂರರಷ್ಟು ಜಯಗಳಿಸಲಿದೆ. ಈ ವೇಳೆ ಸಿಎಂ ಯಾರಾಗಬೇಕೆಂಬುದನ್ನು ಹೈಕಮಾಂಡ್ ನಿರ್ಧರಿಸಲಿದೆ ಎಂದು ಹೇಳಿದರು.

ಈ ಸುದ್ದಿ ಓದಿ: ಸಿದ್ದರಾಮಯ್ಯ ದೊಡ್ಡ ಜೋಕರ್: ಎಸ್‌.ಆರ್‌. ವಿಶ್ವನಾಥ್‌ ವಾಗ್ದಾಳಿ

ಇನ್ನೊಂದೆಡೆ, ಮಹಾರಾಷ್ಟ್ರ ರಾಜಕಾರಣದ ಬಗ್ಗೆ ಮಾತನಾಡಿದ ಅವರು, ಇದು ಅಕ್ಷರಶಃ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ. ರಾತ್ರೋರಾತ್ರಿ ರಾಷ್ಟ್ರಪತಿ ಆಡಳಿತ ವಾಪಸ್ ಪಡೆದು, ಬೆಳಗಾಗುವುದರೊಳಗೆ ಪ್ರಮಾಣ ವಚನ ಕಾರ್ಯಕ್ರಮ ನಡೆಯುತ್ತದೆ ಎಂದರೆ ಪ್ರಜಾಪ್ರಭುತ್ವದ ಅಣಕವಲ್ಲದೇ ಬೇರೇನೂ ಅಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟೀಕಿಸಿದರು.

ಇದನ್ನೂ ಓದಿ: ‘ನೀವು ಸಿಎಂ ಆಗೋದಾದ್ರೆ ಓಟ್ ಹಾಕ್ತೀವಿ’- ಪರಂ ಮುಂದೆ ಗರಂ ಆದ ಗ್ರಾಮಸ್ಥರು

ಅಲ್ಲದೆ, ಶಿವಸೇನೆಯು ಹಿಂದುತ್ವದಿಂದ ಹಿಂದೆ ಸರಿಯುತ್ತಿದೆ. ಈಗಾಗಲೇ ಎನ್‌ಡಿಎ ಮೈತ್ರಿಕೂಟದಿಂದ ಹೊರಬಂದಿದ್ದು, ಕೋಮುವಾದದಿಂದ ದೂರ ಸರಿದಿದೆ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅಭಿಪ್ರಾಯ ವ್ಕ್ತಪಡಿಸಿದ್ದಾರೆ.

ರಾಜ್ಯ ಉಪಚುನಾವಣೆ: ವಿಜಯನಗರ ಕ್ಷೇತ್ರದಲ್ಲಿ ಸಿಎಂ, ಮಾಜಿ ಸಿಎಂ ಅಬ್ಬರದ ಪ್ರಚಾರ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ