ಆ್ಯಪ್ನಗರ

ಸಿದ್ದರಾಮಯ್ಯ ಬಳೆ ತೊಟ್ಟುಕೊಳ್ಳಲಿ: ಶೋಭಾ

ಹುಬ್ಬಳ್ಳಿ: ಅತೃಪ್ತ ಶಾಸಕರನ್ನು ಸಮಾಧಾನಪಡಿಸಿ ತಮ್ಮ ಹಿಡಿತದಲ್ಲಿಟ್ಟುಕೊಳ್ಳಲು ಆಗದಿದ್ದರೆ ಸಿದ್ದರಾಮಯ್ಯ ಕೈಗೆ ಬಳೆ ತೊಟ್ಟುಕೊಳ್ಳಲಿ ಎಂದು ಸಂಸದೆ ಶೋಭಾ ಕರಂದ್ಲಾಜೆ ಹರಿಹಾಯ್ದಿದ್ದಾರೆ.

Vijaya Karnataka 17 May 2019, 5:00 am
ಹುಬ್ಬಳ್ಳಿ: ಅತೃಪ್ತ ಶಾಸಕರನ್ನು ಸಮಾಧಾನಪಡಿಸಿ ತಮ್ಮ ಹಿಡಿತದಲ್ಲಿಟ್ಟುಕೊಳ್ಳಲು ಆಗದಿದ್ದರೆ ಸಿದ್ದರಾಮಯ್ಯ ಕೈಗೆ ಬಳೆ ತೊಟ್ಟುಕೊಳ್ಳಲಿ ಎಂದು ಸಂಸದೆ ಶೋಭಾ ಕರಂದ್ಲಾಜೆ ಹರಿಹಾಯ್ದಿದ್ದಾರೆ.
Vijaya Karnataka Web siddaramaiah should wear the clothes shobha
ಸಿದ್ದರಾಮಯ್ಯ ಬಳೆ ತೊಟ್ಟುಕೊಳ್ಳಲಿ: ಶೋಭಾ


ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಮಾತೆತ್ತಿದ್ದರೆ ಸಿದ್ದರಾಮಯ್ಯ ತಮ್ಮ ಯಾವುದೇ ಶಾಸಕರು ಬಿಜೆಪಿ ಜತೆ ಹೋಗುವುದಿಲ್ಲ ಎನ್ನುತ್ತಾರೆ. ಇನ್ನೊಂದೆಡೆ ಬಿಜೆಪಿ ಶಾಸಕರನ್ನು ಖರೀದಿಸಲು ಯತ್ನಿಸುತ್ತಿದೆ ಎಂದು ಆರೋಪಿಸುತ್ತಾರೆ. ಅವರಿಗೆ ತಮ್ಮ ಪಕ್ಷದ ಶಾಸಕರ ಮೇಲೆ ಹಿಡಿತವಿದ್ದರೆ, ಬೇರೆ ಪಕ್ಷಕ್ಕೆ ಹೋಗಲ್ಲ ಎನ್ನುವ ವಿಶ್ವಾಸ ಇದ್ದರೆ ಈ ಮಾತು ಹೇಳುತ್ತಿರಲಿಲ್ಲ'' ಎಂದರು.

''ಶಾಸಕರೇನಾದರೂ ರಾಜೀನಾಮೆ ನೀಡಿದರೆ ಅದಕ್ಕೂ ಬಿಜೆಪಿಗೂ ಸಂಬಂಧವಿಲ್ಲ. ನಿಮ್ಮ ಶಾಸಕರನ್ನು ಹಿಡಿದಿಟ್ಟುಕೊಳ್ಳದಷ್ಟು ನೀವು ಬಲಹೀನರಾಗಿದ್ದೀರಾ? ಮೈತ್ರಿ ಪಕ್ಷಗಳ ಶಾಸಕರ ಅಸಮಾಧಾನಕ್ಕೆ ಆಯಾ ಪಕ್ಷಗಳೇ ಹೊಣೆ ಹೊರಬೇಕೆ ಹೊರತೂ ಬೇರೆ ಪಕ್ಷದ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ'' ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ