ಆ್ಯಪ್ನಗರ

ಸಿದ್ಧಾರೂಢ ಶ್ರೀಗಳ ಗದ್ದುಗೆ ದರ್ಶನ 8ರಿಂದ ಆರಂಭ

ಹುಬ್ಬಳ್ಳಿ: ಲಾಕ್‌ಡೌನ್‌ನಿಂದ ಕಳೆದ ಎರಡು ತಿಂಗಳಿನಿಂದ ಸದ್ಗುರು ಶ್ರೀ ಸಿದ್ಧಾರೂಢ ಮಠದ ಗದ್ದುಗೆ ದರ್ಶನ ಸ್ಥಗಿತಗೊಳಿಸಲಾಗಿತ್ತು. ಇದೀಗ ಸರಕಾರದ ಆದೇಶದನ್ವಯ ಜೂ. 8 ರಿಂದ ಸದ್ಗುರು ಸಿದ್ಧಾರೂಢ ಸ್ವಾಮಿ ಮಠದಲ್ಲಿಉಭಯ ಶ್ರೀಗಳ ಗದ್ದುಗೆ ದರ್ಶನ ಪುನಾರಂಭಿಸಲಿದೆ.

Vijaya Karnataka 4 Jun 2020, 5:00 am
ಹುಬ್ಬಳ್ಳಿ: ಲಾಕ್‌ಡೌನ್‌ನಿಂದ ಕಳೆದ ಎರಡು ತಿಂಗಳಿನಿಂದ ಸದ್ಗುರು ಶ್ರೀ ಸಿದ್ಧಾರೂಢ ಮಠದ ಗದ್ದುಗೆ ದರ್ಶನ ಸ್ಥಗಿತಗೊಳಿಸಲಾಗಿತ್ತು. ಇದೀಗ ಸರಕಾರದ ಆದೇಶದನ್ವಯ ಜೂ. 8 ರಿಂದ ಸದ್ಗುರು ಸಿದ್ಧಾರೂಢ ಸ್ವಾಮಿ ಮಠದಲ್ಲಿಉಭಯ ಶ್ರೀಗಳ ಗದ್ದುಗೆ ದರ್ಶನ ಪುನಾರಂಭಿಸಲಿದೆ.
Vijaya Karnataka Web siddarudha


ಪ್ರತಿ ದಿನ ಬೆಳಗ್ಗೆ 6 ಗಂಟೆಯಿಂದ ರಾತ್ರಿ 8 ಗಂಟೆ ವರೆಗೆ ಗದ್ದುಗೆ ದರ್ಶನಕ್ಕೆ ಅವಕಾಶ ನೀಡಲಾಗಿದ್ದು, ಆದರೆ, ತೀರ್ಥ, ಪ್ರಸಾದ, ಹಣ್ಣು, ಕಾಯಿ, ಪುಷ್ಪಗಳ ಅರ್ಪಿಸಲು ಅವಕಾಶವಿರುವುದಿಲ್ಲ. ದರ್ಶನಕ್ಕೆ ಬರುವ ಭಕ್ತರು ಮಾಸ್ಕ್‌ ಧರಿಸುವುದು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ. ಭಕ್ತಾಧಿಗಳು ಟ್ರಸ್ಟ್‌ನೊಂದಿಗೆ ಸಹಕರಿಸಿ ಗದ್ದುಗೆಗಳ ದರ್ಶನ ಪಡೆಯಬೇಕು ಎಂದು ಸಿದ್ಧಾರೂಢ ಸ್ವಾಮಿಯವರ ಮಠ ಟ್ರಸ್ಟ್‌ ಕಮೀಟಿ ಅಧ್ಯಕ್ಷ ಡಿ.ಡಿ.ಮಾಳಗಿ, ಗೌರವ ಕಾರ್ಯದರ್ಶಿ ಕೋಳಕೂರ ಪ್ರಕಟಣೆಯಲ್ಲಿತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ