ಆ್ಯಪ್ನಗರ

ಹುಬ್ಬಳ್ಳಿ:ಮತ್ತೆ ಮಾರಕಾಸ್ತ್ರಗಳಿಂದ ಹೊಡೆದಾಟ, ಓರ್ವನಿಗೆ ಗಾಯ

ಮಹಾನಗರದಲ್ಲಿ ಗುರುವಾರ ರಾತ್ರಿ ಮತ್ತೆ ಮಾರಕಾಸ್ತ್ರಗಳಿಂದ ದಾಳಿ ನಡೆದಿದೆ. ವೈಯಕ್ತಿಕ ಕಾರಣಕ್ಕೆ ಇಬ್ಬರ ನಡುವೆ ಗಲಾಟೆ ನಡೆದಿದ್ದು, ಓರ್ವ ಗಾಯಗೊಂಡಿದ್ದಾನೆ. ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Vijaya Karnataka Web 18 Oct 2019, 2:15 pm
ಹುಬ್ಬಳ್ಳಿ : ಮಹಾನಗರದಲ್ಲಿ ಗುರುವಾರ ರಾತ್ರಿ ಮತ್ತೆ ಮಾರಕಾಸ್ತ್ರ ಝಳಪಿಸಿದೆ. ವೈಯಕ್ತಿಕ ಕಾರಣಕ್ಕೆ ಇಬ್ಬರ ನಡುವೆ ಗಲಾಟೆ ನಡೆದ ವೇಳೆ ಮಾರಕಾಸ್ತ್ರದಿಂದ ಹೊಡೆದ ಪರಿಣಾಮ ಓರ್ವ ಗಾಯಗೊಂಡ ಘಟನೆ ಹಳೇಹುಬ್ಬಳ್ಳಿಯ ನಾರಾಯಣಸೋಪ ನಗರದಲ್ಲಿ ನಡೆದಿದೆ.
Vijaya Karnataka Web talvar


ದಾಳಿ ಬಳಿಕ ಅಪರಾಧ ತಡೆ ಏಕಿಲ್ಲ?

ಗಫರ್‌ಸಾಬ್‌ ಕರೀಮ್‌ಸಾಬ್‌ ಜರತಾರಘರ (22) ಗಾಯಗೊಂಡ ಯುವಕ. ಬಾಬಾ ಫರೀದ್‌ ಎಂಬಾತ ಈತನ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ.

ನ್ಯಾಯಾಲಯ ಆವರಣದಲ್ಲೇ ರೌಡಿ ಕೊಲೆಗೆ ಸ್ಕೆಚ್‌!

ಗಾಯಾಳು ಗಫರ್‌ ಸಾಬ್‌ ಕಿಮ್ಸ…ನಲ್ಲಿಚಿಕಿತ್ಸೆ ಪಡೆದು ಮನೆಗೆ ತೆರಳಿದ್ದಾನೆ. ಕಿಮ್ಸ್ಗೆ ಭೇಟಿ ನೀಡಿದ ಮಹಾನಗರ ಪೊಲೀಸ್‌ ಆಯುಕ್ತ ಆರ್‌. ದಿಲೀಪ್‌ ಹಾಗೂ ಡಿಸಿಪಿ ಶಿವಕುಮಾರ್‌ ಗುಣಾರೆ ಮಾಹಿತಿ ಪಡೆದರು. ಹಳೇಹುಬ್ಬಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ