ಆ್ಯಪ್ನಗರ

ಎಚ್‌ಕೆ ಕುರಿತು ಹಗುರ ಮಾತು ಸಲ್ಲ

ಧಾರವಾಡ: ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಅವರು ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಹಾಗೂ ಸಾರ್ವಜನಿಕ ಲೆಕ್ಕ ಪತ್ರಗಳ ಸಮಿತಿ ಅಧ್ಯಕ್ಷ ಎಚ್‌.ಕೆ. ಪಾಟೀಲ ಅವರ ಬಗ್ಗೆ ಹಗುರವಾಗಿ ಮಾತನಾಡಿದರುವುದು ಸರಿಯಲ್ಲ. ಆದ್ದರಿಂದ ಸಚಿವರು ಬೇಷರತ್‌ ಕ್ಷಮೆ ಕೋರಬೇಕು ಎಂದು ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಪಿ.ಎಚ್‌. ನೀರಲಕೇರಿ ಹೇಳಿದರು.

Vijaya Karnataka 14 Jul 2020, 5:00 am
ಧಾರವಾಡ: ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಅವರು ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಹಾಗೂ ಸಾರ್ವಜನಿಕ ಲೆಕ್ಕ ಪತ್ರಗಳ ಸಮಿತಿ ಅಧ್ಯಕ್ಷ ಎಚ್‌.ಕೆ. ಪಾಟೀಲ ಅವರ ಬಗ್ಗೆ ಹಗುರವಾಗಿ ಮಾತನಾಡಿದರುವುದು ಸರಿಯಲ್ಲ. ಆದ್ದರಿಂದ ಸಚಿವರು ಬೇಷರತ್‌ ಕ್ಷಮೆ ಕೋರಬೇಕು ಎಂದು ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಪಿ.ಎಚ್‌. ನೀರಲಕೇರಿ ಹೇಳಿದರು.
Vijaya Karnataka Web smooth talk about hk
ಎಚ್‌ಕೆ ಕುರಿತು ಹಗುರ ಮಾತು ಸಲ್ಲ


ನಗರದಲ್ಲಿಸೋಮವಾರ ಸುದ್ದಿಗೋಷ್ಠಿಯಲ್ಲಿಮಾತನಾಡಿದ ಅವರು, ಪದಗ್ರಹಣ ಸಮಾರಂಭದಲ್ಲಿಭಾಗವಹಿಸಿದ ಕೆಲವರಿಗೆ ಕೊರೊನಾ ಬಂದಿರುವುದು ನಿಜ. ಈ ವಿಷಯವನ್ನು ಪಕ್ಷ ಮುಚ್ಚಿಡುವ ಪ್ರಯತ್ನವನ್ನೂ ಮಾಡಿಲ್ಲ. ಆದರೆ, ಕೇಂದ್ರ ಸಚಿವರು ಮಾತ್ರ ಆ ಕಾರ್ಯಕ್ರಮದಿಂದಲೇ ಕೊರೊನಾ ಹಾವಳಿ ಹೆಚ್ಚಿದೆ ಎಂಬ ರೀತಿಯಲ್ಲಿಹೇಳಿಕೆ ನೀಡಿರುವುದು ಸರಿಯಲ್ಲಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕೋವಿಡ್‌ ನಿರ್ವಹಣೆಗೆ ಸರಕಾರ ಉಪಕರಣಗಳ ಖರೀದಿಯಲ್ಲಿಅವ್ಯವಹಾರ ನಡೆದಿದೆ ಎಂಬ ವಿಚಾರವನ್ನು ಸಮಿತಿ ಸಭೆಯಲ್ಲಿಆಡಳಿತ ಪಕ್ಷದ ಶಾಸಕರೇ ಪ್ರಸ್ತಾಪಿಸಿದ್ದಾರೆ. ಆದರೆ, ಜೋಶಿ ಅವರು, ಸಾರ್ವಜನಿಕ ಲೆಕ್ಕ ಪತ್ರಗಳ ಸಮಿತಿ ಅಧ್ಯಕ್ಷ ಪಾಟೀಲ ಅವರನ್ನು ಗಂಭೀರವಾಗಿ ಪರಿಗಣಿಸಬೇಕಿಲ್ಲ, ಕಾಂಗ್ರೆಸ್‌ನಲ್ಲಿಅವರಿಗೆ ಸೂಕ್ತ ಸ್ಥಾನಮಾನ ಸಿಗದ ಕಾರಣಕ್ಕೆ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ಎಂದು ಹೇಳಿದ್ದು ಸರಿಯಲ್ಲಎಂದು ತರಾಟೆಗೆ ತೆಗೆದುಕೊಂಡರು. ಮಂಜುನಾಥ ಭೋವಿ, ಎಸ್‌.ಎ. ಪವಾರ, ಅಕ್ಷಯ ಪಾಟೀಲ,ಇತರರು ಸುದ್ದಿಗೋಷ್ಠಿಯಲ್ಲಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ