ಧಾರವಾಡ : ಸಂಸದ ಪ್ರಹ್ಲಾದ ಜೋಶಿ ಅವರು ವೀರಶೈವ ಲಿಂಗಾಯತ ಸಮಾಜದಲ್ಲಿ ಒಡೆದಾಳುವ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಅಖಿಲ ಭಾರತ ವೀರಶೈವ ಮಹಾಸಭಾದ ನೇತೃತ್ವದಲ್ಲಿ, ಸೋಮವಾರ ನಗರದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ರಾರಯಲಿ ನಡೆಸಿ, ಜಿಲ್ಲಾಧಿಕಾರಿ ಕಚೇರಿ ಎದುರಿಗೆ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿಕೊಂಡ ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಗುರುರಾಜ ಹುಣಸಿಮರದ, ವೀರಶೈವ ಹಾಗೂ ಲಿಂಗಾಯತ ಸ್ವತಂತ್ರ ಧರ್ಮದ ಹೋರಾಟದ ಕುರಿತು ಹಾಗೂ ಮುಖಂಡರ ವಿರುದ್ಧ ಆಧಾರ ರಹಿತ ಆರೋಪಗಳನ್ನು ಮಾಡಿ, ಸಮಾಜದಲ್ಲಿ ಶಾಂತಿ ಭಂಗ ಮಾಡುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿಯ ಪ್ರಹ್ಲಾದ ಜೋಶಿ ಅವರು ಗರಗ ಗ್ರಾಮದ ಶ್ರುತಿ ಬೆಳ್ಳಕ್ಕಿ ಅವರ ಮೂಲಕ ಲಿಂಗಾಯತ ಸ್ವತಂತ್ರ ಧರ್ಮದ ಹೋರಾಟದ ಕುರಿತು ಇಲ್ಲ ಸಲ್ಲದ ಆಧಾರ ರಹಿತ ಆರೋಪಗಳನ್ನು ಮಾಡಿದ್ದಾರೆ. ಲಿಂಗಾಯತ ಹೋರಾಟದ ಮುಂದಾಳತ್ವ ವಹಿಸಿಕೊಂಡಿದ್ದ ಪ್ರಮುಖ ನಾಯಕರಾದ ಗೃಹ ಸಚಿವ ಎಂ.ಬಿ. ಪಾಟೀಲ, ವಿನಯ ಕುಲಕರ್ಣಿ ಹಾಗೂ ಇನ್ನಿತರ ವೀರಶೈವ ಹಾಗೂ ಲಿಂಗಾಯತ ಮುಖಂಡರಿಗೆ ಅವಮಾನಕಾರಿ ಮಾತುಗಳನ್ನಾಡಿ ಅವರನ್ನು ಹಾಗೂ ಲಿಂಗಾಯತ ಸಮುದಾಯವನ್ನು ಅವಮಾನಿಸಿದ್ದಾರೆ ಎಂದು ದೂರಿದರು.
ಶ್ರುತಿ ಬೆಳ್ಳಕ್ಕಿ ಅವರು ಮಾಡಿದ ಎಲ್ಲ ಆರೋಪಗಳ ಹಿಂದೆ ಬಿಜೆಪಿ ಹಾಗೂ ಆರ್ಎಸ್ಎಸ್ ಸಂಘಟನೆ ಹಾಗೂ ಪ್ರಹ್ಲಾದ ಜೋಶಿ ಅವರ ಪ್ರಚೋದನೆ ಇರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಧರ್ಮದ ಹೆಸರಿನಲ್ಲಿ ಪ್ರತಿಪಕ್ಷ ನಾಯಕರ ತಜೋವಧೆ ಮಾಡುವ ಮೂಲಕ ಶ್ರುತಿ ಬೆಳ್ಳಕ್ಕಿ ಕಾನೂನಿಗೆ ವಿರುದ್ಧವಾಗಿದ್ದು, ಈ ವೀರಶೈವ ಲಿಂಗಾಯತ ಧರ್ಮವನ್ನು ರಾಜಕೀಯವಾಗಿ ಲಾಭ ಮಾಡಿಕೊಳ್ಳಲು ಯತ್ನಿಸುತ್ತಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂದು ಜಿಲ್ಲಾಧಿಕಾರಿ ಮೂಲಕ ಚುನಾವಣಾ ಆಯೋಗ ಹಾಗೂ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಸೋಮವಾರ ಮನವಿ ಸಲ್ಲಿದರು.
ಇದೇ ವೇಳೆ ಪ್ರತಿಭಟನಾ ರಾರಯಲಿ ನಗರದ ಕಲಾಭನದ ಮೈದಾನದಿಂದ ಆರಂಭವಾಗಿ ಅಂಜುಮನ್ ವೃತ್ತ, ಜ್ಯುಬ್ಲಿ ವೃತ್ತ ಸೇರಿದಂತೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಜಿಲ್ಲಾಧಿಕಾರಿ ಕಚೇರಿ ಆಗಮಿಸಿತು.
ಶಿವಶಂಕರ ಹಂಪಣ್ಣವರ, ರಮೇಶ ತಳಗೇರಿ, ಗೌರಿ ನಾಡಗೌಡ,ಅಜ್ಜಪ್ಪ ಗುಲಾಲದವರ, ಬಸವರಾಜ ಲೋಕೂರ, ಪ್ರದೀಪ ಪಾಟೀಲ, ನಿಂಗಣ್ಣ ಕರಿಕಟ್ಟಿ, ಸುರೇಶ ಯಲಿಗಾರ, ಮಲ್ಲನಗೌಡ ಪಾಟೀಲ, ಸಿದ್ದಪ್ಪ ಸಪೂರಿ, ಶ್ರೀಶೈಲ ಬಾವಿಕಟ್ಟಿ, ಶಂಭು ಸಾಲಿಮನಿ, ಪ್ರಕಾಶ ಬಾವಿಕಟ್ಟಿ ಸೇರಿದಂತೆ ಇತರರು ಇದ್ದರು.
ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿಕೊಂಡ ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಗುರುರಾಜ ಹುಣಸಿಮರದ, ವೀರಶೈವ ಹಾಗೂ ಲಿಂಗಾಯತ ಸ್ವತಂತ್ರ ಧರ್ಮದ ಹೋರಾಟದ ಕುರಿತು ಹಾಗೂ ಮುಖಂಡರ ವಿರುದ್ಧ ಆಧಾರ ರಹಿತ ಆರೋಪಗಳನ್ನು ಮಾಡಿ, ಸಮಾಜದಲ್ಲಿ ಶಾಂತಿ ಭಂಗ ಮಾಡುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿಯ ಪ್ರಹ್ಲಾದ ಜೋಶಿ ಅವರು ಗರಗ ಗ್ರಾಮದ ಶ್ರುತಿ ಬೆಳ್ಳಕ್ಕಿ ಅವರ ಮೂಲಕ ಲಿಂಗಾಯತ ಸ್ವತಂತ್ರ ಧರ್ಮದ ಹೋರಾಟದ ಕುರಿತು ಇಲ್ಲ ಸಲ್ಲದ ಆಧಾರ ರಹಿತ ಆರೋಪಗಳನ್ನು ಮಾಡಿದ್ದಾರೆ. ಲಿಂಗಾಯತ ಹೋರಾಟದ ಮುಂದಾಳತ್ವ ವಹಿಸಿಕೊಂಡಿದ್ದ ಪ್ರಮುಖ ನಾಯಕರಾದ ಗೃಹ ಸಚಿವ ಎಂ.ಬಿ. ಪಾಟೀಲ, ವಿನಯ ಕುಲಕರ್ಣಿ ಹಾಗೂ ಇನ್ನಿತರ ವೀರಶೈವ ಹಾಗೂ ಲಿಂಗಾಯತ ಮುಖಂಡರಿಗೆ ಅವಮಾನಕಾರಿ ಮಾತುಗಳನ್ನಾಡಿ ಅವರನ್ನು ಹಾಗೂ ಲಿಂಗಾಯತ ಸಮುದಾಯವನ್ನು ಅವಮಾನಿಸಿದ್ದಾರೆ ಎಂದು ದೂರಿದರು.
ಶ್ರುತಿ ಬೆಳ್ಳಕ್ಕಿ ಅವರು ಮಾಡಿದ ಎಲ್ಲ ಆರೋಪಗಳ ಹಿಂದೆ ಬಿಜೆಪಿ ಹಾಗೂ ಆರ್ಎಸ್ಎಸ್ ಸಂಘಟನೆ ಹಾಗೂ ಪ್ರಹ್ಲಾದ ಜೋಶಿ ಅವರ ಪ್ರಚೋದನೆ ಇರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಧರ್ಮದ ಹೆಸರಿನಲ್ಲಿ ಪ್ರತಿಪಕ್ಷ ನಾಯಕರ ತಜೋವಧೆ ಮಾಡುವ ಮೂಲಕ ಶ್ರುತಿ ಬೆಳ್ಳಕ್ಕಿ ಕಾನೂನಿಗೆ ವಿರುದ್ಧವಾಗಿದ್ದು, ಈ ವೀರಶೈವ ಲಿಂಗಾಯತ ಧರ್ಮವನ್ನು ರಾಜಕೀಯವಾಗಿ ಲಾಭ ಮಾಡಿಕೊಳ್ಳಲು ಯತ್ನಿಸುತ್ತಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂದು ಜಿಲ್ಲಾಧಿಕಾರಿ ಮೂಲಕ ಚುನಾವಣಾ ಆಯೋಗ ಹಾಗೂ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಸೋಮವಾರ ಮನವಿ ಸಲ್ಲಿದರು.
ಇದೇ ವೇಳೆ ಪ್ರತಿಭಟನಾ ರಾರಯಲಿ ನಗರದ ಕಲಾಭನದ ಮೈದಾನದಿಂದ ಆರಂಭವಾಗಿ ಅಂಜುಮನ್ ವೃತ್ತ, ಜ್ಯುಬ್ಲಿ ವೃತ್ತ ಸೇರಿದಂತೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಜಿಲ್ಲಾಧಿಕಾರಿ ಕಚೇರಿ ಆಗಮಿಸಿತು.
ಶಿವಶಂಕರ ಹಂಪಣ್ಣವರ, ರಮೇಶ ತಳಗೇರಿ, ಗೌರಿ ನಾಡಗೌಡ,ಅಜ್ಜಪ್ಪ ಗುಲಾಲದವರ, ಬಸವರಾಜ ಲೋಕೂರ, ಪ್ರದೀಪ ಪಾಟೀಲ, ನಿಂಗಣ್ಣ ಕರಿಕಟ್ಟಿ, ಸುರೇಶ ಯಲಿಗಾರ, ಮಲ್ಲನಗೌಡ ಪಾಟೀಲ, ಸಿದ್ದಪ್ಪ ಸಪೂರಿ, ಶ್ರೀಶೈಲ ಬಾವಿಕಟ್ಟಿ, ಶಂಭು ಸಾಲಿಮನಿ, ಪ್ರಕಾಶ ಬಾವಿಕಟ್ಟಿ ಸೇರಿದಂತೆ ಇತರರು ಇದ್ದರು.