ಆ್ಯಪ್ನಗರ

ಸಚಿವರ ಊರಿಗೆ ವಿಶೇಷ ರೈಲು

ಹುಬ್ಬಳ್ಳಿ: ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅಧಿಕಾರ ವಹಿಸಿಕೊಂಡ ತಿಂಗಳೊಳಗೆ ಬೆಳಗಾವಿಯಿಂದ ಬೆಂಗಳೂರಿಗೆ ವಿಶೇಷ ರೈಲು ಸಂಚಾರ ಆರಂಭಗೊಳ್ಳಲಿದೆ.

Vijaya Karnataka 26 Jun 2019, 5:00 am
Vijaya Karnataka Web special train for ministers hometown
ಸಚಿವರ ಊರಿಗೆ ವಿಶೇಷ ರೈಲು
ಹುಬ್ಬಳ್ಳಿ: ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅಧಿಕಾರ ವಹಿಸಿಕೊಂಡ ತಿಂಗಳೊಳಗೆ ಬೆಳಗಾವಿಯಿಂದ ಬೆಂಗಳೂರಿಗೆ ವಿಶೇಷ ರೈಲು ಸಂಚಾರ ಆರಂಭಗೊಳ್ಳಲಿದೆ.

ಉದ್ದೇಶಿತ ಬೆಳಗಾವಿ-ಬೆಂಗಳೂರು-ಬೆಳಗಾವಿ ವಿಶೇಷ ಎಕ್ಸಪ್ರೆಸ್‌ ರೈಲು ಜೂ. 29ರಿಂದ ಸಂಚಾರ ಆರಂಭಿಸಲಿದ್ದು, ಕೇವಲ ಆರು ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.

ಬೆಂಗಳೂರು ನಿಲ್ದಾಣದಿಂದ ರಾತ್ರಿ 9ಕ್ಕೆ ಹೊರಡುವ ರೈಲು ತುಮಕೂರು, ಅರಸೀಕೆರೆ, ದಾವಣಗೆರೆ, ಹಾವೇರಿ, ಹುಬ್ಬಳ್ಳಿ ಮತ್ತು ಧಾರವಾಡ ನಿಲ್ದಾಣದಲ್ಲಿ ನಿಲುಗಡೆಯಾಗಲಿದೆ. ಬೆಳಗಾವಿಗೆ ಬೆಳಗ್ಗೆ 7.30ಕ್ಕೆ ತಲುಪಲಿದೆ. ಹುಬ್ಬಳ್ಳಿ ನಿಲ್ದಾಣಕ್ಕೆ ಬೆಳಗ್ಗೆ 4.40ಕ್ಕೆ ಆಗಮಿಸಲಿದೆ. ಇದೇ ರೈಲು ಬೆಳಗಾವಿಯಿಂದ ರಾತ್ರಿ 9ಕ್ಕೆ ಹೊರಟು, ಹುಬ್ಬಳ್ಳಿಗೆ ರಾತ್ರಿ 11.55ಕ್ಕೆ ಹಾಗೂ ಬೆಂಗಳೂರಿಗೆ ಬೆಳಗ್ಗೆ 7.30ಕ್ಕೆ ತಲುಪಲಿದೆ. ಒಟ್ಟು 14 ಬೋಗಿಗಳು ಇರಲಿವೆ.

ವಿಚಿತ್ರ ಎಂದರೆ ರಾಣಿ ಚೆನ್ನಮ್ಮ ಎಕ್ಸಪ್ರೆಸ್‌ ರೈಲು ಬೆಂಗಳೂರು ನಿಲ್ದಾಣದಿಂದ 9.15ಕ್ಕೆ ಹೊರಟು ಬೆಳಗಾವಿಗೆ 8.28ಕ್ಕೆ ಆಗಮಿಸುವುದು. ಸಚಿವರ ಸೂಚನೆ ಮೇರೆಗೆ ಈ ವಿಶೇಷ ರೈಲು ಓಡಿಸಲಾಗುತ್ತಿದ್ದು, ಇದುವರೆಗೂ ರೈಲು ನಂಬರ್‌ ಗೊತ್ತುಪಡಿಸಲಾಗಿಲ್ಲ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ