ಆ್ಯಪ್ನಗರ

Pramod Muthalik: ಪ್ರಮೋದ್‌ ಮುತಾಲಿಕ್‌ಗೆ ಜೀವ ಬೆದರಿಕೆ; ಮುಸ್ಲಿಂ ಪ್ರತ್ಯೇಕ ಕಾಲೇಜು ವಿರೋಧಿಸಿದ್ದಕ್ಕೆ ಬೆದರಿಕೆ

ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ಗೆ ಜೀವ ಬೆದರಿಕೆ ಬಂದಿದ್ದು, ಧಾರವಾಡದ ಉಪನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ರಾಜ್ಯ ಸರಕಾರ 10 ಮುಸ್ಲಿಂ ಕಾಲೇಜಿಗೆ ಪರವಾನಗಿ ಕೊಡಲು ಮುಂದಾಗಿರುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ ವಾಟ್ಸ್‌ಆಪ್‌ ಸಂದೇಶದ ಮೂಲಕ ಜೀವ ಬೆದರಿಕೆ ಹಾಕಲಾಗಿದೆ ಎನ್ನಲಾಗಿದ್ದು, ಇನ್ಮೇಲಾದರೂ ನಮ್ಮ ಸಮುದಾಯದ ಬಗ್ಗೆ ಮಾತನಾಡಬೇಡ ಎಂದು ಎಚ್ಚರಿಕೆ ನೀಡಿದ್ದಾರೆ ಎಂದು ತಿಳಿಸಲಾಗಿದೆ.

Edited byಅವಿನಾಶ ವಗರನಾಳ | Vijaya Karnataka Web 2 Dec 2022, 10:30 am

ಹೈಲೈಟ್ಸ್‌:


  • ಮುಸ್ಲಿಂ ಪ್ರತ್ಯೇಕ ಕಾಲೇಜು ವಿರೋಧಿಸಿದ್ದಕ್ಕೆ ಪ್ರಮೋದ್‌ ಮುತಾಲಿಕ್‌ಗೆ ಜೀವ ಬೆದರಿಕೆ
  • ವಾಟ್ಸ್‌ಆಪ್‌ ಮೂಲಕ ಸಂದೇಶ ಕಳಿಸಿ ನಮ್ಮ ಸಮುದಾಯದ ಬಗ್ಗೆ ಮಾತನಾಡಬೇಡ ಎಂದು ಎಚ್ಚರಿಕೆ
  • ಧಾರವಾಡದ ಉಪನಗರ ಠಾಣೆಯಲ್ಲಿ ದೂರು ಸಲ್ಲಿಸಿದ ಪ್ರಮೋದ್‌ ಮುತಾಲಿಕ್‌
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web Pramod Muthalik
ಧಾರವಾಡ: ರಾಜ್ಯ ಸರಕಾರ 10 ಮುಸ್ಲಿಂ ಕಾಲೇಜಿಗೆ ಪರವಾನಗಿ ಕೊಡಲು ಮುಂದಾಗಿರುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ಅವರಿಗೆ ಮೊಬೈಲ್‌ ವಾಟ್ಸ್‌ ಆ್ಯಪ್‌ ಸಂದೇಶದ ಮೂಲಕ ವ್ಯಕ್ತಿಯೊಬ್ಬ ಜೀವ ಬೆದರಿಕೆ ಹಾಕಿದ್ದು, ಈ ಕುರಿತಂತೆ ಉಪನಗರ ಠಾಣೆಗೆ ದೂರು ಸಲ್ಲಿಕೆಯಾಗಿದೆ.
ಮುತಾಲಿಕ್‌ ಅವರ ಮೊಬೈಲ್‌ಗೆ ವಾಟ್ಸ್‌ ಆ್ಯಪ್‌ನಲ್ಲಿ ಮೆಸೇಜ್‌ ಕಳುಹಿಸಿರುವ ವ್ಯಕ್ತಿ, ಕೆಟ್ಟ ಶಬ್ದಗಳಿಂದ ನಿಂದಿಸಿದ್ದಾರೆ. ಅಲ್ಲದೇ ಜೀವ ಬೆದರಿಕೆ ಕೂಡ ಹಾಕಿದ್ದಾರೆ. 'ನೀನು ಈ ಹಿಂದೆ ಮಸಿ ಬಳಿಸಿಕೊಂಡಿರುವೆ. ಇನ್ನು ಮೇಲಾದರೂ ನಮ್ಮ ಸಮುದಾಯದ ಬಗ್ಗೆ ಮಾತನಾಡಬೇಡ. ನಮ್ಮ ಸಮುದಾಯದ ಬಗ್ಗೆ ಮಾತನಾಡೋಕೆ ನೀನು ಯಾರು?' ಎಂಬ ಸಂದೇಶವನ್ನು ವಾಟ್ಸ್‌ ಆ್ಯಪ್‌ ಮೂಲಕ ಕಳುಹಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಪೊಲೀಸ್‌ ಅಧಿಕಾರಿಗಳು, ''ಮುತಾಲಿಕ್‌ ಅವರಿಗೆ ಈಗಾಗಲೇ ಗನ್‌ಮ್ಯಾನ್‌ ಇದ್ದು, ಅಗತ್ಯವಿದ್ದರೆ ಹೆಚ್ಚುವರಿ ಭದ್ರತೆ ಒದಗಿಸಲಾಗುವುದು,'' ಎಂದು ತಿಳಿಸಿದ್ದಾರೆ.

ಪ್ರತ್ಯೇಕ ಕಾಲೇಜು ಸ್ಥಾಪನೆಗೆ ತೀವ್ರ ವಿರೋಧ!
ಮುಸ್ಲಿಂ ಹೆಣ್ಣುಮಕ್ಕಳಿಗಾಗಿ ಪ್ರತ್ಯೇಕ 10 ಸರ್ಕಾರಿ ಕಾಲೇಜುಗಳನ್ನು ತೆರೆಯುವ ರಾಜ್ಯ ಸರ್ಕಾರದ ನಿರ್ಧಾರವನ್ನು ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ತೀವ್ರವಾಗಿ ಖಂಡಿಸಿದ್ದರು. ಮುಸ್ಲಿಂ ಹೆಣ್ಣುಮಕ್ಕಳಿಗಾಗಿಯೇ ಪ್ರತ್ಯೇಕ 10 ಕಾಲೇಜುಗಳನ್ನು ರಾಜ್ಯ ವಕ್ಫ್ ಬೋರ್ಡ್‌ನಿಂದ ಸ್ಥಾಪಿಸುವುದು ಸರಿಯಲ್ಲ. ಸರ್ಕಾರದ ಈ ನಿರ್ಧಾರವನ್ನು ನಾನು ವಿರೋಧಿಸುತ್ತೇನೆ. ಶ್ರೀರಾಮ ಸೇನೆ ಸೇರಿ ಯಾವುದೇ ಹಿಂದು ಪರ ಸಂಘಟನೆಗಳ ಮುಖಂಡರು ಇದಕ್ಕೆ ಒಪ್ಪಲ್ಲ ಎಂದಿದ್ದರು.

Shashikala jolle : ಪ್ರತ್ಯೇಕ ಕಾಲೇಜು ಪ್ರಾರಂಭದ ಪ್ರಸ್ತಾಪ ಸರ್ಕಾರದ ಮಟ್ಟದಲ್ಲಿ ಇಲ್ಲ: ಶಶಿಕಲಾ ಜೊಲ್ಲೆ
ಅದಲ್ಲದೇ ಮುಂದಿನ ದಿನಗಳಲ್ಲಿ ಶ್ರೀರಾಮ ಸೇನೆ ಮುಂದಾಳತ್ವದಲ್ಲಿ ಎಲ್ಲ ಹಿಂದು ಸಂಘಟನೆಗಳ ಸೇರಿದಂತೆ ಉಗ್ರ ಸ್ವರೂಪದ ಹೋರಾಟ ನಡೆಸಲಾವುದು ಎಂದು ಎಚ್ಚರಿಕೆ ನೀಡಿದ ಅವರು, ಈ ರೀತಿಯಾದ ತುಷ್ಠೀಕರಣದಿಂದ ಕಾಂಗ್ರೆಸ್‌ ಇಂದು ಈ ಪರಿಸ್ಥಿತಿಗೆ ಬಂದಿದೆ. ಈಗ ಅದನ್ನೇ ಬಿಜೆಪಿಯವರು ಮಾಡುತ್ತಿದ್ದು, ಕೂಡಲೇ ಈ ವರ್ತನೆಯನ್ನು ಕೈಬಿಡಬೇಕು ಎಂದು ಹೇಳಿದ್ದರು.

ಮುಸ್ಲಿಂ ಕಾಲೇಜ್ ಮಾಡಲು 25 ಕೋಟಿ ತೆಗೆದಿಡುವುದು ಮುರ್ಖತನ: ಪ್ರಮೋದ್ ಮುತಾಲಿಕ್ ಆಕ್ರೋಶ
ಸಿಎಂ ಬೊಮ್ಮಾಯಿ, ಶಶಿಕಲಾ ಜೊಲ್ಲೆ ಸ್ಪಷ್ಟನೆ! ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕ 10 ಕಾಲೇಜು ಪ್ರಾರಂಭಿಸುವ ಯಾವುದೇ ಪ್ರಸ್ತಾಪ ಸರಕಾರದ ಮುಂದೆ ಇಲ್ಲ, ಅದರ ಬಗ್ಗೆ ಚರ್ಚೆಯಾಗಿಲ್ಲ ಎಂದು ಸಿಎಂ ಬಸವರಾಝ ಬೊಮ್ಮಾಯಿ ಹಾಗೂ ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವೆ ಶಶಿಕಲಾ ಜೊಲ್ಲೆ ಸ್ಪಷ್ಟಪಡಿಸಿದ್ದರು. ಮುಸ್ಲಿಂ ಮಹಿಳೆಯರಿಗಾಗಿಯೇ ಪ್ರತ್ಯೇಕ ಕಾಲೇಜು ಪ್ರಾರಂಭಿಸುವ ಬಗ್ಗೆ ಸರಕಾರದ ಮಟ್ಟದಲ್ಲಿ ಯಾವುದೇ ಪ್ರಸ್ತಾವನೆಗಳು ಇಲ್ಲ. ಕಾಲೇಜುಗಳ ಪ್ರಾರಂಭದ ಬಗ್ಗೆ ವಕ್ಫ್‌ ಬೋರ್ಡ್‌ ಅಧ್ಯಕ್ಷರ ಹೇಳಿಕೆಯು ಅವರ ವೈಯಕ್ತಿಕ ಹೇಳಿಕೆಯಾಗಿದೆ. ಈ ವಿಷಯದ ಕುರಿತು ಈಗಾಗಲೇ ವಕ್ಫ್‌ ಬೋರ್ಡ್‌ ಅಧ್ಯಕ್ಷರ ಜೊತೆ ಮಾತನಾಡಿದ್ದು, ಇದರ ಬಗ್ಗೆ ಎದ್ದಿರುವ ಊಹಾಪೋಹಗಳ ಬಗ್ಗೆ ಸ್ಪಷ್ಟನೆ ನೀಡುವಂತೆ ಸೂಚನೆ ನೀಡಿದ್ದೇನೆ ಎಂದು ಹೇಳಿದ್ದರು.
ಲೇಖಕರ ಬಗ್ಗೆ
ಅವಿನಾಶ ವಗರನಾಳ
ವಿಜಯ ಕರ್ನಾಟಕ ಡಿಜಿಟಲ್‌ ವಿಭಾಗದಲ್ಲಿ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿರುವ ಇವರು ಕಳೆದ 6 ವರ್ಷಗಳಿಂದ ವಿವಿಧ ಪತ್ರಿಕೆ, ವಿದ್ಯುನ್ಮಾನ ಮಾಧ್ಯಮದಲ್ಲಿ ಕಾರ್ಯನಿರ್ವಹಿಸಿದ್ದಾರೆ. ಸದ್ಯ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಒಂದಿಷ್ಟು ದಿನ ಕೆಲ ಸಂಸ್ಥೆಗಳಲ್ಲಿ ಸಾರ್ವಜನಿಕ ಸಂಪರ್ಕವನ್ನು ನಿಭಾಯಿಸಿದ್ದಾರೆ. ಇವರು ಹುಟ್ಟಿ ಬೆಳೆದಿದ್ದು ಭತ್ತದ ನಾಡು, ಹನುಮ ಹುಟ್ಟಿದ ನಾಡು ಗಂಗಾವತಿಯಲ್ಲಿ. ಕುವೆಂಪು ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ರಾಜಕೀಯ ವಿಷಯಗಳು, ಪ್ರಚಲಿತ ವಿದ್ಯಮಾನಗಳ ಮೇಲೆ ಆಸಕ್ತಿ. ತಂತ್ರಜ್ಞಾನದ ವಿಷಯಗಳು ಇವರಿಗೆ ಹೆಚ್ಚು ಆಪ್ತ. ಇವರಿಗೆ ಊರೂರು ಸುತ್ತೋದು.. ಕ್ರಿಕೆಟ್‌ ಆಡೋದು.. ಅದಿದು ಹುಡುಕೋದು ಇಷ್ಟ. ಅಂತೆ.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ