ಆ್ಯಪ್ನಗರ

ದೇಶದ್ರೋಹ ಆರೋಪಿಗಳ ಪರ ವಕಾಲತ್ತು ಇಲ್ಲ: ರಾಜ್ಯ ಯುವ ವಕೀಲರ ಸಂಘ

ದೇಶದ್ರೋಹದ ಪ್ರಕರಣದಲ್ಲಿ ಭಾಗಿಯಾಗಿರುವ ವಿದ್ಯಾರ್ಥಿಗಳ ಪರ ಯಾವುದೇ ವಕಾಲತ್ತು ವಹಿಸಬಾರದು ಎಂದು ರಾಜ್ಯ ಯುವ ವಕೀಲರ ಸಂಘ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಇದಲ್ಲದೆ ಪ್ರಕರಣಕ್ಕೆ ಸಂಬಂದಿಸಿದಂತೆ ಪೊಲೀಸ ಆಯುಕ್ತರು ಕರ್ತವ್ಯ ಚ್ಯುತಿ ಎಸಗಿದ್ದಾರೆ ಅವರನ್ನು ಕೂಡಲೇ ಅಮಾನತು ಮಾಡಬೇಕು ಎಂದು ಆಗ್ರಹಿಸಿದೆ.

Vijaya Karnataka Web 17 Feb 2020, 2:51 pm
ಹುಬ್ಬಳ್ಳಿ: ದೇಶದ್ರೋಹದ ಪ್ರಕರಣದಲ್ಲಿ ಭಾಗಿಯಾಗಿರುವ ವಿದ್ಯಾರ್ಥಿಗಳ ಪರ ಯಾವುದೇ ವಕಾಲತ್ತು ವಹಿಸಬಾರದು ಎಂದು ರಾಜ್ಯ ಯುವ ವಕೀಲರ ಸಂಘ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಇದಲ್ಲದೆ ಪ್ರಕರಣಕ್ಕೆ ಸಂಬಂದಿಸಿದಂತೆ ಪೊಲೀಸ್ ಆಯುಕ್ತರು ಕರ್ತವ್ಯ ಚ್ಯುತಿ ಎಸಗಿದ್ದಾರೆ ಅವರನ್ನು ಕೂಡಲೇ ಅಮಾನತು ಮಾಡಬೇಕು ಎಂದು ಯುವ ವಕೀಲರ ಸಂಘ ಆಗ್ರಹಿಸಿದೆ.
Vijaya Karnataka Web pakistan zindabad


ವಕೀಲರ ಸಂಘದ ಮುಖಂಡ ಅಶೋಕ ಅಣ್ವೇಕರ ಅವರು ಸೋಮವಾರ ನ್ಯಾಯಾಲಯದ ಆವರಣದಲ್ಲಿ ಮಾತನಾಡಿದರು.

ದೇಶದಲ್ಲಿಯೇ ಶೋಕಾಚರಣೆ ನಡೆಯುವ ಸಂದರ್ಭದಲ್ಲಿ ‌ಪಾಕ್ ಪರ ಘೋಷಣೆ ಕೂಗುವ ಮೂಲಕ ವಿದ್ಯಾರ್ಥಿಗಳು ದೇಶದ್ರೋಹಿ ಕೃತ್ಯ ಎಸಗಿದ್ದಾರೆ. ಇವರ ಪರ ಯಾವುದೇ ವಕೀಲರು ವಕಾಲತ್ತು ವಹಿಸಬಾರದು. ಒಂದು ವೇಳೆ ವಹಿಸಿದ್ದೇ ಆದರ ಅಂತಹವರ ವಿರುದ್ಧ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ವಿಡಿಯೋ: 'ಪಾಕಿಸ್ತಾನ್‌ ಜಿಂದಾಬಾದ್‌' ಘೋಷಣೆ ಕೂಗಿದ ಭೂಪರು ಇವರೇ ನೋಡಿ,,,

ದೇಶದ್ರೋಹದ ಗಂಭೀರ ಪ್ರಕರಣದಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪೊಲೀಸ್‌ ಆಯುಕ್ತರು ಕರ್ತವ್ಯದ ಚ್ಯುತಿ ಎಸಗಿದ್ದಾರೆ. ಇವರ ವಿರುದ್ಧ ರಾಜ್ಯ ಸರ್ಕಾರ ಕಾನೂನು ಕ್ರಮ ಜರುಗಿಸಿ ಅಮಾನತು ಮಾಡುವಂತೆ ಆಗ್ರಹಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ