ಧಾರವಾಡ : ನಗರದ ಜಿಲ್ಲಾ ಪಂಚಾಯಿತಿ ಸಭಾಗಂಣದಲ್ಲಿ 84ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಮಹಿಳಾ ಸಮಿತಿಯ ಪೂರ್ವಭಾವಿ ಸಭೆ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಚೈತ್ರಾ ಶಿರೂರ ಮಾತನಾಡಿ, ಸಮ್ಮೇಳನಕ್ಕೆ ಆಗಮಿಸುವ ಮಹಿಳೆಯರ ನೋಂದಣಿ, ವಸತಿ ಹಾಗೂ ಸುರಕ್ಷ ತೆಗೆ ಸಮಿತಿಯ ಸದಸ್ಯರು ಶ್ರಮಿಸಬೇಕು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕಿ ಸಾವಿತ್ರಿ ಕಡಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಸುಚೇತಾ ನೆಲವಗಿ, ಜಿಲ್ಲಾ ತರಬೇತಿ ಕೇಂದ್ರದ ಪ್ರಾಚಾರ್ಯ ಕವಿತಾ ಇತರರು ಇದ್ದರು.
ಈ ಸಂದರ್ಭದಲ್ಲಿ ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕಿ ಸಾವಿತ್ರಿ ಕಡಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಸುಚೇತಾ ನೆಲವಗಿ, ಜಿಲ್ಲಾ ತರಬೇತಿ ಕೇಂದ್ರದ ಪ್ರಾಚಾರ್ಯ ಕವಿತಾ ಇತರರು ಇದ್ದರು.