ಆ್ಯಪ್ನಗರ

ಕಾರ್ಮಿಕ ಕಾಯ್ದೆ ಬಲಗೊಳಿಸಿ

ಧಾರವಾಡ : ವಲಸೆ ಕಾರ್ಮಿಕರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸುವ ಜತೆಗೆ ಕಾರ್ಮಿಕ ಕಾಯ್ದೆ ಸಬಲಗೊಳಿಸಬೇಕು ಎಂದು ಆಗ್ರಹಿಸಿ ಆಲ್‌ ಇಂಡಿಯಾ ಯುನೈಟೆಡ್‌ ಟ್ರೇಡ್‌ ಯೂನಿಯನ್‌ ಸೆಂಟರ್‌(ಎಐಯುಟಿಯುಸಿ) ಜಿಲ್ಲಾಸಮಿತಿಯವರು ಬುಧವಾರ ನಗರದಲ್ಲಿಪ್ರತಿಭಟನೆ ನಡೆಸಿದರು.

Vijaya Karnataka 15 May 2020, 5:00 am
ಧಾರವಾಡ : ವಲಸೆ ಕಾರ್ಮಿಕರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸುವ ಜತೆಗೆ ಕಾರ್ಮಿಕ ಕಾಯ್ದೆ ಸಬಲಗೊಳಿಸಬೇಕು ಎಂದು ಆಗ್ರಹಿಸಿ ಆಲ್‌ ಇಂಡಿಯಾ ಯುನೈಟೆಡ್‌ ಟ್ರೇಡ್‌ ಯೂನಿಯನ್‌ ಸೆಂಟರ್‌(ಎಐಯುಟಿಯುಸಿ) ಜಿಲ್ಲಾಸಮಿತಿಯವರು ಬುಧವಾರ ನಗರದಲ್ಲಿಪ್ರತಿಭಟನೆ ನಡೆಸಿದರು.
Vijaya Karnataka Web strengthen the labor act
ಕಾರ್ಮಿಕ ಕಾಯ್ದೆ ಬಲಗೊಳಿಸಿ


ಕಾರ್ಮಿಕ ವಿರೋಧಿ ಕ್ರಮಗಳನ್ನು ಅನುಮತಿಸುವ, ಸುಗ್ರೀವಾಜ್ಞೆ ಹೊರಡಿಸುವ ಕ್ರಮಗಳನ್ನು ವಿರೋಧಿಸಲೇಬೇಕು. ಇದನ್ನು ಸಹಿಸಲಾಗದು ಎಂದು ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಜಿಲ್ಲಾಧ್ಯಕ್ಷ ಗಂಗಾಧರ ಬಡಿಗೇರ, ಕೇಂದ್ರ ಹಾಗೂ ಉತ್ತರ ಪ್ರದೇಶ ಸೇರಿದಂತೆ ವಿವಿಧ ರಾಜ್ಯ ಸರಕಾರಗಳು ಮುಂದಿನ 3 ವರ್ಷಗಳ ಕಾಲ ಕಾರ್ಮಿಕರ ಕಾಯ್ದೆಗಳನ್ನು ಅಮಾನತುಗೊಳಿಸುವ ಬಗ್ಗೆ ಪ್ರಸ್ತಾಪಿಸಿವೆ. ಕಾರ್ಮಿಕರನ್ನು ಮನಬಂದಂತೆ ವಜಾಗೊಳಿಸುವ, ವೇತನ ಕಡಿತಗೊಳಿಸುವ ಕ್ರಮಗಳ ಮೂಲಕ ಕಾರ್ಮಿಕರಿಗೆ ಜೀವನ ಭದ್ರತೆ-ಸೇವಾ ಭದ್ರತೆಗಳೆರಡನ್ನೂ ಸರ್ವನಾಶ ಮಾಡಲು ಹೊರಟಿವೆ ಎಂದು ಕಿಡಿ ಕಾರಿದರು.

ಜಿಲ್ಲಾಉಪಾಧ್ಯಕ್ಷೆ ಭುವನಾ ಬಳ್ಳಾರಿ ಮಾತನಾಡಿ, ಸರಕಾರಗಳು ಕಾರ್ಮಿಕ ವಿರೋಧಿ ಸುಗ್ರೀವಾಜ್ಞೆಗಳನ್ನು ಹಿಂತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ಜಿಲ್ಲಾಕಾರ್ಯದರ್ಶಿ ರಮೇಶ ಹೊಸಮನಿ, ಜಂಟಿ ಕಾರ್ಯದರ್ಶಿ ನಿಂಗಮ್ಮ ಹುಡೇದ, ಸ್ವಪ್ನಾ ಸುಳ್ಳದ, ಸುನಿತಾ ಹೊಂಗಲ್‌, ಸೊಹೇಬ್‌ ಪೀರಜಾದೆ, ರಫೀಕ್‌ ಕಣಕಿ, ನಾರಾಯಣ ಸಾವಂತ್‌, ನಾಗರಾಜ ಸಾವಂತ್‌, ಮಹ್ಮದ ಜಾಫರ್‌ಖಾಜಿ, ಚಂದ್ರು ಹಿರೇಮನಿ ಮತ್ತಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ