ಧಾರವಾಡ: ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಮೇಲೆ ಕಾರು ಹರಿದ ಪರಿಣಾಮ 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ನಗರದ ವಾಟರ್ ಟ್ಯಾಂಕ್ ಬಳಿ ಈ ದುರ್ಘಟನೆ ಸಂಭವಿಸಿದೆ. ಕೆಇ ಬೋರ್ಡ್ ಶಾಲೆ ಪ್ರಿನ್ಸಿಪಾಲ್ ಸುನಿತಾ ಕಡಪಟ್ಟಿ ಹಾಗೂ ವಿದ್ಯಾರ್ಥಿಗಳಾದ ಪೂಜಾ ನಿಡಗುಂದಿ, ಚೈತ್ರಾ ಕೊಪ್ಪದ ಹಾಗೂ ಅನ್ನಪೂರ್ಣ ಚಲವಾದಿ ಗಾಯಗೊಂಡಿದ್ದು, ಎಸ್ಡಿಎಂ ಆಸ್ಪತ್ಪೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇಬ್ಬರು ವಿದ್ಯಾರ್ಥಿಗಳ ಸ್ಥಿತಿ ಚಿಂತಾಜನಕವಾಗಿದೆ.
ಘಟನೆ ಸಂಬಂಧ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಗರದ ವಾಟರ್ ಟ್ಯಾಂಕ್ ಬಳಿ ಈ ದುರ್ಘಟನೆ ಸಂಭವಿಸಿದೆ. ಕೆಇ ಬೋರ್ಡ್ ಶಾಲೆ ಪ್ರಿನ್ಸಿಪಾಲ್ ಸುನಿತಾ ಕಡಪಟ್ಟಿ ಹಾಗೂ ವಿದ್ಯಾರ್ಥಿಗಳಾದ ಪೂಜಾ ನಿಡಗುಂದಿ, ಚೈತ್ರಾ ಕೊಪ್ಪದ ಹಾಗೂ ಅನ್ನಪೂರ್ಣ ಚಲವಾದಿ ಗಾಯಗೊಂಡಿದ್ದು, ಎಸ್ಡಿಎಂ ಆಸ್ಪತ್ಪೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇಬ್ಬರು ವಿದ್ಯಾರ್ಥಿಗಳ ಸ್ಥಿತಿ ಚಿಂತಾಜನಕವಾಗಿದೆ.
ಘಟನೆ ಸಂಬಂಧ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.