ಆ್ಯಪ್ನಗರ

ವಿದ್ಯಾರ್ಥಿಗಳಿಗೆ ಇತಿಹಾಸ ಅರಿವು ಅಗತ್ಯ

ಧಾರವಾಡ: ವಿಶ್ವದಲ್ಲಿಯೇ ಭಾರತವು ಭವ್ಯವಾದ ಇತಿಹಾಸ, ವ್ಯಾಪಕ ಘನತೆ ಹೊಂದಿದೆ. ಆದ್ದರಿಂದ ನಿಖರ ನೆಲೆಯಲ್ಲಿವಿದ್ಯಾರ್ಥಿಗಳಿಗೆ ಇತಿಹಾಸದ ಅರಿವು ಅತ್ಯಗತ್ಯವಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಬೆಳಗಾವಿ ವಿಭಾಗದ ನಿರ್ದೇಶಕ ಡಾ. ಬಿ.ಕೆ.ಎಸ್‌. ವರ್ಧನ್‌ ಹೇಳಿದರು.

Vijaya Karnataka 18 Feb 2020, 5:00 am
ಧಾರವಾಡ: ವಿಶ್ವದಲ್ಲಿಯೇ ಭಾರತವು ಭವ್ಯವಾದ ಇತಿಹಾಸ, ವ್ಯಾಪಕ ಘನತೆ ಹೊಂದಿದೆ. ಆದ್ದರಿಂದ ನಿಖರ ನೆಲೆಯಲ್ಲಿವಿದ್ಯಾರ್ಥಿಗಳಿಗೆ ಇತಿಹಾಸದ ಅರಿವು ಅತ್ಯಗತ್ಯವಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಬೆಳಗಾವಿ ವಿಭಾಗದ ನಿರ್ದೇಶಕ ಡಾ. ಬಿ.ಕೆ.ಎಸ್‌. ವರ್ಧನ್‌ ಹೇಳಿದರು.
Vijaya Karnataka Web students need history awareness
ವಿದ್ಯಾರ್ಥಿಗಳಿಗೆ ಇತಿಹಾಸ ಅರಿವು ಅಗತ್ಯ


ನಗರದ ಆಲೂರು ವೆಂಕಟರಾವ ಸಭಾಭವನದಲ್ಲಿಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಮೈಸೂರು ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಬೆಳಗಾವಿ ವಿಭಾಗದ ಆಯುಕ್ತರ ಕಚೇರಿಯ ಜಂಟಿ ಆಶ್ರಯದಲ್ಲಿಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ಪ್ರಾಚ್ಯ ಪ್ರಜ್ಞೆ ಕುರಿತು ಅರಿವು ಮೂಡಿಸುವ ವಿಭಾಗ ಮಟ್ಟದ ಸ್ಪರ್ಧೆ ಉದ್ಘಾಟಿಸಿ ಅವರು ಮಾತನಾಡಿದರು.

ಭಾರತದ ಸಮಗ್ರ ಇತಿಹಾಸ ಅರ್ಥಮಾಡಿಕೊಂಡಾಗ ಮಾತ್ರ ದೇಶಪ್ರೇಮ ಹಾಗೂ ಭವಿಷ್ಯತ್ತಿನ ಭಾರತ ಕುರಿತು ಸ್ಪಷ್ಟ ನಿಲುವು ಹೊಂದಲು ಸಾಧ್ಯ ಎಂದರು.

ಪುರಾತತ್ವ ಸಂಗ್ರಹಾಲಯ ಬೆಳಗಾವಿ ವಿಭಾಗದ ಉಪನಿರ್ದೇಶಕ ಡಾ. ಎಸ್‌.ಕೆ. ವಾಸುದೇವ ಅಧ್ಯಕ್ಷತೆ ವಹಿಸಿದ್ದರು. ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರ ಕಚೇರಿಯ ಸಾರ್ವಜನಿಕ ಸಂಪರ್ಕಾಧಿಕಾರಿ ಉಮೇಶ ಬಮ್ಮಕ್ಕನವರ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು. ಡಿಡಿಪಿಐ ಕಚೇರಿಯ ವಿಷಯ ಪರಿವೀಕ್ಷಕ ಬಿ.ಬಿ.ದುಬ್ಬನಮರಡಿ ಹಾಗೂ ಶಿಕ್ಷಣ ಇಲಾಖೆಯ ಆಯುಕ್ತರ ಕಚೇರಿಯ ಚಿತ್ರಕಲಾ ವಿಷಯ ಪರಿವೀಕ್ಷಕ ಪಿ.ಆರ್‌. ಬಾರಕೇರ ಇದ್ದರು.

ಆಯುಕ್ತರ ಕಚೇರಿಯ ಯೋಜನಾ ಸಹಾಯಕ ಚಂದ್ರಶೇಖರ ಅಳಗೋಡಿ ನಿರೂಪಿಸಿದರು. ಪುಡಕಲಕಟ್ಟಿ ಸರಕಾರಿ ಪ್ರೌಢ ಶಾಲಾ ಶಿಕ್ಷಕ ಎಂ.ಐ.ಪೆಂಟೇದ ವಂದಿಸಿದರು. ಬೆಳಗಾವಿ ವಿಭಾಗದ 9 ಜಿಲ್ಲೆಗಳ ಪ್ರೌಢ ಶಾಲಾ ವಿದ್ಯಾರ್ಥಿಗಳು ಸ್ಪರ್ಧೆಗಳಲ್ಲಿಪಾಲ್ಗೊಂಡಿದ್ದರು. ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಎಲ್ಲಜಿಲ್ಲೆಗಳ ನೋಡಲ್‌ ಅಧಿಕಾರಿಗಳು ಹಾಗೂ ಪ್ರೌಢ ಶಾಲಾ ಮುಖ್ಯ ಶಿಕ್ಷಕರು ಪಾಲ್ಗೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ