ಆ್ಯಪ್ನಗರ

ವಿವೇಕಾನಂದರ ಕೃತಿ ಓದಲು ಸಲಹೆ

ಹುಬ್ಬಳ್ಳಿ: ವಿದ್ಯಾರ್ಥಿಗಳು ಸ್ವಾಮಿ ವಿವೇಕಾನಂದರ ಕೃತಿಗಳನ್ನು ಓದುವ ಮೂಲಕ ತಮ್ಮ ವ್ಯಕ್ತಿತ್ವ ವಿಕಸನ ಮಾಡಿಕೊಳ್ಳಬೇಕೆಂದು ಪ್ರೊ. ಕೆ.ಎಸ್‌. ಕೌಜಲಗಿ ಹೇಳಿದರು.

Vijaya Karnataka 16 Jan 2020, 5:00 am
ಹುಬ್ಬಳ್ಳಿ: ವಿದ್ಯಾರ್ಥಿಗಳು ಸ್ವಾಮಿ ವಿವೇಕಾನಂದರ ಕೃತಿಗಳನ್ನು ಓದುವ ಮೂಲಕ ತಮ್ಮ ವ್ಯಕ್ತಿತ್ವ ವಿಕಸನ ಮಾಡಿಕೊಳ್ಳಬೇಕೆಂದು ಪ್ರೊ. ಕೆ.ಎಸ್‌. ಕೌಜಲಗಿ ಹೇಳಿದರು.
Vijaya Karnataka Web suggested reading vivekanandas work
ವಿವೇಕಾನಂದರ ಕೃತಿ ಓದಲು ಸಲಹೆ


ಕೆಎಲ್‌ಇ ಸಂಸ್ಥೆಯ ಪಿ.ಸಿ. ಜಾಬಿನ ವಿಜ್ಞಾನ ಮಹಾವಿದ್ಯಾಲಯದಲ್ಲಿಸ್ವಾಮಿ ವಿವೇಕಾನಂದರ 157ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿಮಾತನಾಡಿದ ಅವರು, ವಿವೇಕಾನಂದರ ಜೀವನ ಸಾಧನೆಗಳನ್ನು ವಿವರಿಸುತ್ತಾ, ವಿದ್ಯಾರ್ಥಿಗಳು ಕುತೂಹಲ ಆಸಕ್ತಿಯಿಂದ ವೈಜ್ಞಾನಿಕ ವಿಷಯಗಳನ್ನು ಅರಿಯಬೇಕೆಂದರು.

ವಿದ್ಯಾರ್ಥಿಗಳು ಭಾಷೆಗಳ ಮೇಲೆ ಪ್ರಭುತ್ವ ಹೊಂದಿ, ತ್ಯಾಗ, ಸೇವೆ ರೂಢಿಸಿಕೊಳ್ಳುವ ಮೂಲಕ ರಾಷ್ಟ್ರೀಯ ಮನೋಭಾವವನ್ನು ಹೊಂದಬೇಕೆಂದರು. ವಿವೇಕಾನಂದರು ತಿಳಿಸಿದ ದೇಹ ಬಲ, ಮನೋಬಲ ಮತ್ತು ಆತ್ಮ ಬಲಗಳನ್ನು ಹೆಚ್ಚಿಸಿಕೊಳ್ಳುವ ಮೂಲಕ ಆತ್ಮವಿಶ್ವಾಸ ಬೆಳಿಸಿಕೊಳ್ಳಬೇಕೆಂದರು. ಪ್ರಶ್ನಿಸುವ ಮನೋಭಾವದಿಂದ ವ್ಯಕ್ತಿತ್ವ ಬೆಳೆಯುತ್ತದೆ ಎಂದರು.

ಪ್ರಾಚಾರ್ಯ ಡಾ. ಎಸ್‌.ವಿ.ಹಿರೇಮಠ ಅಧ್ಯಕ್ಷತೆ ವಹಿಸ ಮಾತನಾಡುತ್ತಾ, ವಿವೇಕಾನಂದರು ಭಾರತದ ಸಂಸ್ಕೃತಿಯನ್ನು ಶ್ರೀಮಂತಗೊಳಿಸದ್ದರು ಎಂದರು. ವಿದ್ಯಾರ್ಥಿಗಳು ಮನಸ್ಸನ್ನು ಸ್ವಚ್ಛವಾಗಿರಿಸಿಕೊಳ್ಳಬೇಕು, ಸುಳ್ಳು ಹೇಳುವುದನ್ನು ಬಿಡಬೇಕು, ನೇರ ನುಡಿಯುವುದನ್ನು ಅಳವಡಿಸಿಕೊಳ್ಳಬೇಕು ಮತ್ತು ರಾಷ್ಟಾ್ರಭಿಮಾನ ಬೆಳಿಸಿ ಕೊಳ್ಳಬೇಕೆಂದರು.

ಪದವಿ ಪೂರ್ವ ಪ್ರಾಚಾರ್ಯ ಪ್ರೊ. ವಿ. ಆರ್‌. ವಾಘಮೋಡೆ ಸ್ವಾಗತಿಸಿ ಅತಿಥಿಗಳನ್ನು ಪರಿಚಯಿಸಿದರು. ಉಪನ್ಯಾಸಕಿ ಭವಾನಿ ಸಂಗಣ್ಣವರ ವೇದಿಕೆ ಮೇಲೆ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಮನಿಷಾ, ಭವಾನಿ, ಪೂಜಾ, ವಿವೇಕಾನಂದರ ಕುರಿತು ಮಾತನಾಡಿದರು. ಕಾಲೇಜು ಒಕ್ಕೂಟದ ಉಪಾಧ್ಯಕ್ಷರುಗಳಾದ ಡಾ. ಬಿ.ಎಸ್‌. ಅಗಡಿ ವಂದಿಸಿದರು, ವಿದ್ಯಾರ್ಥಿನಿಯರಾದ ಕನ್ನಿಕಾ ಮತ್ತು ಭುವನಾ ಪ್ರಾರ್ಥಿಸಿದರು, ಕುಮಾರಿ ಪ್ರೀಯಾ ಪಾಟೀಲ ಕಾರ್ಯಕ್ರಮ ನಿರೂಪಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ