ಆ್ಯಪ್ನಗರ

ಭಾರತ ಬಂದ್‌ಗೆ ಜೆಡಿಎಸ್‌ ಸೇರಿ ಕೆಲ ಸಂಘಟನೆಗಳ ಬೆಂಬಲ: ಖಂಡ್ರೆ

ಹುಬ್ಬಳ್ಳಿ :ಇಂಧನ ಬೆಲೆ ಏರಿಕೆ ಸೇರಿದಂತೆ ಜನವಿರೋಧಿ ನೀತಿ ಅನುಸರಿಸುತ್ತಿರುವ ಕೇಂದ್ರ ಬಿಜೆಪಿ ಸರಕಾರದ ವಿರುದ್ಧ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ನೇತೃತ್ವದಲ್ಲಿ ಸೆ. 10 ರಂದು ಕರೆ ನೀಡಲಾದ 'ಭಾರತ ಬಂದ್‌'ಗೆ ರಾಜ್ಯದಲ್ಲಿ ಮಿತ್ರ ಪಕ್ಷ ಜೆಡಿಎಸ್‌ ಸೇರಿ ಹಲವಾರು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ತಿಳಿಸಿದರು.

Vijaya Karnataka 9 Sep 2018, 5:00 am
ಹುಬ್ಬಳ್ಳಿ :ಇಂಧನ ಬೆಲೆ ಏರಿಕೆ ಸೇರಿದಂತೆ ಜನವಿರೋಧಿ ನೀತಿ ಅನುಸರಿಸುತ್ತಿರುವ ಕೇಂದ್ರ ಬಿಜೆಪಿ ಸರಕಾರದ ವಿರುದ್ಧ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ನೇತೃತ್ವದಲ್ಲಿ ಸೆ. 10 ರಂದು ಕರೆ ನೀಡಲಾದ 'ಭಾರತ ಬಂದ್‌'ಗೆ ರಾಜ್ಯದಲ್ಲಿ ಮಿತ್ರ ಪಕ್ಷ ಜೆಡಿಎಸ್‌ ಸೇರಿ ಹಲವಾರು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ತಿಳಿಸಿದರು.
Vijaya Karnataka Web support of some organizations including the jds in india khandre
ಭಾರತ ಬಂದ್‌ಗೆ ಜೆಡಿಎಸ್‌ ಸೇರಿ ಕೆಲ ಸಂಘಟನೆಗಳ ಬೆಂಬಲ: ಖಂಡ್ರೆ


ಶನಿವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ''ಪ್ರಧಾನಿ ಮೋದಿ ಸರಕಾರದ ತಪ್ಪು ನೀತಿಯಿಂದಾಗಿ ದೇಶದಲ್ಲಿ ಅಸಹಿಷ್ಣುತೆ, ಅರಾಜಕತೆ, ಆತಂಕದ ವಾತಾವರಣ ನಿರ್ಮಾಣವಾಗುತ್ತಿದೆ. ಶಾಂತಿಯುತ ಬಂದ್‌ ಆಚರಣೆ ಮೂಲಕ ಕೇಂದ್ರ ಸರಕಾರದ ದುರಾಡಳಿತದ ಬಗ್ಗೆ ಜನಜಾಗೃತಿ ಮೂಡಿಸಲಾಗುತ್ತಿದೆ'' ಎಂದು ತಿಳಿಸಿದರು.

''ಕೇಂದ್ರದ ದುರಾಡಳಿತದಿಂದ ದೇಶದ ಜನತೆ ರೋಸಿ ಹೋಗಿದ್ದಾರೆ. ದಿನದಿಂದ ದಿನಕ್ಕೆ ಜೀವಾನವಶ್ಯಕ ವಸ್ತುಗಳ ಬೆಲೆ ಏರುತ್ತಿದೆ. ಜನರ ಬಗ್ಗೆ ಸರಕಾರಕ್ಕೆ ಕಾಳಜಿಯೇ ಇಲ್ಲ. ಕಳೆದ ಲೋಕಸಭಾ ಚುನಾವಣೆ ಮುನ್ನ ಪ್ರಧಾನಿ ಮೋದಿ ಸಾಕಷ್ಟು ಭರವಸೆ ನೀಡಿದ್ದರು. ಆದರೆ, ಈವರೆಗೆ ಯಾವುದನ್ನೂ ಈಡೇರಿಸಿಲ್ಲ'' ಎಂದು ಆರೋಪಿಸಿದರು.

''ಇನ್ನು ರೈತರ ಬೆಳೆಗೆ ವೈಜ್ಞಾನಿಕ ಬೆಲೆ ನಿಗದಿ ಹಾಗೂ ಬೆಳೆ ವಿಮೆ ಹಂಚಿಕೆ ವಿಚಾರದಲ್ಲಿ ಕೇಂದ್ರ ಸರಕಾರ ಸಾಕಷ್ಟು ಗೊಂದಲ ಸೃಷ್ಟಿಸಿದೆ. ಇದೀಗ ಬೆಂಬಲ ಬೆಲೆಯಲ್ಲಿ ಹೆಸರು ಖರೀದಿ ವಿಚಾರದಲ್ಲಿಯೂ ರೈತರ ಮೂಗಿಗೆ ತುಪ್ಪ ಒರೆಸುವ ಕೆಲಸ ಮಾಡಲಾಗುತ್ತಿದೆ. ಕೇಂದ್ರ ಸರಕಾರ ಕೇವಲ ಕಾರ್ಪೊರೇಟ್‌ ಕಂಪನಿಗಳಿಗೆ ಪೂರಕ ನೀತಿ ಜಾರಿಗೆ ತಂದು ಶ್ರೀಸಾಮಾನ್ಯರ ಬದುಕನ್ನು ಸಂಕಷ್ಟಕ್ಕೆ ದೂಡುತ್ತಿದೆ'' ಎಂದು ಆರೋಪಿಸಿದರು.

''ಜಾತಿ-ಜಾತಿಗಳ ಮಧ್ಯೆ ಕಲಹ, ರಾಷ್ಟ್ರೀಯತೆ, ಭಾವನಾತ್ಮಕ ವಿಚಾರದೊಂದಿಗೆ ಬಿಜೆಪಿ ದೇಶದಲ್ಲಿ ಅಶಾಂತಿ ಹರಡುವ ಜೊತೆಗೆ ಪ್ರಜಾಪ್ರಭುತ್ವ ಆಶಯಕ್ಕೆ ಧಕ್ಕೆ ಉಂಟು ಮಾಡುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರಕಾರದ ವಿರುದ್ಧ ಹೋರಾಟ ನಡೆಸಿ ಜನರನ್ನು ಜಾಗೃತಗೊಳಿಸಲಾಗುತ್ತಿದೆ'' ಎಂದರು.

ಸುದ್ದಿಗೋಷ್ಠಿಯಲ್ಲಿ ಅಲ್ತಾಫ್‌ ಕಿತ್ತೂರ, ಅನೀಲಕುಮಾರ ಪಾಟೀಲ, ವಿಜಯ ಕುಲಕರ್ಣಿ, ರಾಬರ್ಟ್‌ ದದ್ದಾಪುರಿ, ನಾಗರಾಜ್‌ ಗೌರಿ, ಮೋಹನ ಅಸುಂಡಿ, ಶಾರುಕ್‌ ಮುಲ್ಲಾ, ದಶರಥ ವಾಲಿ, ಮೋಹನ ಹಿರೇಮನಿ, ಡಾ. ಮಹೇಶ ನಾಲವಾಡ ಸೇರಿದಂತೆ ಇತರರು ಇದ್ದರು.

ರಫೇಲ್‌ ಹಗರಣ ವಿರುದ್ಧ ಪ್ರತಿಭಟನೆ

ರಫೇಲ್‌ ಯುದ್ಧ ವಿಮಾನ ಖರೀದಿ ಹಗರಣದ ವಿರುದ್ಧ ಈಗಾಗಲೇ ಕೆಪಿಸಿಸಿ ವತಿಯಿಂದ ಸೆ. 7 ರಿಂದ ಸೆ. 14ರವರೆಗೆ ರಾಜ್ಯದಲ್ಲಿ ನಿರಂತರ ಪ್ರತಿಭಟನೆ ನಡೆಸಲಾಗುತ್ತಿದೆ. ಅಲ್ಲದೆ, ತನಿಖೆ ನಡೆಸಿ ಸತ್ಯಾಂಶ ಬಹಿರಂಗಗೊಳಿಸಬೇಕೆಂದು ಒತ್ತಾಯಿಸಲಾಗುತ್ತಿದೆ ಎಂದು ಖಂಡ್ರೆ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ