ಆ್ಯಪ್ನಗರ

ಪಾಟೀಲ ಪುಟ್ಟಪ್ಪಗೆ ಶಸ್ತ್ರಚಿಕಿತ್ಸೆ

ಹುಬ್ಬಳ್ಳಿ : ತಲೆ ಹಿಂಭಾಗದಲ್ಲಿರಕ್ತ ಹೆಪ್ಪುಗಟ್ಟುವಿಕೆ ಸಮಸ್ಯೆಯಿಂದ ಬಳಲುತ್ತಿದ್ದ ನಾಡೋಜ ಡಾ.ಪಾಟೀಲ ಪುಟ್ಟಪ್ಪ ಅವರಿಗೆ ಕಿಮ್ಸ್‌ ಆಸ್ಪತ್ರೆಯಲ್ಲಿಬುಧವಾರ ಶಸ್ತ್ರಚಿಕಿತ್ಸೆ ಮಾಡಲಾಗಿದೆ.

Vijaya Karnataka 27 Feb 2020, 5:00 am
ಹುಬ್ಬಳ್ಳಿ : ತಲೆ ಹಿಂಭಾಗದಲ್ಲಿರಕ್ತ ಹೆಪ್ಪುಗಟ್ಟುವಿಕೆ ಸಮಸ್ಯೆಯಿಂದ ಬಳಲುತ್ತಿದ್ದ ನಾಡೋಜ ಡಾ.ಪಾಟೀಲ ಪುಟ್ಟಪ್ಪ ಅವರಿಗೆ ಕಿಮ್ಸ್‌ ಆಸ್ಪತ್ರೆಯಲ್ಲಿಬುಧವಾರ ಶಸ್ತ್ರಚಿಕಿತ್ಸೆ ಮಾಡಲಾಗಿದೆ.
Vijaya Karnataka Web surgery for patiala puttappa
ಪಾಟೀಲ ಪುಟ್ಟಪ್ಪಗೆ ಶಸ್ತ್ರಚಿಕಿತ್ಸೆ


ಆಸ್ಪತ್ರೆಗೆ ದಾಖಲಾದ ಬಳಿಕ ರಕ್ತದೊತ್ತಡ ಮತ್ತು ಮಧುಮೇಹ ನಿಯಂತ್ರಣಕ್ಕೆ ಬಂದಿದೆ. ಇದರಿಂದ ಬೆಳಗ್ಗೆ ಡಾ.ಎಸ್‌.ಎಂ.ದುಗ್ಗಾಣಿ, ಡಾ.ವಿಶ್ವನಾಥ, ಡಾ.ಗುರುಪಾದಪ್ಪ ನೇತೃತ್ವದ ತಜ್ಞ ವೈದ್ಯರ ತಂಡದಿಂದ ರಕ್ತ ಹೆಪ್ಪುಗಟ್ಟುವಿಕೆ ನಿವಾರಿಸಲು ಸಣ್ಣ ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಈಗ ಪುಟ್ಟಪ್ಪ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಕಿಮ್ಸ್‌ ನಿರ್ದೇಶಕ ಡಾ.ರಾಮಲಿಂಗಪ್ಪ ಅಂಟರತಾನಿ ತಿಳಿಸಿದ್ದಾರೆ.

ಆರೋಗ್ಯ ವಿಚಾರಣೆ : ಕಾರ್ಮಿಕ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗಳ ಕರ್ನಾಟಕ ಸರಕಾರದ ಕಾರ್ಯದರ್ಶಿ ಪಿ.ಮಣಿವಣ್ಣನ್‌ ಅವರು ಬುಧವಾರ ಪುಟ್ಟಪ್ಪ ಅವರ ಆರೋಗ್ಯ ವಿಚಾರಿಸಿದರು.

ಸಿಎಂ ನಿರ್ದೇಶನ ಮೇರೆಗೆ ಭೇಟಿ ನೀಡಿದ ಅವರು, ಪುಟ್ಟಪ್ಪ ಅವರಿಗೆ ನೀಡುತ್ತಿರುವ ಚಿಕಿತ್ಸೆ, ವೈದ್ಯಕೀಯ ಸೌಲಭ್ಯಗಳ ಕುರಿತು ಸಂಪೂರ್ಣ ಮಾಹಿತಿ ಪಡೆದರು.

ಜಿಲ್ಲಾಧಿಕಾರಿ ದೀಪಾ, ಡಾ.ಅರುಣಕುಮಾರ್‌, ಡಾ.ಡಿ.ಎಂ.ಕಬಾಡಿ, ಡಾ.ಸಫಿಯಾ ಶೇಖ್‌, ಡಾ.ಶಾಂತಲಾ ಹುನಗುಂದ, ಡಾ.ಮಾಧುರಿ, ಜಿಲ್ಲಾವಾರ್ತಾಧಿಕಾರಿ ಮಂಜುನಾಥ ಡೊಳ್ಳಿನ, ಹುಬ್ಬಳ್ಳಿ ಗ್ರಾಮೀಣ ತಹಸೀಲ್ದಾರ ಪ್ರಕಾಶ ನಾಶಿ ಇದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ