ಆ್ಯಪ್ನಗರ

ಇಬ್ಬರು ಪೊಲೀಸರ ಅಮಾನತು

ಧಾರವಾಡ : ವಿಚಾರಣೆಗಾಗಿ ನ್ಯಾಯಾಲಯಕ್ಕೆ ಬಂದಾಗ ಪೊಲೀಸರನ್ನು ತಳ್ಳಿ ಕೈದಿಯೊಬ್ಬ ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಉಪನಗರ ಠಾಣೆ ಪೇದೆಗಳಾದ ಎಫ್‌.ಬಿ.ಪಾಟೀಲ ಹಾಗೂ ಎ.ಬಿ.ಬಡಿಗೇರ ಅವರನ್ನು

Vijaya Karnataka 22 Jul 2019, 5:00 am
ಧಾರವಾಡ : ವಿಚಾರಣೆಗಾಗಿ ನ್ಯಾಯಾಲಯಕ್ಕೆ ಬಂದಾಗ ಪೊಲೀಸರನ್ನು ತಳ್ಳಿ ಕೈದಿಯೊಬ್ಬ ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಉಪನಗರ ಠಾಣೆ ಪೇದೆಗಳಾದ ಎಫ್‌.ಬಿ.ಪಾಟೀಲ ಹಾಗೂ ಎ.ಬಿ.ಬಡಿಗೇರ ಅವರನ್ನು ಕರ್ತವ್ಯ ಲೋಪದ ಮೇಲೆ ಅಮಾನತುಗೊಳಿಸಿ ಹು-ಧಾ ಪೊಲೀಸ್‌ ಆಯುಕ್ತ ಎಂ.ಎನ್‌.ನಾಗರಾಜ ಅವರು ಆದೇಶ ಹೊರಡಿಸಿದ್ದಾರೆ.
Vijaya Karnataka Web suspension of two policemen
ಇಬ್ಬರು ಪೊಲೀಸರ ಅಮಾನತು


ಬೆಳಗಾವಿ ಮೂಲದ ನಿತೀಶ ಡಾಪಲೆ ಅವನನ್ನು ಧಾರವಾಡದ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿತ್ತು. ಪ್ರಕರಣವೊಂದರ ವಿಚಾರಣೆಗಾಗಿ ಶನಿವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಆದರೆ ಶನಿವಾರ ಉಪನಗರ ಠಾಣೆ ಈ ಪೊಲೀಸರನ್ನು ತಳ್ಳಿ ಪರಾರಿಯಾದ ಹಿನ್ನಲೆಯಲ್ಲಿ ಪೊಲೀಸರ ಕರ್ತವ್ಯ ಲೋಪ ಕಾರಣ ಅವರನ್ನು ಅಮಾನತು ಮಾಡಲಾಗಿದೆ. ಉಳಿದಂತೆ ಪರಾರಿ ಆಗಿರುವ ಕೈದಿಯನ್ನು ಬಂಧಿಸಲು ತಂಡ ರಚಿಸಿದ್ದು, ಆದಷ್ಟು ಬೇಗ ಬಂಧಿಸಲಾಗುವುದು ಎಂದು ಹು-ಧಾ ಮಹಾನಗರ ಪೊಲೀಸ ಆಯುಕ್ತ ಎಂ.ಎನ್‌.ನಾಗರಾಜ ವಿಕಕ್ಕೆ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ