ಆ್ಯಪ್ನಗರ

ಪ್ರತಿಭಾ ಪುರಸ್ಕಾರ ಸಮಾರಂಭ ನಾಳೆ

ಹುಬ್ಬಳ್ಳಿ: ಗೋಕುಲ ರಸ್ತೆ ಶಿವಪುರ ಕಾಲೊನಿಯಲ್ಲಿರುವ ಜೀಹ್ವೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆ.25ರಂದು ಬೆಳಗ್ಗೆ 10.30ಕ್ಕೆ ಜಿಲ್ಲಾ ಸ್ವಕುಳಸಾಳಿ ಸರಕಾರಿ, ಅರೆಸರಕಾರಿ ಹಾಗೂ ನಿವೃತ್ತ ನೌಕರ ವರ್ಗದ ಒಕ್ಕೂದ ವತಿಯಿಂದ ಪ್ರತಿಭಾ ಪುರಸ್ಕಾರ ಸಮಾರಂಭ ಹಮ್ಮಿಕೊಳ್ಳಲಾಗಿದೆ.

Vijaya Karnataka 24 Aug 2019, 5:00 am
ಹುಬ್ಬಳ್ಳಿ: ಗೋಕುಲ ರಸ್ತೆ ಶಿವಪುರ ಕಾಲೊನಿಯಲ್ಲಿರುವ ಜೀಹ್ವೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆ.25ರಂದು ಬೆಳಗ್ಗೆ 10.30ಕ್ಕೆ ಜಿಲ್ಲಾ ಸ್ವಕುಳಸಾಳಿ ಸರಕಾರಿ, ಅರೆಸರಕಾರಿ ಹಾಗೂ ನಿವೃತ್ತ ನೌಕರ ವರ್ಗದ ಒಕ್ಕೂದ ವತಿಯಿಂದ ಪ್ರತಿಭಾ ಪುರಸ್ಕಾರ ಸಮಾರಂಭ ಹಮ್ಮಿಕೊಳ್ಳಲಾಗಿದೆ.
Vijaya Karnataka Web talent reception ceremony tomorrow
ಪ್ರತಿಭಾ ಪುರಸ್ಕಾರ ಸಮಾರಂಭ ನಾಳೆ


ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿ, ಸ್ನಾತಕೋತ್ತರ, ಐಟಿಐ, ಡಿಪ್ಲೊಮಾ, ಎಂಜಿನಿಯರಿಂಗ್‌ನಲ್ಲಿ ಅತೀ ಹೆಚ್ಚು ಅಂಕ ಪಡೆದ ಸಮಾಜದ ವಿದ್ಯಾರ್ಥಿಗಳನ್ನು ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಲಾಗುವುದು. ಹುಬ್ಬಳ್ಳಿ ಜನಪದ ಕಲಾವಿದ ಪ್ರಕಾಶ ಕಂಬ್ಲಿ ಸಮಾರಂಭ ಉದ್ಘಾಟಿಸಲಿದ್ದಾರೆ. ಒಕ್ಕೂಟದ ಅಧ್ಯಕ್ಷ ವಿಠ್ಠಲ ಕೊಂಗಿ ಅಧ್ಯಕ್ಷತೆ ವಹಿಸಲಿದ್ದಾರೆ. ಪಿ.ಪಿ.ಚಿಲ್ಲಾಳ, ಶಂಕರರಾವ್‌ ಸಫಾರೆ, ರಮೇಶ ದಿವಟೆ, ರಮೇಶ ಚಿಲ್ಲಾಳ, ಏಕನಾಥ ಚೌಧರಿ ಭಾಗವಹಿಸಲಿದ್ದಾರೆ.

ಇದೇ ಸಂದರ್ಭದಲ್ಲಿ ನೂತನವಾಗಿ ಆಯ್ಕೆಯಾದ ರಾಜ್ಯ ಉಪಾಧ್ಯಕ್ಷೆ ಲಲಿತಾ ವಾಂಜರೆ, ವಿನಾಯಕ ಕಾಪಸೆ, ಮುರುಳೀಧರ ಢಗೆ, ಜೀವಣ್ಣ ಚಿಲ್ಲಾಳ, ವಿಠ್ಠಲ ಕ್ಷೀರಸಾಗರ, ಮೋಹನ ಉಕರಡೆ, ಸುಮತಿಬಾಯಿ ಹಾಲಭಾವಿ ಅವರನ್ನು ಸನ್ಮಾನಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ