ಆ್ಯಪ್ನಗರ

ಮಕ್ಕಳಿಗೆ ಉತ್ತಮ ಸಂಸ್ಕಾರ ಕಲಿಸಿ

ಧಾರವಾಡ : ಆರ್ಥಿಕ ಚಟುವಟಿಕೆಗಳ ಮೂಲಕ ವ್ಯಕ್ತಿ ಮತ್ತು ಕುಟುಂಬಗಳಿಗೆ ಆರ್ಥಿಕ ಭದ್ರತೆ ನೀಡುವುದರ ಜತೆಗೆ ಸಾಮಾಜಿಕ ಕಾರ್ಯ ಮಾಡುವುದು ಬ್ಯಾಂಕ್‌ಗಳ ಕರ್ತವ್ಯದ ಒಂದು ಭಾಗ ಎಂದು ಬ್ಯಾಂಕ್‌ ಆಫ್‌ ಬರೋಡಾ ಮುಖ್ಯ ವ್ಯವಸ್ಥಾಪಕ ಬಸವರಾಜ ಬೆಲ್ಲದ ಹೇಳಿದರು.

Vijaya Karnataka 25 Jul 2019, 5:00 am
ಧಾರವಾಡ : ಆರ್ಥಿಕ ಚಟುವಟಿಕೆಗಳ ಮೂಲಕ ವ್ಯಕ್ತಿ ಮತ್ತು ಕುಟುಂಬಗಳಿಗೆ ಆರ್ಥಿಕ ಭದ್ರತೆ ನೀಡುವುದರ ಜತೆಗೆ ಸಾಮಾಜಿಕ ಕಾರ್ಯ ಮಾಡುವುದು ಬ್ಯಾಂಕ್‌ಗಳ ಕರ್ತವ್ಯದ ಒಂದು ಭಾಗ ಎಂದು ಬ್ಯಾಂಕ್‌ ಆಫ್‌ ಬರೋಡಾ ಮುಖ್ಯ ವ್ಯವಸ್ಥಾಪಕ ಬಸವರಾಜ ಬೆಲ್ಲದ ಹೇಳಿದರು.
Vijaya Karnataka Web teach children a good burial
ಮಕ್ಕಳಿಗೆ ಉತ್ತಮ ಸಂಸ್ಕಾರ ಕಲಿಸಿ


ನಗರದ ಯಾಲಕ್ಕಿ ಶೆಟ್ಟರ್‌ ಕಾಲೊನಿಯಲ್ಲಿನ ಹೆಲ್ಪಿಂಗ್‌ ಹ್ಯಾಂಡ್‌ ಫೌಂಡೇಶನ್‌ನಲ್ಲಿ ಬ್ಯಾಂಕ್‌ ಆಫ್‌ ಬರೋಡಾದ 112ನೇ ಸಂಸ್ಥಾಪನಾ ದಿನಾಚರಣೆ ನಿಮಿತ್ತ ನಿರಾಶ್ರೀತ ಮಕ್ಕಳಿಗೆ ಉಚಿತ ಶಾಲಾ ಬ್ಯಾಗ್‌, ರೇನ್‌ಕೋಟ, ಸ್ವೇಟರ್‌ ಹಾಗೂ ಪಠ್ಯಪುಸ್ತಕ ವಿತರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷ ತೆ ವಹಿಸಿ ಮಾತನಾಡಿದರು.

ಬ್ಯಾಂಕ್‌ ವ್ಯವಹಾರದಿಂದ ಬರುವ ಲಾಭದಲ್ಲಿ ಸ್ವಲ್ಪ ಮೊತ್ತವನ್ನು ಸಾಮಾಜಿಕ ಕಾರ್ಯಗಳಿಗೆ ಉಪಯೋಗಿಸಲಾಗುತ್ತಿದೆ. ಬಡವರಿಗೆ ಸಹಾಯ ಮಾಡುವ ಉದ್ದೇಶದಿಂದ ವಿವಿಧ ವಿದಾಯಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ.

ಮಕ್ಕಳಿಗೆ ವಿದ್ಯಾರ್ಥಿ ಜೀವನದಿಂದಲೇ ವಿಧೇಯತೆ, ಅಧ್ಯಯನಶೀಲತೆ, ಸಾಮಾಜಿಕ ಸಂಸ್ಕಾರಗಳನ್ನು ಕಲಿಸಬೇಕು. ಮಕ್ಕಳು ಚಿಕ್ಕವರಿದ್ದಾಗಿನಿಂದ ಬ್ಯಾಂಕಿಂಗ್‌ ವ್ಯವಹಾರ, ಬ್ಯಾಂಕಿಂಗ್‌ ಜ್ಞಾನ ಹೊಂಡುವ ಮೂಲಕ ಉಳಿತಾಯ ಮನೋಭಾವ ಬೆಳೆಸಿಕೊಂಡರೆ ಅವರು ಭವಿಷ್ಯದಲ್ಲಿ ಉತ್ತಮ ಜೀವನ ಹೊಂದುತ್ತಾರೆ ಎಂದರು.

ಹೆಲ್ಪಿಂಗ್‌ ಹ್ಯಾಂಡ್‌ ಫೌಂಡೇಶನ್‌ ಸಂಸ್ಥಾಪಕ ನವೀನ ರೆಡ್ಡಿ, ಬ್ಯಾಂಕ್‌ ಆಫ್‌ ಬರೋಡಾ ಸಿಬ್ಬಂದಿ, ಸಂಜೀವ. ಕೆ, ನಾಗಲಿಂಗಪ್ಪ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ