ಆ್ಯಪ್ನಗರ

ಮಾವು ಬೆಳೆಗಾರರಿಗೆ ತಾಂತ್ರಿಕ ಕಾರ್ಯಾಗಾರ

ಧಾರವಾಡ :ಧಾರವಾಡ ಮಾವು ಮೇಳದ ಅಂಗವಾಗಿ ಮಾವು ಬೆಳೆಗಾರರಿಗೆ ಮತ್ತು ಇಲಾಖೆಯ ಅಧಿಕಾರಿ ವರ್ಗದವರಿಗೆ ಸೋಮವಾರ ತೋಟಗಾರಿಕೆ ಇಲಾಖೆಯ ಆವರಣದಲ್ಲಿ ಮಾವು ಬೆಳೆಯ ಕುರಿತು ತಾಂತ್ರಿಕ ಕಾರ್ಯಗಾರ ನಡೆಸಲಾಯಿತು.

Vijaya Karnataka 29 May 2019, 5:00 am
ಧಾರವಾಡ :ಧಾರವಾಡ ಮಾವು ಮೇಳದ ಅಂಗವಾಗಿ ಮಾವು ಬೆಳೆಗಾರರಿಗೆ ಮತ್ತು ಇಲಾಖೆಯ ಅಧಿಕಾರಿ ವರ್ಗದವರಿಗೆ ಸೋಮವಾರ ತೋಟಗಾರಿಕೆ ಇಲಾಖೆಯ ಆವರಣದಲ್ಲಿ ಮಾವು ಬೆಳೆಯ ಕುರಿತು ತಾಂತ್ರಿಕ ಕಾರ್ಯಗಾರ ನಡೆಸಲಾಯಿತು.
Vijaya Karnataka Web DRW-27RANGA14


ಈ ವೇಳೆ ಕಾರ್ಯಕ್ರಮ ಉದ್ಘಾಟಿಸಿದ ಅರಭಾವಿಯ ತೋಟಗಾರಿಕೆ ಮಹಾವಿದ್ಯಾಲಯದ ವಿಷಯ ತಜ್ಞ ಡಾ.ಲಕ್ಷ ್ಮಣ ಕುಕನೂರ ಮಾತನಾಡಿ, ಮಾವಿನಲ್ಲಿ ಹೂ ಬಿಡುವ ಸಮಯ, ಕಾಯಿ ಕಚ್ಚಿದ ನಂತರ ಮತ್ತು ಕಾಯಿ ಕಟಾವಣೆ ಸಮಯದಲ್ಲಿ ಕೈಗೊಳ್ಳಬೇಕಾದ ತಾಂತ್ರಿಕ ವಿಧಾನಗಳನ್ನು ತಿಳಿಸಿ, ನೈಸರ್ಗಿಕವಾಗಿ ಹಣ್ಣನ್ನು ಮಾಗಿಸುವ ವಿಧಾನಗಳನ್ನು ವಿವರಿಸಿದರು.

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಪ್ರಶಾಂತ ಆರ್‌. ಕುಲಕರ್ಣಿ ಮಾತನಾಡಿ, ತೋಟಗಾರಿಕೆ ಇಲಾಖೆಯಲ್ಲಿ ವಿವಿಧ ಯೋಜನೆಗಳಡಿ ರೈತರಿಗೆ ಸಿಗುವ ಸೌಲಭ್ಯಗಳ ಕುರಿತು ಮಾಹಿತಿ ಒದಗಿಸಿದರು. ಇಲಾಖೆಯಲ್ಲಿ ಉತ್ತಮ ಗುಣಮಟ್ಟದ ದ್ವಿವಾಟೆ ಮಾವಿನ ಕಸಿ ಗಿಡಗಳು, ನಿಂಬೆ, ನುಗ್ಗೆ, ಕರಿಬೇವು, ಪೇರಲ ಮತ್ತು ತರಕಾರಿ ಸಸಿಗಳು ಯೋಗ್ಯ ದರದಲ್ಲಿ ಮಾರಾಟಕ್ಕೆ ಲಭ್ಯ ಇವೆ ಎಂದು ರೈತರಿಗೆ ತಿಳಿಸಿದರು.

ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಡಾ.ರಾಮಚಂದ್ರ ಕೆ. ಮಡಿವಾಳ ಪ್ರಾಸ್ತಾವಿಕವಾಗಿ ಮಾತನಾಡಿ, ತರಬೇತಿಯ ಉದ್ದೇಶಗಳನ್ನು ತಿಳಿಸಿದರು.

ಕಾರ್ಯಾಗಾರದಲ್ಲಿ ಜಿಲ್ಲೆಯ ವಿವಿಧ ತಾಲೂಕಿನಿಂದ ಆಗಮಿಸಿದ್ದ ಮಾವು ಬೆಳೆಗಾರರು ಭಾಗವಹಿಸಿ, ಮಾವಿನ ಬೆಳೆಯಲ್ಲಿರುವ ಸಮಸ್ಯೆಗಳನ್ನು ತಜ್ಞರೊಂದಿಗೆ ಪ್ರಸ್ತಾಪಿಸಿ ಸೂಕ್ತ ಮಾಹಿತಿ ಪಡೆದರು.

ಸಹಾಯಕ ತೋಟಗಾರಿಕೆ ನಿರ್ದೇಶಕ ಅಜಿತಕುಮಾರ ಎಸ್‌. ಮಶಾಲ್ಡಿ ನಿರೂಪಿಸಿ, ವಂದಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ