ಆ್ಯಪ್ನಗರ

ಜೀವನದಲ್ಲಿ ಉತ್ತಮ ಗುಣ ಅಳವಡಿಸಿಕೊಳ್ಳಿ

ಹುಬ್ಬಳ್ಳಿ : ವಿದ್ಯಾರ್ಥಿಗಳು ಜೀವನದಲ್ಲಿ ಉತ್ತಮ ಗುಣಗಳನ್ನು ಅಳವಡಿಸಿಕೊಳ್ಳುವುದರ ಜತೆಗೆ ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಬಾಳಬೇಕು ಎಂದು ಹಾವೇರಿಯ ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ಹೇಳಿದರು.

ವಿಕ ಸುದ್ದಿಲೋಕ 7 Apr 2016, 4:00 am
ಹುಬ್ಬಳ್ಳಿ : ವಿದ್ಯಾರ್ಥಿಗಳು ಜೀವನದಲ್ಲಿ ಉತ್ತಮ ಗುಣಗಳನ್ನು ಅಳವಡಿಸಿಕೊಳ್ಳುವುದರ ಜತೆಗೆ ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಬಾಳಬೇಕು ಎಂದು ಹಾವೇರಿಯ ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ಹೇಳಿದರು.
Vijaya Karnataka Web the best quality of life alavadisikolli
ಜೀವನದಲ್ಲಿ ಉತ್ತಮ ಗುಣ ಅಳವಡಿಸಿಕೊಳ್ಳಿ


ವಿದ್ಯಾನಗರ ಕೆಎಲ್‌ಇ ಸೊಸಾಯಿಟಿಯ ಚನ್ನಬಸಮ್ಮ ಈಶ್ವರಪ್ಪ ಮುನವಳ್ಳಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಚಿಗುರು-2016, ಹಳೇವಿದ್ಯಾರ್ಥಿಗಳ ಸಮ್ಮೇಳನ, ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು.

ಮೊಬೈಲ್, ಕಂಪ್ಯೂಟರ್‌ಗಳನ್ನು ಚಾಟಿಂಗ್, ಕಾಮೆಂಟ್ ಮಾಡುವುದಕ್ಕೆ ಬಳಸದೇ,ಅಧ್ಯಯನಕ್ಕೆ ಪೂರಕವಾಗುವುಂತೆ ಬಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ಮಾಡಿದ ಅವರು, ಅಧ್ಯಯನಕ್ಕೆ ಹೆಚ್ಚು ಒತ್ತು ನೀಡಿ ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ಬದುಕಬೇಕು ಎಂದರು.

ಹು-ಧಾ ಮಹಾನಗರ ಪಾಲಿಕೆ ಉಪಮೇಯರ್ ಲಕ್ಷ್ಮೀ ಉಪ್ಪಾರ ಮಾತನಾಡಿ, ಮಹಾನಗರ ಪಾಲಿಕೆ ಸ್ವಚ್ಛತೆಯ ಬಗ್ಗೆ ಕೈಕೊಂಡ ಕ್ರಮಗಳ ಕುರಿತು ಮಾಹಿತಿ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಶಂಕರಣ್ಣ ಮುನವಳ್ಳಿ ಮಾತನಾಡಿ, ವಿದ್ಯಾರ್ಥಿಗಳು ಮೂರು ವರ್ಷ ಕಷ್ಟಪಟ್ಟು ಓದಿದರೆ ಮುಂದೆ 30 ವರ್ಷ ಸುಖಮಯ ಜೀವನ ನಡೆಸಬಹುದು ಎಂದರು.

ಪ್ರಾಚಾರ್ಯ ವೀರೇಶ ಅಂಗಡಿ, ಹಳೇ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ನಾಯಕ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ