ಆ್ಯಪ್ನಗರ

ಬಿಜೆಪಿಯದ್ದು ಬರೀ ಸ್ಲೋಗನ್‌

ಹುಬ್ಬಳ್ಳಿ : ಬಿಜೆಪಿಯವರು ಲೋಕಸಭೆ ಚುನಾವಣೆಯನ್ನು ಸಾಧನೆ ಮುಂದಿಟ್ಟುಕೊಂಡು ಏಕೆ ಪ್ರಚಾರ ಮಾಡುತ್ತಿಲ್ಲ ಎಂದು ಪ್ರಶ್ನಿಸಿದ ಕಂದಾಯ ಸಚಿವ ಆರ್‌.ವಿ. ದೇಶಪಾಂಡೆ, ಬರೀ ಸ್ಲೋಗನ್‌ ಮೂಲಕ ಚುನಾವಣೆ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

Vijaya Karnataka 16 Apr 2019, 5:00 am
ಹುಬ್ಬಳ್ಳಿ : ಬಿಜೆಪಿಯವರು ಲೋಕಸಭೆ ಚುನಾವಣೆಯನ್ನು ಸಾಧನೆ ಮುಂದಿಟ್ಟುಕೊಂಡು ಏಕೆ ಪ್ರಚಾರ ಮಾಡುತ್ತಿಲ್ಲ ಎಂದು ಪ್ರಶ್ನಿಸಿದ ಕಂದಾಯ ಸಚಿವ ಆರ್‌.ವಿ. ದೇಶಪಾಂಡೆ, ಬರೀ ಸ್ಲೋಗನ್‌ ಮೂಲಕ ಚುನಾವಣೆ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
Vijaya Karnataka Web the bjp is just a slogan
ಬಿಜೆಪಿಯದ್ದು ಬರೀ ಸ್ಲೋಗನ್‌


ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಇದುವರೆಗೆ ವಿಷಯಾಧರಿತ ಮತ್ತು ಸಾಧನೆಗಳನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸುತ್ತಿದೆ. ಕಾಂಗ್ರೆಸ್‌ ಇಲ್ಲಿವರೆಗೆ ನೀರಾವರಿ ಯೋಜನೆಗಳು, ಆಣೆಕಟ್ಟುಗಳ ನಿರ್ಮಾಣ, ಕೃಷಿ, ಕೈಗಾರಿಕೆಯಲ್ಲಿ ಕ್ರಾಂತಿ ಮಾಡಿದಿದೆ. ರೈತರ ಸಾಲ ಮನ್ನಾ ಮಾಡಿದೆ. ಮೂಲ ಸೌಕರ್ಯಗಳನ್ನು ಕಲ್ಪಿಸಿದೆ. ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲು ಸೌಲಭ್ಯ ಕಲ್ಪಿಸಿದ್ದು ಕಾಂಗ್ರೆಸ್‌. ಆದರೆ, ಬಿಜೆಪಿಗೆ ಹೇಳಿಕೊಳ್ಳಲು ಸಾಧನೆಗಳೇ ಇಲ್ಲ. ಹಾಗಾಗಿ ಬರೀ ಘೋಷಣೆಗಳೊಂದಿಗೆ ಪ್ರಚಾರ ಮಾಡುತ್ತಿದೆ ಎಂದು ಛೇಡಿಸಿದರು.

'ಐದು ವರ್ಷಗಳ ಅವಧಿಯಲ್ಲಿ ಕೈಗಾರಿಕೆ ಉತ್ಪಾದನಾ ವಲಯ ಸ್ಥಗಿತಗೊಂಡು ನಕಾರಾತ್ಮಕ ಅಂಶ ದಾಖಲಿಸಿದೆ. ಸಣ್ಣ ಮತ್ತು ಮಧ್ಯಮ ಕೈಗಾರಿಕೆ ನಿರ್ಲಕ್ಷಿಸಿದ ಪರಿಣಾಮ ಉದ್ಯೋಗ ಸೃಷ್ಟಿಯಾಗುತ್ತಿಲ್ಲ 'ಎಂದು ಆರೋಪಿಸಿದರು.

ಧಾರವಾಡ ಜಿಲ್ಲೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ನಿರ್ದಿಷ್ಟ ಜಾತಿ ಮುಂದಿಟ್ಟುಕೊಂಡು ಮತ ಕೇಳುತ್ತಿರುವುದು ಸರಿಯಲ್ಲ. ಎಲ್ಲಾ ಸಮುದಾಯದವರು ವೋಟು ಹಾಕಿದಾಗ ಮಾತ್ರ ಜಯ ಸಾಧ್ಯ. ಈ ಬಗ್ಗೆ ಅವರಿಗೆ ಮನವರಿಕೆ ಮಾಡುತ್ತೇನೆ ಎಂದು ದೇಶಪಾಂಡೆ ತಿಳಿಸಿದರು.

ಶಾಸಕ ಪ್ರಸಾದ ಅಬ್ಬಯ್ಯ, ಮಾಜಿ ಸಂಸದ ಐ.ಜಿ. ಸನದಿ, ಮಹಾನಗರ ಗ್ರಾಮೀಣ ಜಿಲ್ಲಾಧ್ಯಕ್ಷರಾದ ಅಲ್ತಾಫ ಹಳ್ಳೂರ, ಅನಿಲಕುಮಾರ ಪಾಟೀಲ ಸೇರಿದಂತೆ ಹಲವು ಮುಖಂಡರು ಸುದ್ದಿಗೋಷ್ಠಿಯಲ್ಲಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ