ಆ್ಯಪ್ನಗರ

ಸಮಾರಂಭ ಸರಳವಾಗಿರಲಿ: ನ್ಯಾ. ನಾರಾಯಣಸ್ವಾಮಿ

ಧಾರವಾಡ : ಜ.19 ರಂದು ಜರುಗುವ ಜಿಲ್ಲಾ ನ್ಯಾಯಾಲಯ ಸಂಕೀರ್ಣದ 1 ಮತ್ತು 2ನೇ ಮಹಡಿ ಕಟ್ಟಡದ ಉದ್ಘಾಟನಾ ಸಮಾರಂಭವನ್ನು ಯಶಸ್ವಿಯಾಗಿ ಶಿಷ್ಟಾಚಾರದಂತೆ ಸರಳವಾಗಿ ಆಯೋಜಿಸಬೇಕು ಎಂದು ಕರ್ನಾಟಕ ಉಚ್ಚನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ಜಿಲ್ಲೆಯ ಆಡಳಿತಾತ್ಮಕ ನ್ಯಾಯಮೂರ್ತಿ ಎಲ್‌.ನಾರಾಯಣಸ್ವಾಮಿ ಹೇಳಿದರು.

Vijaya Karnataka 18 Jan 2019, 5:00 am
ಧಾರವಾಡ : ಜ.19 ರಂದು ಜರುಗುವ ಜಿಲ್ಲಾ ನ್ಯಾಯಾಲಯ ಸಂಕೀರ್ಣದ 1 ಮತ್ತು 2ನೇ ಮಹಡಿ ಕಟ್ಟಡದ ಉದ್ಘಾಟನಾ ಸಮಾರಂಭವನ್ನು ಯಶಸ್ವಿಯಾಗಿ ಶಿಷ್ಟಾಚಾರದಂತೆ ಸರಳವಾಗಿ ಆಯೋಜಿಸಬೇಕು ಎಂದು ಕರ್ನಾಟಕ ಉಚ್ಚನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ಜಿಲ್ಲೆಯ ಆಡಳಿತಾತ್ಮಕ ನ್ಯಾಯಮೂರ್ತಿ ಎಲ್‌.ನಾರಾಯಣಸ್ವಾಮಿ ಹೇಳಿದರು.
Vijaya Karnataka Web DRW-16MAILAR09


ನಗರದ ಜಿಲ್ಲಾ ನ್ಯಾಯಾಲಯದ ಸಭಾಭವನದಲ್ಲಿ, ಜಿಲ್ಲಾ ನ್ಯಾಯಾಲಯ ಸಂಕೀರ್ಣದ 1 ಮತ್ತು 2ನೇ ಮಹಡಿ ಕಟ್ಟಡದ ಉದ್ಘಾಟನಾ ಸಮಾರಂಭದ ಪೂರ್ವ ಸಿದ್ಧತೆಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ಜರುಗಿಸಿ ಬುಧುವಾರ ಅವರು ಮಾತನಾಡಿದರು.

ಅಂದಿನ ಸಮಾರಂಭದಲ್ಲಿ ಭಾರತ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಮೋಹನ್‌ ಎಂ.ಶಾಂತನಗೌಡರ್‌, ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ದಿನೇಶ ಮಹೇಶ್ವರಿ, ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಸೇರಿದಂತೆ ವಿವಿಧ ಸಚಿವರು, ನ್ಯಾಯಮೂರ್ತಿಗಳು ಭಾಗವಹಿಸಲಿದ್ದಾರೆ ಎಂದರು. ಅಲ್ಲದೇ ಕಾರ್ಯಕ್ರಮವನ್ನು ಸರಳವಾಗಿ ಹಾಗೂ ಯಶಸ್ವಿಯಾಗಿ ನಿರ್ವಹಿಸಲು ಜಿಲ್ಲಾಡಳಿತ ಹಾಗೂ ಜಿಲ್ಲಾ ನ್ಯಾಯಾಲಯ ಮಾಡಿಕೊಂಡಿರುವ ಪೂರ್ವಸಿದ್ಧತೆ ತೃಪ್ತಿ ತಂದಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಈಶಪ್ಪ ಕೆ.ಭೂತೆ, ಜಿಲ್ಲಾಧಿಕಾರಿ ದೀಪಾ ಎಂ, ಜಿಪಂ ಸಿಇಒ ಡಾ.ಬಿ.ಸಿ.ಸತೀಶ, ಜಿಲ್ಲಾ ಹೈಕೊರ್ಟ ಪೀಠದ ಅಸಿಸ್ಟಂಟ್‌ ರಜಿಸ್ಟ್ರಾರ್‌ ಎಸ್‌.ವೈ.ವಟವಟಿ, ಅಪರ ಜಿಲ್ಲಾಧಿಕಾರಿ ಇಬ್ರಾಹಿಂ ಮೈಗೂರ, ಉಪಪೋಲಿಸ್‌ ಆಯುಕ್ತ ಬಿ.ಎಸ್‌.ನೇಮಗೌಡ, ಜಿಲ್ಲಾ ನ್ಯಾಯಾಧೀಶ ಸಿದ್ಧಪ್ಪ ಹೊಸಮನಿ, ಹಿರಿಯ ಸಿವಿಲ್‌ ನ್ಯಾಯಾಧೀಶ ಆರ.ಎಸ್‌.ಚಿಣ್ಣನ್ನವರ, ಮಹಾನಗರ ಪಾಲಿಕೆ ಆಯುಕ್ತ ಶಕೀಲ ಅಹ್ಮದ, ಎಸ್‌.ಪಿ.ಕಚೇರಿಯ ಡಿವೈಎಸ್‌ಪಿ ಗುರು ಬಿ. ಮತ್ತೂರ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಆರ್‌.ಯು.ಬೆಳ್ಳಕ್ಕಿ, ಉಪವಿಭಾಗಾಧಿಕಾರಿ ಮಹ್ಮದ ಜುಬೇರ, ತಹಸಿಲ್ದಾರ ಪ್ರಕಾಶ ಕುದರಿ, ವೀರೂಪಾಕ್ಷ ಯಮಕನಮರಡಿ, ಸದಾಶಿವ ಮರ್ಜಿ,ಮುನಿರಾಜು, ಡಾ.ಕೆ.ರಾಮಚಂದ್ರ ಮಡಿವಾಳ, ಎನ್‌.ಐ.ಸಿ. ಅಧಿಕಾರಿ ಮೀನಾಕುಮಾರಿ,ವಿನಾಯಕ ಪಾಲನಕರ ಸೇರಿದಂತೆ ಇತರರು ಇದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ