ಆ್ಯಪ್ನಗರ

ಸಮ್ಮಿಶ್ರ ಸರಕಾರ ಸೂಪರ್ ಆ್ಯಕ್ಟಿವ್ ಆಗಿದೆ: ಬಂಡೆಪ್ಪ ಕಾಶೆಂಪುರ

ಮೋದಿ ಕುಮಾರಸ್ವಾಮಿ ಅವರನ್ನ ಕ್ಲರ್ಕ ಎಂದು ಕರೆದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಸಮ್ಮಿಶ್ರ ಸರ್ಕಾರವನ್ನು ಕುಮಾರಸ್ವಾಮಿ ಅವರು ಒಳ್ಳೆಯ ರೀತಿಯಿಂದ ನಡೆಸಿಕೊಂಡು ಹೊರಟಿದ್ದಾರೆ. ಆದ್ರೆ ಪ್ರಧಾನಿ ಅವರು ಈ‌ ರೀತಿ ಏಕೆ ಮಾತನಾಡಿದ್ದಾರೋ ಗೊತ್ತಿಲ್ಲ ಎಂದರು.

Vijaya Karnataka Web 13 Jan 2019, 3:18 pm
ಹುಬ್ಬಳ್ಳಿ: ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಸಮ್ಮಿಶ್ರ ಸರಕಾರ ಸೂಪರ್ ಆ್ಯಕ್ಟಿವ್ ಆಗಿದೆ ಎಂದು ಜೆಡಿಎಸ್ ನಾಯಕ, ಸಹಕಾರ ಸಚಿವ ಬಂಡೆಪ್ಪ ಕಾಶೆಂಪುರ್ ಹೇಳಿದ್ದಾರೆ.
Vijaya Karnataka Web Bandeppa Kashapur


ಮೋದಿ ಕುಮಾರಸ್ವಾಮಿ ಅವರನ್ನ ಕ್ಲರ್ಕ ಎಂದು ಕರೆದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಸಮ್ಮಿಶ್ರ ಸರ್ಕಾರವನ್ನು ಕುಮಾರಸ್ವಾಮಿ ಅವರು ಒಳ್ಳೆಯ ರೀತಿಯಿಂದ ನಡೆಸಿಕೊಂಡು ಹೊರಟಿದ್ದಾರೆ. ಆದ್ರೆ ಪ್ರಧಾನಿ ಅವರು ಈ‌ ರೀತಿ ಏಕೆ ಮಾತನಾಡಿದ್ದಾರೋ ಗೊತ್ತಿಲ್ಲ ಎಂದರು.

ಸಮ್ಮಿಶ್ರ ಸರ್ಕಾರ ಸೂಪರ್ ಆ್ಯಕ್ಟಿವ್ ಆಗಿ ನಡೆಯುತ್ತಿದೆ. ಯಾವುದೇ ಕಾರಣಕ್ಕೂ ಸರ್ಕಾರ ಪತನವಾಗುವುದಿಲ್ಲ ಎಂದು ಅವರು ವಿಶ್ವಾಸದ ಮಾತುಗಳನ್ನಾಡಿದ ಅವರು ರಾಜ್ಯದಲ್ಲಿ ಸಾಕಷ್ಟು ಯೋಜನೆಗಳನ್ನು ನೀಡಿದ್ದೇವೆ ಎಂದರು.

ಪುಟ್ಟರಂಗಶೆಟ್ಟಿ ಹಣ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಅವರು ಸದ್ಯ ಈ ಬಗ್ಗೆ ತನಿಖೆ ನಡೆಯುತ್ತಿದೆ. ತನಿಖೆ ಮುಗಿದ ಮೇಲೆ ಅದರ ಬಗ್ಗೆ ಯೋಚಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ