ಆ್ಯಪ್ನಗರ

ಪ್ರತ್ಯೇಕ ಧರ್ಮದ ಹೇಳಿಕೆಗೆ ಖಂಡನೆ

ಹುಬ್ಬಳ್ಳಿ : ಪೇಜಾವರ ಶ್ರೀಗಳು ಮತ್ತು ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರು ಲಿಂಗಾಯತ ಪ್ರತ್ಯೇಕ ಧರ್ಮದ ಕುರಿತು ನೀಡಿದ ಹೇಳಿಕೆಯನ್ನು ಜಾಗತಿಕ ಲಿಂಗಾಯತ ಮಹಾಸಭಾ ತೀವ್ರವಾಗಿ ಖಂಡಿಸಿದೆ.

Vijaya Karnataka 16 Jan 2019, 5:00 am
ಹುಬ್ಬಳ್ಳಿ : ಪೇಜಾವರ ಶ್ರೀಗಳು ಮತ್ತು ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರು ಲಿಂಗಾಯತ ಪ್ರತ್ಯೇಕ ಧರ್ಮದ ಕುರಿತು ನೀಡಿದ ಹೇಳಿಕೆಯನ್ನು ಜಾಗತಿಕ ಲಿಂಗಾಯತ ಮಹಾಸಭಾ ತೀವ್ರವಾಗಿ ಖಂಡಿಸಿದೆ.
Vijaya Karnataka Web the condemnation of a separate religion statement
ಪ್ರತ್ಯೇಕ ಧರ್ಮದ ಹೇಳಿಕೆಗೆ ಖಂಡನೆ


ಪೇಜಾವರ ಶ್ರೀಗಳು ಬಸವಣ್ಣ ಶಿವಭಕ್ತರಾಗಿದ್ದು. ಲಿಂಗಾಯತರು ಹಿಂದೂಗಳೇ ಅಲ್ಲ ಎಂದು ಹೇಳುವುದರಲ್ಲಿ ಅರ್ಥವಿಲ್ಲ. ಕೇಂದ್ರ ಸರಕಾರ ಪ್ರತ್ಯೇಕ ಧರ್ಮದ ಶಿಫಾರಸ್ಸು ತಿರಸ್ಕರಿಸಿದ್ದು ಸರಿ ಇದೆ ಎಂದು ಹೇಳಿಕೆ ನೀಡಿದ್ದರು. ಇನ್ನು ಶಾಮನೂರು ಶಿವಶಂಕರಪ್ಪ ಅವರು ಲಿಂಗಾಯತ ಹೋರಾಟ ಲಂಚದ ಹಣದಲ್ಲಿ ನಡೆಯಿತು ಎಂದು ಹೇಳಿದ್ದರಲ್ಲದೇ ಗೃಹ ಸಚಿವ ಎಂ.ಬಿ.ಪಾಟೀಲ್‌ ಅವರ ವಿರುದ್ಧ ಕಿಡಿಕಾರಿದ್ದರು. ಪೇಜಾವರ ಶ್ರೀ ಮತ್ತು ಶಾಮನೂರು ಶಿವಶಂಕರಪ್ಪ ಅವರ ಹೇಳಿಕೆಯನ್ನು ಜಾಗತಿಕ ಲಿಂಗಾಯತ ಮಹಾಸಭಾ ಖಂಡಿಸಿದ್ದು, ಲಿಂಗಾಯತ ಧರ್ಮದ ಬಗ್ಗೆ ಸಂಪೂರ್ಣ ತಿಳಿದುಕೊಳ್ಳುವಂತೆ ಮಹಾಸಭಾದ ಅಧ್ಯಕ್ಷ ಎಂ.ವಿ. ಗೊಂಗಡಶೆಟ್ಟಿ ಮತ್ತು ಕಾರ್ಯದರ್ಶಿ ಲೋಕೇಶ ಕೊರವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ