ಆ್ಯಪ್ನಗರ

ಗೊಬ್ಬರ ಖರೀದಿಯಲ್ಲಿ ಕಿರಿಕಿರಿ ಮಾಡಿದ್ರೆ ಕ್ರಿಮಿನಲ್‌ ಕೇಸ್‌

ಧಾರವಾಡ :ರಸಗೊಬ್ಬರ ಮಾರಾಟ ಮಾಡುವ ಸೊಸೈಟಿ ಹಾಗೂ ಅಂಗಡಿಗಳಲ್ಲಿ ವಿತರಕರು ಹಾಗೂ ರಸಗೊಬ್ಬರ ಕಂಪನಿಗಳ ಪ್ರತಿನಿಧಿಗಳು ರಸಗೊಬ್ಬರದೊಂದಿಗೆ ಇತರೆ ಉತ್ಪನಗಳ ಖರೀದಿಗೆ ರೈತರನ್ನು ಒತ್ತಾಯಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎಸ್‌.ಬಿ.ಬೊಮ್ಮನಹಳ್ಳಿ ಎಚ್ಚರಿಸಿದರು.

Vijaya Karnataka 9 Jun 2018, 5:00 am
ಧಾರವಾಡ :ರಸಗೊಬ್ಬರ ಮಾರಾಟ ಮಾಡುವ ಸೊಸೈಟಿ ಹಾಗೂ ಅಂಗಡಿಗಳಲ್ಲಿ ವಿತರಕರು ಹಾಗೂ ರಸಗೊಬ್ಬರ ಕಂಪನಿಗಳ ಪ್ರತಿನಿಧಿಗಳು ರಸಗೊಬ್ಬರದೊಂದಿಗೆ ಇತರೆ ಉತ್ಪನಗಳ ಖರೀದಿಗೆ ರೈತರನ್ನು ಒತ್ತಾಯಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎಸ್‌.ಬಿ.ಬೊಮ್ಮನಹಳ್ಳಿ ಎಚ್ಚರಿಸಿದರು.
Vijaya Karnataka Web the criminal case is annoying with the purchase of fertilizers
ಗೊಬ್ಬರ ಖರೀದಿಯಲ್ಲಿ ಕಿರಿಕಿರಿ ಮಾಡಿದ್ರೆ ಕ್ರಿಮಿನಲ್‌ ಕೇಸ್‌


ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಕೃಷಿ, ತೋಟಗಾರಿಕೆ ಇಲಾಖೆ ಅಧಿಕಾರಿಗಳ ಹಾಗೂ ರಸಗೊಬ್ಬರ ಪೂರೈಕೆದಾರರು ಮತ್ತು ವಿತರಕರ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಬಿತ್ತನೆ ಗುರಿಗೆ ಅನುಗುಣವಾಗಿ ಅಗತ್ಯ ಪ್ರಮಾಣದಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರ ದಾಸ್ತಾನು ಹೊಂದಲಾಗಿದೆ. ಉತ್ತಮ ಮಳೆಯಾಗುತ್ತಿರುವದಿಂದ ರೈತರು ಬಿತ್ತನೆ ಆತುರದಲ್ಲಿ ಇದ್ದಾರೆ. ರಸಗೊಬ್ಬರ ವಿತರಕರು ಹೆಚ್ಚಿನ ಸಿಬ್ಬಂದಿಯನ್ನು ನೇಮಿಸಿ ಹಗಲು ರಾತ್ರಿ ಎನ್ನದೆ ರೈತರ ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರವನ್ನು ವಿತರಿಸಬೇಕು ಎಂದು ಹೇಳಿದರು.

ನಿರಂತರವಾಗಿ ಮಳೆಯಾಗುತ್ತಿದ್ದು, ರೈತರು ಸಿಕ್ಕ ಸ್ವಲ್ಪ ಸಮಯದ ಮಳೆ ಬಿಡುವಿನಲ್ಲಿ ಬಿತ್ತನೆಗೆ ಮುಂದಾಗುತ್ತಾರೆ. ಆದ್ದರಿಂದ ರಸಗೊಬ್ಬರ ವಿತರಕರು ರೈತರ ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ವಿತರಿಸಬೇಕು ಎಂದರು.

ಪ್ರತಿ ರಸಗೊಬ್ಬರ ಮಾರಾಟದ ಕೇಂದ್ರದಲ್ಲಿ ಸಂದರ್ಶಕರ ಪುಸ್ತಕ ನಿರ್ವಹಿಸಬೇಕು. ಅದರಲ್ಲಿ ಭೇಟಿ ನೀಡಿದ ಅಧಿಕಾರಿಗಳು ಮಾಹಿತಿಯನ್ನು ದಾಖಲಿಸಬೇಕು. ಈ ಕುರಿತು ಅನುಸರಣ ವರದಿಯನ್ನು ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಿಗೆ ಸೂಚಿಸಿದರು.

ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಟಿ.ಎಸ್‌. ರುದ್ರೇಶಪ್ಪ ಮಾತನಾಡಿ, ಜಿಲ್ಲೆಯಲ್ಲಿ ದಾಸ್ತಾನು ಇರುವ ರಸಗೊಬ್ಬರ, ಬಿತ್ತನೆ ಬೀಜ, ರಸಗೊಬ್ಬರ ಮಾರಾಟ ಕೇಂದ್ರಗಳು, ಬೀಜ ವಿತರಣಾ ಕೆಂದ್ರಗಳು ಸೇರಿದಂತೆ ಅಗತ್ಯ ಮಾಹಿತಿಯನ್ನು ಸಭೆಗೆ ವಿವರಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ರಮೇಶ ಕಳಸದ, ಉಪವಿಭಾಗಾಧಿಕಾರಿ ಪಿ.ಜಯಮಾಧವ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಡಾ.ರಾಮಚಂದ್ರ.ಕೆ, ಜಿಲ್ಲಾ ಸಂಖ್ಯಾಧಿಕಾರಿ ಡಿ.ವಿ. ಮಡಿವಾಳ, ಜಂಟಿ ನಿರ್ದೇಶಕರ ಕಚೇರಿಯ ಸಹಾಯಕ ನಿರ್ದೇಶಕಿ ಎಂ.ಎಂ. ನಾಡಿಗೇರ, ಸೇರಿದಂತೆ ಜಿಲ್ಲೆಯ ಎಲ್ಲ ಸಹಾಯಕ ಕೃಷಿ ನಿರ್ದೇಶಕರು, ಕೃಷಿ ಮಾರುಕಟ್ಟೆ ಇಲಾಖೆ ಅಧಿಕಾರಿಗಳು, ರಸಗೊಬ್ಬರ ಕಂಪನಿಗಳ ಪ್ರತಿನಿಧಿಗಳು, ರಸಗೊಬ್ಬರ ಮಾರಾಟ ಪ್ರತಿನಿಧಿಗಳು ಮತ್ತು ಸೊಸೈಟಿ, ರಸಗೊಬ್ಬರ ಮಾರಾಟ ಅಂಗಡಿಗಳ ಮಾಲಿಕರು ಪಾಲ್ಗೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ